Homeಮುಖಪುಟಪ್ಯಾಲೆಸ್ತೀನ್‌ನ ಸಮಸ್ಯೆ ಪರಿಹರಿಸಲು ಮೆಹಬೂಬಾ ಮುಫ್ತಿ ಕರೆ ನೀಡಿರುವುದು ತಪ್ಪಲ್ಲ: ಸಂಜಯ್ ರಾವತ್

ಪ್ಯಾಲೆಸ್ತೀನ್‌ನ ಸಮಸ್ಯೆ ಪರಿಹರಿಸಲು ಮೆಹಬೂಬಾ ಮುಫ್ತಿ ಕರೆ ನೀಡಿರುವುದು ತಪ್ಪಲ್ಲ: ಸಂಜಯ್ ರಾವತ್

- Advertisement -
- Advertisement -

ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ಯಾಲೆಸ್ತೀನ್‌ನ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಕರೆ ನೀಡುವುದರಲ್ಲಿ ತಪ್ಪೇನಿಲ್ಲ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಸೋಮವಾರ ಹೇಳಿದ್ದಾರೆ.

ಸಂಘರ್ಷದ ಕುರಿತು ಭಾರತದ ದಶಕಗಳ ಕಾಲದ ನಿಲುವನ್ನು ಸೂಚಿಸಿದ ರೌತ್, ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪ್ಯಾಲೆಸ್ತೀನ್ ರಾಜ್ಯದ ಮಾಜಿ ಅಧ್ಯಕ್ಷ ಯಾಸರ್ ಅರಾಫತ್ ಅವರಿಗೆ ಬೆಂಬಲವನ್ನು ನೀಡಿದ್ದರು ಎಂದು ಹೇಳಿದ್ದಾರೆ.

”ಇದು ಅಂತಾರಾಷ್ಟ್ರೀಯ ಸಮಸ್ಯೆ. ಪ್ಯಾಲೆಸ್ತೀನ್‌ಗೆ ಸಂಬಂಧಿಸಿದಂತೆ, ನಮ್ಮ ದೇಶವು ಒಂದು ಸಂಪ್ರದಾಯವನ್ನು ಹೊಂದಿದೆ. ಆ ಸಮಯದಲ್ಲಿ ಯಾಸರ್ ಅರಾಫತ್ ಅವರಿಗೆ ಇಂದಿರಾಗಾಂಧಿ ಬೆಂಬಲ ನೀಡಿದ್ದರು. ಮೆಹಬೂಬಾ (ಮುಫ್ತಿ) ಜಿ ಅವರು ತಪ್ಪು ಹೇಳಿದ್ದಾರೆ ಎಂದು ನಾನು ಹೇಳುವುದಿಲ್ಲ, ಆದರೆ ಅಂತಹ ಜಾಗತಿಕ ವಿಷಯಗಳಲ್ಲಿ ರಾಷ್ಟ್ರವು ಒಂದು ಪಾತ್ರವನ್ನು ವಹಿಸುತ್ತದೆ” ಎಂದು ರಾವತ್ ಹೇಳಿದರು.

ಇಸ್ರೇಲಿಗಳು ಮತ್ತು ಪ್ಯಾಲೆಸ್ಟೀನಿಯನ್ನರ ನಡುವಿನ ಹಗೆತನವನ್ನು ಕೊನೆಗೊಳಿಸಲೆಂದು ಆಶಿಸುತ್ತೇನೆ ಎಂದು ಹೇಳಿದರು.

”ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ನಡುವೆ ರಕ್ತಪಾತವು ಕೊನೆಗೊಳ್ಳಲು ಪ್ರಾರ್ಥಿಸುತ್ತೇನೆ, ಅಲ್ಲಿ ಶಾಂತಿ ನೆಲೆಸಲಿ” ಎಂದು ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಂತರ ಮತ್ತೊಂದು ಪೋಸ್ಟ್‌ನಲ್ಲಿ, “ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷಕ್ಕೆ ಜಗತ್ತು ಜಾಗೃತಗೊಳ್ಳಲು ಇಂತಹ ಸಾವು ಮತ್ತು ವಿನಾಶದ ಅಗತ್ಯವಿದೆ ಎಂಬುದು ದುರದೃಷ್ಟಕರ. ಮುಗ್ಧ ಪ್ಯಾಲೆಸ್ಟೀನಿಯನ್ನರು ಕೊಲ್ಲುವುದು ಮತ್ತು ಅವರ ಮನೆಗಳು ನಾಶಪಡಿಸುವ ವಿಚಾರದಲ್ಲಿ ಎಲ್ಲರೂ ಮೌನವಹಿಸಿದ್ದಾರೆ” ಎಂದು ಹೇಳಿದರು.

ಹಮಾಸ್ ಸಶಸ್ತ್ರ ಗುಂಪು ಇಸ್ರೇಲ್ ಮೇಲೆ ಹಠಾತ್ ದಾಳಿ ನಡೆಸಿದ ನಂತರ ಶನಿವಾರ ಸಂಘರ್ಷ ಉಲ್ಬಣಗೊಂಡಿತು, ಇದು ಗಾಜಾ ಪಟ್ಟಿಯಿಂದ ರಾಕೆಟ್‌ಗಳ ಸುರಿಮಳೆಗೈದಿತ್ತು. ಇಸ್ರೇಲ್ ಭಾನುವಾರದಂದು ಔಪಚಾರಿಕವಾಗಿ ಯುದ್ಧವನ್ನು ಘೋಷಿಸಿತು ಮತ್ತು ಹಮಾಸ್ ಸಶಸ್ತ್ರ ಗುಂಪಿನ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮಿಲಿಟರಿ ಕ್ರಮಗಳಿಗೆ ಆದೇಶ ನೀಡಿತ್ತು.

ಇತ್ತೀಚಿನ ಸಶಸ್ತ್ರ ಸಂಘರ್ಷದಲ್ಲಿ ನಾಗರಿಕರು ಮತ್ತು ಯೋಧರು ಸೇರಿದಂತೆ 1,100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಆದರೆ ಸೋಮವಾರ ಹಲವಾರು ಸ್ಥಳಗಳಲ್ಲಿ ಹೋರಾಟ ಮುಂದುವರೆದಿದೆ.

ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದಲ್ಲಿ ಮೃತರ ಸಂಖ್ಯೆ ಗಣನೀಯ ಹೆಚ್ಚಳ: ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...