Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...

‘ಪರಿಶೀಲನೆ ಮಾನವ ಘನತೆಯನ್ನು ಬಲಿಪಡೆಯಬಾರದು’: ನಾಗಪುರ ಜೈಲಿನ ಅಮಾನವೀಯ ವಿವಸ್ತ್ರ ಪರಿಶೀಲನೆ ವಿರುದ್ಧ ಜೈಲಿನಲ್ಲಿರುವ ಕೇರಳ ಕಾರ್ಯಕರ್ತ ಆರೋಪ

ಬಂಧನದಲ್ಲಿರುವ ವ್ಯಕ್ತಿಗಳು ಅಥವಾ ಕೈದಿಗಳು ಜೈಲಿನ ಬಾಗಿಲು ಪ್ರವೇಶಿಸಿದ ತಕ್ಷಣ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಹಾಗೂ ಮಾನವ ಘನತೆಯನ್ನು ಕಳೆದುಕೊಳ್ಳುವುದಿಲ್ಲ. ಆದರೆ, ಮಹಾರಾಷ್ಟ್ರದ ನಾಗಪುರ ಕೇಂದ್ರ ಕಾರಾಗೃಹದ 'ಅಂಡಾ ಸೆಲ್'ನಲ್ಲಿ ಕಾನೂನುಬಾಹಿರ ಚಟುವಟಿಕೆಗಳ...

‘ಅದು ಪೊಲೀಸರೇ ನಡೆಸಿದ ಪೂರ್ವ ಯೋಜಿತ ಕೃತ್ಯ’: ಸಂಭಾಲ್ ಹಿಂಸಾಚಾರ ನ್ಯಾಯಾಂಗ ಆಯೋಗದ ವರದಿ ತಿರಸ್ಕರಿಸಿದ ಸಂಸದ ಜಿಯಾ-ಉರ್-ರೆಹಮಾನ್

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ 2024ರ ನವೆಂಬರ್‌ನಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ನ್ಯಾಯಾಂಗ ಆಯೋಗದ ವರದಿಯನ್ನು ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಘಟನೆಯಲ್ಲಿ ನಾಲ್ವರು...

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...