HomeUncategorizedಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ...!

ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

- Advertisement -
- Advertisement -

ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿ ಅಷ್ಟು ಲಗುಬಗೆಯಲ್ಲಿ ತೊಲಗುತ್ತಿರಲಿಲ್ಲ. ನೆನಪಿಡೋಣ, ಈಗ ದೇಶದ ಕೈಕಾಲುಗಳ ಕಟ್ಟಿ ಹಾಕಿ ಬಾಯಿಗೆ ಬೀಗ ಜಡಿಯಲು ಮುಂದಾಗಿರುವ ಪ್ರಭುಗಳೂ ಆಗ ತುರ್ತುಪರಿಸ್ಥಿತಿ ವಿರುದ್ಧ ಮಾತಾಡಿದ್ದರು… ಸರ್ವಾಧಿಕಾರದ ವಿರುದ್ಧ ಪ್ರಜೆಗಳ ಎಚ್ಚರಿಸಲು ‘ಕಹಳೆ’, ’ದುಂದುಭಿ’ ಮುಂತಾದ ಭೂಗತ ಪತ್ರಿಕೆಗಳನ್ನು ಹೊರತಂದಿದ್ದರು. ಇತಿಹಾಸದ ಈ ಭಾಗವನ್ನು ಮರೆತಂತೆ ನಟಿಸತೊಡಗಿದ್ದಾರೆ ಅವರು.

ನಿರಂತರ ಎಚ್ಚರವೇ ಜೀವಂತ ಜನತಂತ್ರಕ್ಕೆ ನಾವು ತೆರಬೇಕಾದ ಬೆಲೆ. ಇತಿಹಾಸ ಮರುಕಳಿಸುತ್ತದೆ ಎಂಬ ಮಾತಿದೆ. ವಿವೇಕದ ಮಾತುಗಳು ಹುಸಿಯಾಗುವುದಿಲ್ಲ. ಇತಿಹಾಸ ದಿಟವಾಗಿಯೂ ಮರುಕಳಿಸಿದೆ. ಆದರೆ ನಾಜೀ ಜರ್ಮನಿಯ ಇತಿಹಾಸ ಭಾರತದ ಭೂಪ್ರದೇಶದಲ್ಲಿ ಮರುಕಳಿಸಿದೆ. ಇದರ ಮುಂದೆ ಇಂದಿರಾ ಗಾಂಧೀ ಅವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿ ಕೇವಲ ವನವಿಹಾರ ಸಮಾನ. ಡಿಸೆಂಬರ್ 21-22ರಂದು ಮೈಸೂರಿನಲ್ಲಿ ಮಾಧ್ಯಮ ಮತ್ತು ಜನತಂತ್ರ ಕುರಿತ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧೀಯವರ ಮೊಮ್ಮಗ ರಾಜಮೋಹನಗಾಂಧೀ ಅವರು ಬಳಸಿದ ಪದವಿದು – ‘ವನವಿಹಾರ’. Emergency was just a picnic before what is happening to the Country now ಎಂಬುದಾಗಿ ಅವರು ಉದ್ಗರಿಸಿದ್ದುಂಟು.

ಸತ್ತು ಹೋಗಿದೆಯೆಂದೇ ಭಾವಿಸಲಾಗಿದ್ದ ವಿದ್ಯಾರ್ಥಿ ಚಳವಳಿ ಗರಿಕೆಯಂತೆ ಮೊಳೆತು ಚಿಗುರಿದೆ. ದೇಶದ ಮೂಲೆ ಮೂಲೆಗಳಲ್ಲಿ ವ್ಯಾಪಿಸಿ ಹಸಿರೊಡೆದಿದೆ. ಜೆ.ಪಿ.ಆಂದೋಲನದಲ್ಲಿ ಬೆರೆತು ಭುಗಿಲೆದ್ದಿದ್ದ ಅಂದಿನ ಆ ಶಕ್ತಿಶಾಲಿ ವಿದ್ಯಾರ್ಥಿ ಚಳವಳಿಯಲ್ಲಿ ಇಂದಿನ ಪ್ರಭುಗಳಲ್ಲಿ ಅನೇಕರೂ ಮತ್ತು ಪರಿವಾರದ ಸಂಘಟನೆಗಳೂ ಭಾಗವಹಿಸಿದ್ದವು. ದೇಶವನ್ನು ದಾಸ್ಯದ ನೊಗದಿಂದ ಬಿಡಿಸಬೇಕೆಂದು ಘರ್ಜಿಸಿದ್ದವು. ಪ್ರಜೆಗಳು ಬಂದರು ಸಿಂಹಾಸನ ಖಾಲಿ ಮಾಡಿರಿ ಎಂಬ ಕವಿ ರಾಮಧಾರಿ ಸಿಂಗ್ ದಿನಕರ್ ಅವರ ಕ್ರಾಂತಿಗೀತೆಗೆ ದನಿಗೂಡಿಸಿ ಹಾಡಿದ್ದವು. ಇಂದು ಆ ಅವೇ ಶಕ್ತಿಗಳು-ಸಂಘಟನೆಗಳು ಸಿಂಹಾಸನ ಏರಿ ಕುಳಿತಿವೆ. ಪ್ರಜೆಗಳನ್ನು ಧಿಕ್ಕರಿಸಿವೆ. ದೇಶದ ಕೊರಳು ಮತ್ತೊಂದು ಬಗೆಯ ದಾಸ್ಯದ ನೊಗಕ್ಕೆ ಹೂಡಲ್ಪಡುತ್ತಿದೆ. ವಿದ್ಯಾರ್ಥಿ ಚಳವಳಿಗೆ ದೇಶದ್ರೋಹದ ಹೆಸರಿಡಲಾಗುತ್ತಿದೆ. ಸುಳ್ಳು ಸುದ್ದಿಗಳು ಮತ್ತು ಮಿಥ್ಯಾಪ್ರಚಾರದ ವಾಟ್ಸ್ಯಾಪ್ ಯೂನಿವರ್ಸಿಟಿಗಳನ್ನು ಕಟ್ಟಿ ನಿಲ್ಲಿಸಲಾಗುತ್ತಿದೆ. ಅರಿವಿನ ಮತ್ತು ಸಮಾನತೆಯ ಬೆಳಕನ್ನು ಹಂಚುವ ನಿಜದ ವಿಶ್ವವಿದ್ಯಾಲಯಗಳನ್ನು ಕೆಡವುವ ಕಾರಸ್ಥಾನ ಜರುಗಿದೆ.

ದಮನದ ವಿರುದ್ಧ ಅನ್ಯಾಯಕ್ಕೆ ಎದುರಾಗಿ ವಿದ್ಯಾರ್ಥಿಶಕ್ತಿ ತೋರತೊಡಗಿರುವ ಸಾತ್ವಿಕ ಕೆಚ್ಚು ವಿವೇಕದ ದೊಂದಿಯನ್ನು ಸಮಾಜಶಕ್ತಿ ಎತ್ತಿ ಹಿಡಿಯಬೇಕಿದೆ. ತಡಮಾಡಿದರೆ ಸರದಿಯ ಪ್ರಕಾರ ಕಾಲಬುಡಕ್ಕೆ ಬಂದೀತು… ಬಲು ತುಟ್ಟಿಯಾಗಿ ಪರಿಣಮೀಸೀತು… ಮತ್ತು…ದುರಿತ ಕಾಲದ ಬಹುಜನ ಭಾರತ ಓದಿಕೊಳ್ಳಬೇಕಿರುವ ಕೆಲ ಕವಿತೆಗಳು ಇಲ್ಲಿವೆ…

ಆಡು, ಮಾತಾಡು
ತುಟಿಗಳಿಗೆ ಅಂಕೆ ಇಲ್ಲ
ಆಡು, ಮಾತಾಡು
ನಾಲಗೆ ಇನ್ನೂ ನಿನ್ನದೇ
ಆಡು, ಮಾತಾಡು,
ದೇಹ ನಿನ್ನ ಸ್ವಂತದ್ದು
ಆಡು, ಮಾತಾಡು,
ಜೀವ ಹಾರಿ ಹೋಗಿಲ್ಲ
ಹಾಡು ಮಾತಾಡು

ನೋಡು, ಕಮ್ಮಾರನ ಕುಲುಮೆಯಲಿ
ಭುಗಿಲೆದ್ದಿದೆ ಜ್ವಾಲೆ, ಕೆಂಪೇರಿದೆ ಲೋಹ,
ಸಡಿಲಾಗುತ್ತಿದೆ ಬೀಗಗಳ ಬಾಯಿ
ಮುರಿಯುತ್ತಿದೆ ಸರಪಳಿಗಳ ಕೀಲು.
ದೇಹ ನಾಲಗೆ ಸತ್ತು ಹೋಗುವ ಮುಂಚಿನ
ಈ ಎರಡು ಗಳಿಗೆಯೇ ಸಾಕು
ಆಡು, ಮಾತಾಡು

ಸತ್ಯ ಇನ್ನೂ ಉಸಿರಾಡುತಿದೆ
ಆಡು, ಮಾತಾಡು
ಹೇಳಲೇಬೇಕಾದ್ದು, ಹೇಳಿಯೇಬಿಡು
ಆಡು ಮಾತಾಡು.
(ಫೈಜ್ ಅಹ್ಮದ್ ಫೈಜ್- ಅನುವಾದ- ಬಾಗೇಶ್ರೀ)

ಗಂಟೆ
ಫೋನಿನ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಬಾಗಿಲ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಅಲಾರಂ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಒಂದು ದಿನ
ಮರಣದ ಗಂಟೆ ಮೊಳಗಿತು…
ಗಡಿಬಿಡಿ ಮಾಡಿ ಎದ್ದು ಕುಳಿತೆ
ನಾನಿರುವೆ.. ನಾನಿರುವೆ.. ನಾನಿರುವೆ..
ಮರಣ ಹೇಳಿತು-
ನಿದ್ದೆ ಹೋಗಯ್ಯಾ ಈಗ ಮಗ್ಗಲು ಬದಲಿಸಿ
(ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಕುಂವರ್ ನಾರಾಯಣ್)

ಅವರು ಮೊದಲು ಬಂದದ್ದು..
ಅವರು ಮೊದಲು ಬಂದದ್ದು ಕಮ್ಯೂನಿಸ್ಟರ ಎತ್ತಿ ಹಾಕಿಕೊಳ್ಳಲು
ಮತ್ತು ನಾನು ತುಟಿ ತೆರೆಯಲಿಲ್ಲ
ಯಾಕೆಂದ್ರೆ ನಾನು ಕಮ್ಯೂನಿಸ್ಟ್ ಆಗಿರಲಿಲ್ಲ

ನಂತರ ಅವರು ಬಂದರು ಸಮಾಜವಾದಿಗಳ ಎತ್ತಿ ಹಾಕಿಕೊಂಡು ಹೋಗಲು
ಮತ್ತು ನಾನು ಪ್ರತಿಭಟಿಸಲಿಲ್ಲ
ಯಾಕೆಂದ್ರೆ ನಾನು ಸಮಾಜವಾದಿ ಆಗಿರಲಿಲ್ಲ,

ಆನಂತರ ಅವರು ಬಂದರು ಕಾರ್ಮಿಕ ನಾಯಕರನ್ನು ಹಿಡಿದೊಯ್ಯಲು
ಮತ್ತು ನಾನು ಬಾಯಿ ಹೊಲಿದುಕೊಂಡಿದ್ದೆ
ಯಾಕೆಂದ್ರೆ ನಾನು ಕಾರ್ಮಿಕ ನಾಯಕನಾಗಿರಲಿಲ್ಲ

ತದನಂತರವೂ ಅವರು ಬಂದರು ಯಹೂದಿಗಳನ್ನು ಎಳೆದೊಯ್ಯಲು
ಮತ್ತು ಆಗಲೂ ನಾನು ದನಿ ಎತ್ತಲಿಲ್ಲ
ಯಾಕೆಂದ್ರೆ ನಾನು ಯಹೂದಿಯೇನೂ ಆಗಿರಲಿಲ್ಲ

ತರುವಾಯ ಅವರು ಬಂದೇ ಬಂದರು…
ನನ್ನನ್ನು ಕೈದು ಮಾಡಲು
ಮತ್ತು ಆಗ ಯಾರೂ ಉಳಿದಿರಲಿಲ್ಲ
ಕೊರಳೆತ್ತಲು, ನನ್ನ ಸಲುವಾಗಿ.
(- ಮಾರ್ಟಿನ್ ನಿಮೋಲರ್, ಹಿಟ್ಲರನ ಅಭಿಮಾನಿಯಾಗಿದ್ದು ವಿರೋಧಿಯಾಗಿ ಪರಿವರ್ತನೆಗೊಂಡ ಪಾದ್ರಿ )

ರೊಟ್ಟಿ ಮತ್ತು ಸಂಸತ್ತು
ಒಬ್ಬ ಮನುಷ್ಯ
ರೊಟ್ಟಿ ಬೇಯಿಸ್ತಾನೆ,
ಒಬ್ಬ ಮನುಷ್ಯ ರೊಟ್ಟಿ ತಿಂತಾನೆ
ಮೂರನೆಯ ಮನುಷ್ಯನೂ ಒಬ್ಬನಿದ್ದಾನೆ
ಅವನು ರೊಟ್ಟಿಯನ್ನು ಬೇಯಿಸುವುದೂ ಇಲ್ಲ ತಿನ್ನುವುದೂ ಇಲ್ಲ
ಅವನು ಕೇವಲ ರೊಟ್ಟಿಯೊಂದಿಗೆ ಆಟ ಆಡ್ತಾನೆ
ಯಾರು ಈ ಮೂರನೆಯ ಮನುಷ್ಯ?
ನನ್ನ ದೇಶದ ಸಂಸದ ಮೌನ ಧರಿಸಿದ್ದಾನೆ.
(-ಧೂಮಿಲ್)

ಅವರು ಭಯಪಡುತ್ತಾರೆ
ಅವರು ಭಯಪಡುತ್ತಾರೆ
ಯಾವುದರ ಬಗ್ಗೆ ಅವರಿಗೆ ಭಯ ಅವರಿಗೆ
ಧನ ದೌಲತ್ತು
ಸಿಡುಗುಂಡು, ಸುಡುಮದ್ದು, ಪೊಲೀಸ್ ಫೌಜು ಸರ್ವಸ್ವ ಇದ್ದಾಗ್ಯೂ
ಅವರು ಭಯ ಪಡುತ್ತಾರೆ
ಯಾಕೆಂದ್ರೆ ಒಂದಲ್ಲ ಒಂದು ದಿನ
ಹತಾರುಗಳಿರದ ಬರಿಗೈಗಳ ದೀನ ದರಿದ್ರ ಜನ
ಅವರನ್ನು ಕಂಡು
ಭಯಪಡುವುದ
ನಿಲ್ಲಿಸಿಬಿಡುತ್ತಾರೆ
(ಗೋರಖನಾಥ ಪಾಂಡೆ)

ಮುರಿದು ಸುರಿಯಲಿ ಸಾವಿರ ಸಿಡಿಲುಗಳು

ಬಡಿದು ಬೀಸಲಿ ಲಕ್ಷ ಬಿರುಗಾಳಿಗಳು

ಅರಳಿಯೇ ಅರಳಲಿವೆ ಅರಳಬೇಕಿರುವ ಹೂವುಗಳು

(ಸಾಹಿರ್ ಲೂಧಿಯಾನ್ವಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....