HomeUncategorizedಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ...!

ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

- Advertisement -
- Advertisement -

ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿ ಅಷ್ಟು ಲಗುಬಗೆಯಲ್ಲಿ ತೊಲಗುತ್ತಿರಲಿಲ್ಲ. ನೆನಪಿಡೋಣ, ಈಗ ದೇಶದ ಕೈಕಾಲುಗಳ ಕಟ್ಟಿ ಹಾಕಿ ಬಾಯಿಗೆ ಬೀಗ ಜಡಿಯಲು ಮುಂದಾಗಿರುವ ಪ್ರಭುಗಳೂ ಆಗ ತುರ್ತುಪರಿಸ್ಥಿತಿ ವಿರುದ್ಧ ಮಾತಾಡಿದ್ದರು… ಸರ್ವಾಧಿಕಾರದ ವಿರುದ್ಧ ಪ್ರಜೆಗಳ ಎಚ್ಚರಿಸಲು ‘ಕಹಳೆ’, ’ದುಂದುಭಿ’ ಮುಂತಾದ ಭೂಗತ ಪತ್ರಿಕೆಗಳನ್ನು ಹೊರತಂದಿದ್ದರು. ಇತಿಹಾಸದ ಈ ಭಾಗವನ್ನು ಮರೆತಂತೆ ನಟಿಸತೊಡಗಿದ್ದಾರೆ ಅವರು.

ನಿರಂತರ ಎಚ್ಚರವೇ ಜೀವಂತ ಜನತಂತ್ರಕ್ಕೆ ನಾವು ತೆರಬೇಕಾದ ಬೆಲೆ. ಇತಿಹಾಸ ಮರುಕಳಿಸುತ್ತದೆ ಎಂಬ ಮಾತಿದೆ. ವಿವೇಕದ ಮಾತುಗಳು ಹುಸಿಯಾಗುವುದಿಲ್ಲ. ಇತಿಹಾಸ ದಿಟವಾಗಿಯೂ ಮರುಕಳಿಸಿದೆ. ಆದರೆ ನಾಜೀ ಜರ್ಮನಿಯ ಇತಿಹಾಸ ಭಾರತದ ಭೂಪ್ರದೇಶದಲ್ಲಿ ಮರುಕಳಿಸಿದೆ. ಇದರ ಮುಂದೆ ಇಂದಿರಾ ಗಾಂಧೀ ಅವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿ ಕೇವಲ ವನವಿಹಾರ ಸಮಾನ. ಡಿಸೆಂಬರ್ 21-22ರಂದು ಮೈಸೂರಿನಲ್ಲಿ ಮಾಧ್ಯಮ ಮತ್ತು ಜನತಂತ್ರ ಕುರಿತ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧೀಯವರ ಮೊಮ್ಮಗ ರಾಜಮೋಹನಗಾಂಧೀ ಅವರು ಬಳಸಿದ ಪದವಿದು – ‘ವನವಿಹಾರ’. Emergency was just a picnic before what is happening to the Country now ಎಂಬುದಾಗಿ ಅವರು ಉದ್ಗರಿಸಿದ್ದುಂಟು.

ಸತ್ತು ಹೋಗಿದೆಯೆಂದೇ ಭಾವಿಸಲಾಗಿದ್ದ ವಿದ್ಯಾರ್ಥಿ ಚಳವಳಿ ಗರಿಕೆಯಂತೆ ಮೊಳೆತು ಚಿಗುರಿದೆ. ದೇಶದ ಮೂಲೆ ಮೂಲೆಗಳಲ್ಲಿ ವ್ಯಾಪಿಸಿ ಹಸಿರೊಡೆದಿದೆ. ಜೆ.ಪಿ.ಆಂದೋಲನದಲ್ಲಿ ಬೆರೆತು ಭುಗಿಲೆದ್ದಿದ್ದ ಅಂದಿನ ಆ ಶಕ್ತಿಶಾಲಿ ವಿದ್ಯಾರ್ಥಿ ಚಳವಳಿಯಲ್ಲಿ ಇಂದಿನ ಪ್ರಭುಗಳಲ್ಲಿ ಅನೇಕರೂ ಮತ್ತು ಪರಿವಾರದ ಸಂಘಟನೆಗಳೂ ಭಾಗವಹಿಸಿದ್ದವು. ದೇಶವನ್ನು ದಾಸ್ಯದ ನೊಗದಿಂದ ಬಿಡಿಸಬೇಕೆಂದು ಘರ್ಜಿಸಿದ್ದವು. ಪ್ರಜೆಗಳು ಬಂದರು ಸಿಂಹಾಸನ ಖಾಲಿ ಮಾಡಿರಿ ಎಂಬ ಕವಿ ರಾಮಧಾರಿ ಸಿಂಗ್ ದಿನಕರ್ ಅವರ ಕ್ರಾಂತಿಗೀತೆಗೆ ದನಿಗೂಡಿಸಿ ಹಾಡಿದ್ದವು. ಇಂದು ಆ ಅವೇ ಶಕ್ತಿಗಳು-ಸಂಘಟನೆಗಳು ಸಿಂಹಾಸನ ಏರಿ ಕುಳಿತಿವೆ. ಪ್ರಜೆಗಳನ್ನು ಧಿಕ್ಕರಿಸಿವೆ. ದೇಶದ ಕೊರಳು ಮತ್ತೊಂದು ಬಗೆಯ ದಾಸ್ಯದ ನೊಗಕ್ಕೆ ಹೂಡಲ್ಪಡುತ್ತಿದೆ. ವಿದ್ಯಾರ್ಥಿ ಚಳವಳಿಗೆ ದೇಶದ್ರೋಹದ ಹೆಸರಿಡಲಾಗುತ್ತಿದೆ. ಸುಳ್ಳು ಸುದ್ದಿಗಳು ಮತ್ತು ಮಿಥ್ಯಾಪ್ರಚಾರದ ವಾಟ್ಸ್ಯಾಪ್ ಯೂನಿವರ್ಸಿಟಿಗಳನ್ನು ಕಟ್ಟಿ ನಿಲ್ಲಿಸಲಾಗುತ್ತಿದೆ. ಅರಿವಿನ ಮತ್ತು ಸಮಾನತೆಯ ಬೆಳಕನ್ನು ಹಂಚುವ ನಿಜದ ವಿಶ್ವವಿದ್ಯಾಲಯಗಳನ್ನು ಕೆಡವುವ ಕಾರಸ್ಥಾನ ಜರುಗಿದೆ.

ದಮನದ ವಿರುದ್ಧ ಅನ್ಯಾಯಕ್ಕೆ ಎದುರಾಗಿ ವಿದ್ಯಾರ್ಥಿಶಕ್ತಿ ತೋರತೊಡಗಿರುವ ಸಾತ್ವಿಕ ಕೆಚ್ಚು ವಿವೇಕದ ದೊಂದಿಯನ್ನು ಸಮಾಜಶಕ್ತಿ ಎತ್ತಿ ಹಿಡಿಯಬೇಕಿದೆ. ತಡಮಾಡಿದರೆ ಸರದಿಯ ಪ್ರಕಾರ ಕಾಲಬುಡಕ್ಕೆ ಬಂದೀತು… ಬಲು ತುಟ್ಟಿಯಾಗಿ ಪರಿಣಮೀಸೀತು… ಮತ್ತು…ದುರಿತ ಕಾಲದ ಬಹುಜನ ಭಾರತ ಓದಿಕೊಳ್ಳಬೇಕಿರುವ ಕೆಲ ಕವಿತೆಗಳು ಇಲ್ಲಿವೆ…

ಆಡು, ಮಾತಾಡು
ತುಟಿಗಳಿಗೆ ಅಂಕೆ ಇಲ್ಲ
ಆಡು, ಮಾತಾಡು
ನಾಲಗೆ ಇನ್ನೂ ನಿನ್ನದೇ
ಆಡು, ಮಾತಾಡು,
ದೇಹ ನಿನ್ನ ಸ್ವಂತದ್ದು
ಆಡು, ಮಾತಾಡು,
ಜೀವ ಹಾರಿ ಹೋಗಿಲ್ಲ
ಹಾಡು ಮಾತಾಡು

ನೋಡು, ಕಮ್ಮಾರನ ಕುಲುಮೆಯಲಿ
ಭುಗಿಲೆದ್ದಿದೆ ಜ್ವಾಲೆ, ಕೆಂಪೇರಿದೆ ಲೋಹ,
ಸಡಿಲಾಗುತ್ತಿದೆ ಬೀಗಗಳ ಬಾಯಿ
ಮುರಿಯುತ್ತಿದೆ ಸರಪಳಿಗಳ ಕೀಲು.
ದೇಹ ನಾಲಗೆ ಸತ್ತು ಹೋಗುವ ಮುಂಚಿನ
ಈ ಎರಡು ಗಳಿಗೆಯೇ ಸಾಕು
ಆಡು, ಮಾತಾಡು

ಸತ್ಯ ಇನ್ನೂ ಉಸಿರಾಡುತಿದೆ
ಆಡು, ಮಾತಾಡು
ಹೇಳಲೇಬೇಕಾದ್ದು, ಹೇಳಿಯೇಬಿಡು
ಆಡು ಮಾತಾಡು.
(ಫೈಜ್ ಅಹ್ಮದ್ ಫೈಜ್- ಅನುವಾದ- ಬಾಗೇಶ್ರೀ)

ಗಂಟೆ
ಫೋನಿನ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಬಾಗಿಲ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಅಲಾರಂ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಒಂದು ದಿನ
ಮರಣದ ಗಂಟೆ ಮೊಳಗಿತು…
ಗಡಿಬಿಡಿ ಮಾಡಿ ಎದ್ದು ಕುಳಿತೆ
ನಾನಿರುವೆ.. ನಾನಿರುವೆ.. ನಾನಿರುವೆ..
ಮರಣ ಹೇಳಿತು-
ನಿದ್ದೆ ಹೋಗಯ್ಯಾ ಈಗ ಮಗ್ಗಲು ಬದಲಿಸಿ
(ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಕುಂವರ್ ನಾರಾಯಣ್)

ಅವರು ಮೊದಲು ಬಂದದ್ದು..
ಅವರು ಮೊದಲು ಬಂದದ್ದು ಕಮ್ಯೂನಿಸ್ಟರ ಎತ್ತಿ ಹಾಕಿಕೊಳ್ಳಲು
ಮತ್ತು ನಾನು ತುಟಿ ತೆರೆಯಲಿಲ್ಲ
ಯಾಕೆಂದ್ರೆ ನಾನು ಕಮ್ಯೂನಿಸ್ಟ್ ಆಗಿರಲಿಲ್ಲ

ನಂತರ ಅವರು ಬಂದರು ಸಮಾಜವಾದಿಗಳ ಎತ್ತಿ ಹಾಕಿಕೊಂಡು ಹೋಗಲು
ಮತ್ತು ನಾನು ಪ್ರತಿಭಟಿಸಲಿಲ್ಲ
ಯಾಕೆಂದ್ರೆ ನಾನು ಸಮಾಜವಾದಿ ಆಗಿರಲಿಲ್ಲ,

ಆನಂತರ ಅವರು ಬಂದರು ಕಾರ್ಮಿಕ ನಾಯಕರನ್ನು ಹಿಡಿದೊಯ್ಯಲು
ಮತ್ತು ನಾನು ಬಾಯಿ ಹೊಲಿದುಕೊಂಡಿದ್ದೆ
ಯಾಕೆಂದ್ರೆ ನಾನು ಕಾರ್ಮಿಕ ನಾಯಕನಾಗಿರಲಿಲ್ಲ

ತದನಂತರವೂ ಅವರು ಬಂದರು ಯಹೂದಿಗಳನ್ನು ಎಳೆದೊಯ್ಯಲು
ಮತ್ತು ಆಗಲೂ ನಾನು ದನಿ ಎತ್ತಲಿಲ್ಲ
ಯಾಕೆಂದ್ರೆ ನಾನು ಯಹೂದಿಯೇನೂ ಆಗಿರಲಿಲ್ಲ

ತರುವಾಯ ಅವರು ಬಂದೇ ಬಂದರು…
ನನ್ನನ್ನು ಕೈದು ಮಾಡಲು
ಮತ್ತು ಆಗ ಯಾರೂ ಉಳಿದಿರಲಿಲ್ಲ
ಕೊರಳೆತ್ತಲು, ನನ್ನ ಸಲುವಾಗಿ.
(- ಮಾರ್ಟಿನ್ ನಿಮೋಲರ್, ಹಿಟ್ಲರನ ಅಭಿಮಾನಿಯಾಗಿದ್ದು ವಿರೋಧಿಯಾಗಿ ಪರಿವರ್ತನೆಗೊಂಡ ಪಾದ್ರಿ )

ರೊಟ್ಟಿ ಮತ್ತು ಸಂಸತ್ತು
ಒಬ್ಬ ಮನುಷ್ಯ
ರೊಟ್ಟಿ ಬೇಯಿಸ್ತಾನೆ,
ಒಬ್ಬ ಮನುಷ್ಯ ರೊಟ್ಟಿ ತಿಂತಾನೆ
ಮೂರನೆಯ ಮನುಷ್ಯನೂ ಒಬ್ಬನಿದ್ದಾನೆ
ಅವನು ರೊಟ್ಟಿಯನ್ನು ಬೇಯಿಸುವುದೂ ಇಲ್ಲ ತಿನ್ನುವುದೂ ಇಲ್ಲ
ಅವನು ಕೇವಲ ರೊಟ್ಟಿಯೊಂದಿಗೆ ಆಟ ಆಡ್ತಾನೆ
ಯಾರು ಈ ಮೂರನೆಯ ಮನುಷ್ಯ?
ನನ್ನ ದೇಶದ ಸಂಸದ ಮೌನ ಧರಿಸಿದ್ದಾನೆ.
(-ಧೂಮಿಲ್)

ಅವರು ಭಯಪಡುತ್ತಾರೆ
ಅವರು ಭಯಪಡುತ್ತಾರೆ
ಯಾವುದರ ಬಗ್ಗೆ ಅವರಿಗೆ ಭಯ ಅವರಿಗೆ
ಧನ ದೌಲತ್ತು
ಸಿಡುಗುಂಡು, ಸುಡುಮದ್ದು, ಪೊಲೀಸ್ ಫೌಜು ಸರ್ವಸ್ವ ಇದ್ದಾಗ್ಯೂ
ಅವರು ಭಯ ಪಡುತ್ತಾರೆ
ಯಾಕೆಂದ್ರೆ ಒಂದಲ್ಲ ಒಂದು ದಿನ
ಹತಾರುಗಳಿರದ ಬರಿಗೈಗಳ ದೀನ ದರಿದ್ರ ಜನ
ಅವರನ್ನು ಕಂಡು
ಭಯಪಡುವುದ
ನಿಲ್ಲಿಸಿಬಿಡುತ್ತಾರೆ
(ಗೋರಖನಾಥ ಪಾಂಡೆ)

ಮುರಿದು ಸುರಿಯಲಿ ಸಾವಿರ ಸಿಡಿಲುಗಳು

ಬಡಿದು ಬೀಸಲಿ ಲಕ್ಷ ಬಿರುಗಾಳಿಗಳು

ಅರಳಿಯೇ ಅರಳಲಿವೆ ಅರಳಬೇಕಿರುವ ಹೂವುಗಳು

(ಸಾಹಿರ್ ಲೂಧಿಯಾನ್ವಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...