Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...