Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...