Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...