Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...