HomeUncategorizedಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ...!

ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

- Advertisement -
- Advertisement -

ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿ ಅಷ್ಟು ಲಗುಬಗೆಯಲ್ಲಿ ತೊಲಗುತ್ತಿರಲಿಲ್ಲ. ನೆನಪಿಡೋಣ, ಈಗ ದೇಶದ ಕೈಕಾಲುಗಳ ಕಟ್ಟಿ ಹಾಕಿ ಬಾಯಿಗೆ ಬೀಗ ಜಡಿಯಲು ಮುಂದಾಗಿರುವ ಪ್ರಭುಗಳೂ ಆಗ ತುರ್ತುಪರಿಸ್ಥಿತಿ ವಿರುದ್ಧ ಮಾತಾಡಿದ್ದರು… ಸರ್ವಾಧಿಕಾರದ ವಿರುದ್ಧ ಪ್ರಜೆಗಳ ಎಚ್ಚರಿಸಲು ‘ಕಹಳೆ’, ’ದುಂದುಭಿ’ ಮುಂತಾದ ಭೂಗತ ಪತ್ರಿಕೆಗಳನ್ನು ಹೊರತಂದಿದ್ದರು. ಇತಿಹಾಸದ ಈ ಭಾಗವನ್ನು ಮರೆತಂತೆ ನಟಿಸತೊಡಗಿದ್ದಾರೆ ಅವರು.

ನಿರಂತರ ಎಚ್ಚರವೇ ಜೀವಂತ ಜನತಂತ್ರಕ್ಕೆ ನಾವು ತೆರಬೇಕಾದ ಬೆಲೆ. ಇತಿಹಾಸ ಮರುಕಳಿಸುತ್ತದೆ ಎಂಬ ಮಾತಿದೆ. ವಿವೇಕದ ಮಾತುಗಳು ಹುಸಿಯಾಗುವುದಿಲ್ಲ. ಇತಿಹಾಸ ದಿಟವಾಗಿಯೂ ಮರುಕಳಿಸಿದೆ. ಆದರೆ ನಾಜೀ ಜರ್ಮನಿಯ ಇತಿಹಾಸ ಭಾರತದ ಭೂಪ್ರದೇಶದಲ್ಲಿ ಮರುಕಳಿಸಿದೆ. ಇದರ ಮುಂದೆ ಇಂದಿರಾ ಗಾಂಧೀ ಅವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿ ಕೇವಲ ವನವಿಹಾರ ಸಮಾನ. ಡಿಸೆಂಬರ್ 21-22ರಂದು ಮೈಸೂರಿನಲ್ಲಿ ಮಾಧ್ಯಮ ಮತ್ತು ಜನತಂತ್ರ ಕುರಿತ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧೀಯವರ ಮೊಮ್ಮಗ ರಾಜಮೋಹನಗಾಂಧೀ ಅವರು ಬಳಸಿದ ಪದವಿದು – ‘ವನವಿಹಾರ’. Emergency was just a picnic before what is happening to the Country now ಎಂಬುದಾಗಿ ಅವರು ಉದ್ಗರಿಸಿದ್ದುಂಟು.

ಸತ್ತು ಹೋಗಿದೆಯೆಂದೇ ಭಾವಿಸಲಾಗಿದ್ದ ವಿದ್ಯಾರ್ಥಿ ಚಳವಳಿ ಗರಿಕೆಯಂತೆ ಮೊಳೆತು ಚಿಗುರಿದೆ. ದೇಶದ ಮೂಲೆ ಮೂಲೆಗಳಲ್ಲಿ ವ್ಯಾಪಿಸಿ ಹಸಿರೊಡೆದಿದೆ. ಜೆ.ಪಿ.ಆಂದೋಲನದಲ್ಲಿ ಬೆರೆತು ಭುಗಿಲೆದ್ದಿದ್ದ ಅಂದಿನ ಆ ಶಕ್ತಿಶಾಲಿ ವಿದ್ಯಾರ್ಥಿ ಚಳವಳಿಯಲ್ಲಿ ಇಂದಿನ ಪ್ರಭುಗಳಲ್ಲಿ ಅನೇಕರೂ ಮತ್ತು ಪರಿವಾರದ ಸಂಘಟನೆಗಳೂ ಭಾಗವಹಿಸಿದ್ದವು. ದೇಶವನ್ನು ದಾಸ್ಯದ ನೊಗದಿಂದ ಬಿಡಿಸಬೇಕೆಂದು ಘರ್ಜಿಸಿದ್ದವು. ಪ್ರಜೆಗಳು ಬಂದರು ಸಿಂಹಾಸನ ಖಾಲಿ ಮಾಡಿರಿ ಎಂಬ ಕವಿ ರಾಮಧಾರಿ ಸಿಂಗ್ ದಿನಕರ್ ಅವರ ಕ್ರಾಂತಿಗೀತೆಗೆ ದನಿಗೂಡಿಸಿ ಹಾಡಿದ್ದವು. ಇಂದು ಆ ಅವೇ ಶಕ್ತಿಗಳು-ಸಂಘಟನೆಗಳು ಸಿಂಹಾಸನ ಏರಿ ಕುಳಿತಿವೆ. ಪ್ರಜೆಗಳನ್ನು ಧಿಕ್ಕರಿಸಿವೆ. ದೇಶದ ಕೊರಳು ಮತ್ತೊಂದು ಬಗೆಯ ದಾಸ್ಯದ ನೊಗಕ್ಕೆ ಹೂಡಲ್ಪಡುತ್ತಿದೆ. ವಿದ್ಯಾರ್ಥಿ ಚಳವಳಿಗೆ ದೇಶದ್ರೋಹದ ಹೆಸರಿಡಲಾಗುತ್ತಿದೆ. ಸುಳ್ಳು ಸುದ್ದಿಗಳು ಮತ್ತು ಮಿಥ್ಯಾಪ್ರಚಾರದ ವಾಟ್ಸ್ಯಾಪ್ ಯೂನಿವರ್ಸಿಟಿಗಳನ್ನು ಕಟ್ಟಿ ನಿಲ್ಲಿಸಲಾಗುತ್ತಿದೆ. ಅರಿವಿನ ಮತ್ತು ಸಮಾನತೆಯ ಬೆಳಕನ್ನು ಹಂಚುವ ನಿಜದ ವಿಶ್ವವಿದ್ಯಾಲಯಗಳನ್ನು ಕೆಡವುವ ಕಾರಸ್ಥಾನ ಜರುಗಿದೆ.

ದಮನದ ವಿರುದ್ಧ ಅನ್ಯಾಯಕ್ಕೆ ಎದುರಾಗಿ ವಿದ್ಯಾರ್ಥಿಶಕ್ತಿ ತೋರತೊಡಗಿರುವ ಸಾತ್ವಿಕ ಕೆಚ್ಚು ವಿವೇಕದ ದೊಂದಿಯನ್ನು ಸಮಾಜಶಕ್ತಿ ಎತ್ತಿ ಹಿಡಿಯಬೇಕಿದೆ. ತಡಮಾಡಿದರೆ ಸರದಿಯ ಪ್ರಕಾರ ಕಾಲಬುಡಕ್ಕೆ ಬಂದೀತು… ಬಲು ತುಟ್ಟಿಯಾಗಿ ಪರಿಣಮೀಸೀತು… ಮತ್ತು…ದುರಿತ ಕಾಲದ ಬಹುಜನ ಭಾರತ ಓದಿಕೊಳ್ಳಬೇಕಿರುವ ಕೆಲ ಕವಿತೆಗಳು ಇಲ್ಲಿವೆ…

ಆಡು, ಮಾತಾಡು
ತುಟಿಗಳಿಗೆ ಅಂಕೆ ಇಲ್ಲ
ಆಡು, ಮಾತಾಡು
ನಾಲಗೆ ಇನ್ನೂ ನಿನ್ನದೇ
ಆಡು, ಮಾತಾಡು,
ದೇಹ ನಿನ್ನ ಸ್ವಂತದ್ದು
ಆಡು, ಮಾತಾಡು,
ಜೀವ ಹಾರಿ ಹೋಗಿಲ್ಲ
ಹಾಡು ಮಾತಾಡು

ನೋಡು, ಕಮ್ಮಾರನ ಕುಲುಮೆಯಲಿ
ಭುಗಿಲೆದ್ದಿದೆ ಜ್ವಾಲೆ, ಕೆಂಪೇರಿದೆ ಲೋಹ,
ಸಡಿಲಾಗುತ್ತಿದೆ ಬೀಗಗಳ ಬಾಯಿ
ಮುರಿಯುತ್ತಿದೆ ಸರಪಳಿಗಳ ಕೀಲು.
ದೇಹ ನಾಲಗೆ ಸತ್ತು ಹೋಗುವ ಮುಂಚಿನ
ಈ ಎರಡು ಗಳಿಗೆಯೇ ಸಾಕು
ಆಡು, ಮಾತಾಡು

ಸತ್ಯ ಇನ್ನೂ ಉಸಿರಾಡುತಿದೆ
ಆಡು, ಮಾತಾಡು
ಹೇಳಲೇಬೇಕಾದ್ದು, ಹೇಳಿಯೇಬಿಡು
ಆಡು ಮಾತಾಡು.
(ಫೈಜ್ ಅಹ್ಮದ್ ಫೈಜ್- ಅನುವಾದ- ಬಾಗೇಶ್ರೀ)

ಗಂಟೆ
ಫೋನಿನ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಬಾಗಿಲ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಅಲಾರಂ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಒಂದು ದಿನ
ಮರಣದ ಗಂಟೆ ಮೊಳಗಿತು…
ಗಡಿಬಿಡಿ ಮಾಡಿ ಎದ್ದು ಕುಳಿತೆ
ನಾನಿರುವೆ.. ನಾನಿರುವೆ.. ನಾನಿರುವೆ..
ಮರಣ ಹೇಳಿತು-
ನಿದ್ದೆ ಹೋಗಯ್ಯಾ ಈಗ ಮಗ್ಗಲು ಬದಲಿಸಿ
(ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಕುಂವರ್ ನಾರಾಯಣ್)

ಅವರು ಮೊದಲು ಬಂದದ್ದು..
ಅವರು ಮೊದಲು ಬಂದದ್ದು ಕಮ್ಯೂನಿಸ್ಟರ ಎತ್ತಿ ಹಾಕಿಕೊಳ್ಳಲು
ಮತ್ತು ನಾನು ತುಟಿ ತೆರೆಯಲಿಲ್ಲ
ಯಾಕೆಂದ್ರೆ ನಾನು ಕಮ್ಯೂನಿಸ್ಟ್ ಆಗಿರಲಿಲ್ಲ

ನಂತರ ಅವರು ಬಂದರು ಸಮಾಜವಾದಿಗಳ ಎತ್ತಿ ಹಾಕಿಕೊಂಡು ಹೋಗಲು
ಮತ್ತು ನಾನು ಪ್ರತಿಭಟಿಸಲಿಲ್ಲ
ಯಾಕೆಂದ್ರೆ ನಾನು ಸಮಾಜವಾದಿ ಆಗಿರಲಿಲ್ಲ,

ಆನಂತರ ಅವರು ಬಂದರು ಕಾರ್ಮಿಕ ನಾಯಕರನ್ನು ಹಿಡಿದೊಯ್ಯಲು
ಮತ್ತು ನಾನು ಬಾಯಿ ಹೊಲಿದುಕೊಂಡಿದ್ದೆ
ಯಾಕೆಂದ್ರೆ ನಾನು ಕಾರ್ಮಿಕ ನಾಯಕನಾಗಿರಲಿಲ್ಲ

ತದನಂತರವೂ ಅವರು ಬಂದರು ಯಹೂದಿಗಳನ್ನು ಎಳೆದೊಯ್ಯಲು
ಮತ್ತು ಆಗಲೂ ನಾನು ದನಿ ಎತ್ತಲಿಲ್ಲ
ಯಾಕೆಂದ್ರೆ ನಾನು ಯಹೂದಿಯೇನೂ ಆಗಿರಲಿಲ್ಲ

ತರುವಾಯ ಅವರು ಬಂದೇ ಬಂದರು…
ನನ್ನನ್ನು ಕೈದು ಮಾಡಲು
ಮತ್ತು ಆಗ ಯಾರೂ ಉಳಿದಿರಲಿಲ್ಲ
ಕೊರಳೆತ್ತಲು, ನನ್ನ ಸಲುವಾಗಿ.
(- ಮಾರ್ಟಿನ್ ನಿಮೋಲರ್, ಹಿಟ್ಲರನ ಅಭಿಮಾನಿಯಾಗಿದ್ದು ವಿರೋಧಿಯಾಗಿ ಪರಿವರ್ತನೆಗೊಂಡ ಪಾದ್ರಿ )

ರೊಟ್ಟಿ ಮತ್ತು ಸಂಸತ್ತು
ಒಬ್ಬ ಮನುಷ್ಯ
ರೊಟ್ಟಿ ಬೇಯಿಸ್ತಾನೆ,
ಒಬ್ಬ ಮನುಷ್ಯ ರೊಟ್ಟಿ ತಿಂತಾನೆ
ಮೂರನೆಯ ಮನುಷ್ಯನೂ ಒಬ್ಬನಿದ್ದಾನೆ
ಅವನು ರೊಟ್ಟಿಯನ್ನು ಬೇಯಿಸುವುದೂ ಇಲ್ಲ ತಿನ್ನುವುದೂ ಇಲ್ಲ
ಅವನು ಕೇವಲ ರೊಟ್ಟಿಯೊಂದಿಗೆ ಆಟ ಆಡ್ತಾನೆ
ಯಾರು ಈ ಮೂರನೆಯ ಮನುಷ್ಯ?
ನನ್ನ ದೇಶದ ಸಂಸದ ಮೌನ ಧರಿಸಿದ್ದಾನೆ.
(-ಧೂಮಿಲ್)

ಅವರು ಭಯಪಡುತ್ತಾರೆ
ಅವರು ಭಯಪಡುತ್ತಾರೆ
ಯಾವುದರ ಬಗ್ಗೆ ಅವರಿಗೆ ಭಯ ಅವರಿಗೆ
ಧನ ದೌಲತ್ತು
ಸಿಡುಗುಂಡು, ಸುಡುಮದ್ದು, ಪೊಲೀಸ್ ಫೌಜು ಸರ್ವಸ್ವ ಇದ್ದಾಗ್ಯೂ
ಅವರು ಭಯ ಪಡುತ್ತಾರೆ
ಯಾಕೆಂದ್ರೆ ಒಂದಲ್ಲ ಒಂದು ದಿನ
ಹತಾರುಗಳಿರದ ಬರಿಗೈಗಳ ದೀನ ದರಿದ್ರ ಜನ
ಅವರನ್ನು ಕಂಡು
ಭಯಪಡುವುದ
ನಿಲ್ಲಿಸಿಬಿಡುತ್ತಾರೆ
(ಗೋರಖನಾಥ ಪಾಂಡೆ)

ಮುರಿದು ಸುರಿಯಲಿ ಸಾವಿರ ಸಿಡಿಲುಗಳು

ಬಡಿದು ಬೀಸಲಿ ಲಕ್ಷ ಬಿರುಗಾಳಿಗಳು

ಅರಳಿಯೇ ಅರಳಲಿವೆ ಅರಳಬೇಕಿರುವ ಹೂವುಗಳು

(ಸಾಹಿರ್ ಲೂಧಿಯಾನ್ವಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...