HomeUncategorizedಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ...!

ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

- Advertisement -
- Advertisement -

ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿ ಅಷ್ಟು ಲಗುಬಗೆಯಲ್ಲಿ ತೊಲಗುತ್ತಿರಲಿಲ್ಲ. ನೆನಪಿಡೋಣ, ಈಗ ದೇಶದ ಕೈಕಾಲುಗಳ ಕಟ್ಟಿ ಹಾಕಿ ಬಾಯಿಗೆ ಬೀಗ ಜಡಿಯಲು ಮುಂದಾಗಿರುವ ಪ್ರಭುಗಳೂ ಆಗ ತುರ್ತುಪರಿಸ್ಥಿತಿ ವಿರುದ್ಧ ಮಾತಾಡಿದ್ದರು… ಸರ್ವಾಧಿಕಾರದ ವಿರುದ್ಧ ಪ್ರಜೆಗಳ ಎಚ್ಚರಿಸಲು ‘ಕಹಳೆ’, ’ದುಂದುಭಿ’ ಮುಂತಾದ ಭೂಗತ ಪತ್ರಿಕೆಗಳನ್ನು ಹೊರತಂದಿದ್ದರು. ಇತಿಹಾಸದ ಈ ಭಾಗವನ್ನು ಮರೆತಂತೆ ನಟಿಸತೊಡಗಿದ್ದಾರೆ ಅವರು.

ನಿರಂತರ ಎಚ್ಚರವೇ ಜೀವಂತ ಜನತಂತ್ರಕ್ಕೆ ನಾವು ತೆರಬೇಕಾದ ಬೆಲೆ. ಇತಿಹಾಸ ಮರುಕಳಿಸುತ್ತದೆ ಎಂಬ ಮಾತಿದೆ. ವಿವೇಕದ ಮಾತುಗಳು ಹುಸಿಯಾಗುವುದಿಲ್ಲ. ಇತಿಹಾಸ ದಿಟವಾಗಿಯೂ ಮರುಕಳಿಸಿದೆ. ಆದರೆ ನಾಜೀ ಜರ್ಮನಿಯ ಇತಿಹಾಸ ಭಾರತದ ಭೂಪ್ರದೇಶದಲ್ಲಿ ಮರುಕಳಿಸಿದೆ. ಇದರ ಮುಂದೆ ಇಂದಿರಾ ಗಾಂಧೀ ಅವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿ ಕೇವಲ ವನವಿಹಾರ ಸಮಾನ. ಡಿಸೆಂಬರ್ 21-22ರಂದು ಮೈಸೂರಿನಲ್ಲಿ ಮಾಧ್ಯಮ ಮತ್ತು ಜನತಂತ್ರ ಕುರಿತ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧೀಯವರ ಮೊಮ್ಮಗ ರಾಜಮೋಹನಗಾಂಧೀ ಅವರು ಬಳಸಿದ ಪದವಿದು – ‘ವನವಿಹಾರ’. Emergency was just a picnic before what is happening to the Country now ಎಂಬುದಾಗಿ ಅವರು ಉದ್ಗರಿಸಿದ್ದುಂಟು.

ಸತ್ತು ಹೋಗಿದೆಯೆಂದೇ ಭಾವಿಸಲಾಗಿದ್ದ ವಿದ್ಯಾರ್ಥಿ ಚಳವಳಿ ಗರಿಕೆಯಂತೆ ಮೊಳೆತು ಚಿಗುರಿದೆ. ದೇಶದ ಮೂಲೆ ಮೂಲೆಗಳಲ್ಲಿ ವ್ಯಾಪಿಸಿ ಹಸಿರೊಡೆದಿದೆ. ಜೆ.ಪಿ.ಆಂದೋಲನದಲ್ಲಿ ಬೆರೆತು ಭುಗಿಲೆದ್ದಿದ್ದ ಅಂದಿನ ಆ ಶಕ್ತಿಶಾಲಿ ವಿದ್ಯಾರ್ಥಿ ಚಳವಳಿಯಲ್ಲಿ ಇಂದಿನ ಪ್ರಭುಗಳಲ್ಲಿ ಅನೇಕರೂ ಮತ್ತು ಪರಿವಾರದ ಸಂಘಟನೆಗಳೂ ಭಾಗವಹಿಸಿದ್ದವು. ದೇಶವನ್ನು ದಾಸ್ಯದ ನೊಗದಿಂದ ಬಿಡಿಸಬೇಕೆಂದು ಘರ್ಜಿಸಿದ್ದವು. ಪ್ರಜೆಗಳು ಬಂದರು ಸಿಂಹಾಸನ ಖಾಲಿ ಮಾಡಿರಿ ಎಂಬ ಕವಿ ರಾಮಧಾರಿ ಸಿಂಗ್ ದಿನಕರ್ ಅವರ ಕ್ರಾಂತಿಗೀತೆಗೆ ದನಿಗೂಡಿಸಿ ಹಾಡಿದ್ದವು. ಇಂದು ಆ ಅವೇ ಶಕ್ತಿಗಳು-ಸಂಘಟನೆಗಳು ಸಿಂಹಾಸನ ಏರಿ ಕುಳಿತಿವೆ. ಪ್ರಜೆಗಳನ್ನು ಧಿಕ್ಕರಿಸಿವೆ. ದೇಶದ ಕೊರಳು ಮತ್ತೊಂದು ಬಗೆಯ ದಾಸ್ಯದ ನೊಗಕ್ಕೆ ಹೂಡಲ್ಪಡುತ್ತಿದೆ. ವಿದ್ಯಾರ್ಥಿ ಚಳವಳಿಗೆ ದೇಶದ್ರೋಹದ ಹೆಸರಿಡಲಾಗುತ್ತಿದೆ. ಸುಳ್ಳು ಸುದ್ದಿಗಳು ಮತ್ತು ಮಿಥ್ಯಾಪ್ರಚಾರದ ವಾಟ್ಸ್ಯಾಪ್ ಯೂನಿವರ್ಸಿಟಿಗಳನ್ನು ಕಟ್ಟಿ ನಿಲ್ಲಿಸಲಾಗುತ್ತಿದೆ. ಅರಿವಿನ ಮತ್ತು ಸಮಾನತೆಯ ಬೆಳಕನ್ನು ಹಂಚುವ ನಿಜದ ವಿಶ್ವವಿದ್ಯಾಲಯಗಳನ್ನು ಕೆಡವುವ ಕಾರಸ್ಥಾನ ಜರುಗಿದೆ.

ದಮನದ ವಿರುದ್ಧ ಅನ್ಯಾಯಕ್ಕೆ ಎದುರಾಗಿ ವಿದ್ಯಾರ್ಥಿಶಕ್ತಿ ತೋರತೊಡಗಿರುವ ಸಾತ್ವಿಕ ಕೆಚ್ಚು ವಿವೇಕದ ದೊಂದಿಯನ್ನು ಸಮಾಜಶಕ್ತಿ ಎತ್ತಿ ಹಿಡಿಯಬೇಕಿದೆ. ತಡಮಾಡಿದರೆ ಸರದಿಯ ಪ್ರಕಾರ ಕಾಲಬುಡಕ್ಕೆ ಬಂದೀತು… ಬಲು ತುಟ್ಟಿಯಾಗಿ ಪರಿಣಮೀಸೀತು… ಮತ್ತು…ದುರಿತ ಕಾಲದ ಬಹುಜನ ಭಾರತ ಓದಿಕೊಳ್ಳಬೇಕಿರುವ ಕೆಲ ಕವಿತೆಗಳು ಇಲ್ಲಿವೆ…

ಆಡು, ಮಾತಾಡು
ತುಟಿಗಳಿಗೆ ಅಂಕೆ ಇಲ್ಲ
ಆಡು, ಮಾತಾಡು
ನಾಲಗೆ ಇನ್ನೂ ನಿನ್ನದೇ
ಆಡು, ಮಾತಾಡು,
ದೇಹ ನಿನ್ನ ಸ್ವಂತದ್ದು
ಆಡು, ಮಾತಾಡು,
ಜೀವ ಹಾರಿ ಹೋಗಿಲ್ಲ
ಹಾಡು ಮಾತಾಡು

ನೋಡು, ಕಮ್ಮಾರನ ಕುಲುಮೆಯಲಿ
ಭುಗಿಲೆದ್ದಿದೆ ಜ್ವಾಲೆ, ಕೆಂಪೇರಿದೆ ಲೋಹ,
ಸಡಿಲಾಗುತ್ತಿದೆ ಬೀಗಗಳ ಬಾಯಿ
ಮುರಿಯುತ್ತಿದೆ ಸರಪಳಿಗಳ ಕೀಲು.
ದೇಹ ನಾಲಗೆ ಸತ್ತು ಹೋಗುವ ಮುಂಚಿನ
ಈ ಎರಡು ಗಳಿಗೆಯೇ ಸಾಕು
ಆಡು, ಮಾತಾಡು

ಸತ್ಯ ಇನ್ನೂ ಉಸಿರಾಡುತಿದೆ
ಆಡು, ಮಾತಾಡು
ಹೇಳಲೇಬೇಕಾದ್ದು, ಹೇಳಿಯೇಬಿಡು
ಆಡು ಮಾತಾಡು.
(ಫೈಜ್ ಅಹ್ಮದ್ ಫೈಜ್- ಅನುವಾದ- ಬಾಗೇಶ್ರೀ)

ಗಂಟೆ
ಫೋನಿನ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಬಾಗಿಲ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಅಲಾರಂ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಒಂದು ದಿನ
ಮರಣದ ಗಂಟೆ ಮೊಳಗಿತು…
ಗಡಿಬಿಡಿ ಮಾಡಿ ಎದ್ದು ಕುಳಿತೆ
ನಾನಿರುವೆ.. ನಾನಿರುವೆ.. ನಾನಿರುವೆ..
ಮರಣ ಹೇಳಿತು-
ನಿದ್ದೆ ಹೋಗಯ್ಯಾ ಈಗ ಮಗ್ಗಲು ಬದಲಿಸಿ
(ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಕುಂವರ್ ನಾರಾಯಣ್)

ಅವರು ಮೊದಲು ಬಂದದ್ದು..
ಅವರು ಮೊದಲು ಬಂದದ್ದು ಕಮ್ಯೂನಿಸ್ಟರ ಎತ್ತಿ ಹಾಕಿಕೊಳ್ಳಲು
ಮತ್ತು ನಾನು ತುಟಿ ತೆರೆಯಲಿಲ್ಲ
ಯಾಕೆಂದ್ರೆ ನಾನು ಕಮ್ಯೂನಿಸ್ಟ್ ಆಗಿರಲಿಲ್ಲ

ನಂತರ ಅವರು ಬಂದರು ಸಮಾಜವಾದಿಗಳ ಎತ್ತಿ ಹಾಕಿಕೊಂಡು ಹೋಗಲು
ಮತ್ತು ನಾನು ಪ್ರತಿಭಟಿಸಲಿಲ್ಲ
ಯಾಕೆಂದ್ರೆ ನಾನು ಸಮಾಜವಾದಿ ಆಗಿರಲಿಲ್ಲ,

ಆನಂತರ ಅವರು ಬಂದರು ಕಾರ್ಮಿಕ ನಾಯಕರನ್ನು ಹಿಡಿದೊಯ್ಯಲು
ಮತ್ತು ನಾನು ಬಾಯಿ ಹೊಲಿದುಕೊಂಡಿದ್ದೆ
ಯಾಕೆಂದ್ರೆ ನಾನು ಕಾರ್ಮಿಕ ನಾಯಕನಾಗಿರಲಿಲ್ಲ

ತದನಂತರವೂ ಅವರು ಬಂದರು ಯಹೂದಿಗಳನ್ನು ಎಳೆದೊಯ್ಯಲು
ಮತ್ತು ಆಗಲೂ ನಾನು ದನಿ ಎತ್ತಲಿಲ್ಲ
ಯಾಕೆಂದ್ರೆ ನಾನು ಯಹೂದಿಯೇನೂ ಆಗಿರಲಿಲ್ಲ

ತರುವಾಯ ಅವರು ಬಂದೇ ಬಂದರು…
ನನ್ನನ್ನು ಕೈದು ಮಾಡಲು
ಮತ್ತು ಆಗ ಯಾರೂ ಉಳಿದಿರಲಿಲ್ಲ
ಕೊರಳೆತ್ತಲು, ನನ್ನ ಸಲುವಾಗಿ.
(- ಮಾರ್ಟಿನ್ ನಿಮೋಲರ್, ಹಿಟ್ಲರನ ಅಭಿಮಾನಿಯಾಗಿದ್ದು ವಿರೋಧಿಯಾಗಿ ಪರಿವರ್ತನೆಗೊಂಡ ಪಾದ್ರಿ )

ರೊಟ್ಟಿ ಮತ್ತು ಸಂಸತ್ತು
ಒಬ್ಬ ಮನುಷ್ಯ
ರೊಟ್ಟಿ ಬೇಯಿಸ್ತಾನೆ,
ಒಬ್ಬ ಮನುಷ್ಯ ರೊಟ್ಟಿ ತಿಂತಾನೆ
ಮೂರನೆಯ ಮನುಷ್ಯನೂ ಒಬ್ಬನಿದ್ದಾನೆ
ಅವನು ರೊಟ್ಟಿಯನ್ನು ಬೇಯಿಸುವುದೂ ಇಲ್ಲ ತಿನ್ನುವುದೂ ಇಲ್ಲ
ಅವನು ಕೇವಲ ರೊಟ್ಟಿಯೊಂದಿಗೆ ಆಟ ಆಡ್ತಾನೆ
ಯಾರು ಈ ಮೂರನೆಯ ಮನುಷ್ಯ?
ನನ್ನ ದೇಶದ ಸಂಸದ ಮೌನ ಧರಿಸಿದ್ದಾನೆ.
(-ಧೂಮಿಲ್)

ಅವರು ಭಯಪಡುತ್ತಾರೆ
ಅವರು ಭಯಪಡುತ್ತಾರೆ
ಯಾವುದರ ಬಗ್ಗೆ ಅವರಿಗೆ ಭಯ ಅವರಿಗೆ
ಧನ ದೌಲತ್ತು
ಸಿಡುಗುಂಡು, ಸುಡುಮದ್ದು, ಪೊಲೀಸ್ ಫೌಜು ಸರ್ವಸ್ವ ಇದ್ದಾಗ್ಯೂ
ಅವರು ಭಯ ಪಡುತ್ತಾರೆ
ಯಾಕೆಂದ್ರೆ ಒಂದಲ್ಲ ಒಂದು ದಿನ
ಹತಾರುಗಳಿರದ ಬರಿಗೈಗಳ ದೀನ ದರಿದ್ರ ಜನ
ಅವರನ್ನು ಕಂಡು
ಭಯಪಡುವುದ
ನಿಲ್ಲಿಸಿಬಿಡುತ್ತಾರೆ
(ಗೋರಖನಾಥ ಪಾಂಡೆ)

ಮುರಿದು ಸುರಿಯಲಿ ಸಾವಿರ ಸಿಡಿಲುಗಳು

ಬಡಿದು ಬೀಸಲಿ ಲಕ್ಷ ಬಿರುಗಾಳಿಗಳು

ಅರಳಿಯೇ ಅರಳಲಿವೆ ಅರಳಬೇಕಿರುವ ಹೂವುಗಳು

(ಸಾಹಿರ್ ಲೂಧಿಯಾನ್ವಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...