Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...