Homeಚಳವಳಿರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

ರಾಕೇಶ್ ಟಿಕಾಯತ್ ಮೇಲಿನ ಕೇಸ್ ವಾಪಾಸ್ ಪಡೆಯಲು ಶಿವಾಚಾರ್ಯ ಸ್ವಾಮೀಜಿ ಆಗ್ರಹ

’ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ’

- Advertisement -
- Advertisement -

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ದೂರು ದಾಖಲಾಗಿರುವುದಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದಿದ್ದಾರೆ.

ಮಾರ್ಚ್ 20 ರ ಶನಿವಾರದಂದು ನಡೆದ ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ನಲ್ಲಿ ಭಾಗವಹಿಸಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ’ಪ್ರಚೋದನಾಕಾರಿ ಭಾಷಣ’ ಮಾಡಿದ್ದಾರೆ ಎಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಪ್ರಕರಣದ ದಾಖಲಾಗಿದೆ.

“ಟಿಕಾಯತ್ ಅವರ ಮೇಲೆ ಕೇಸ್ ಹಾಕಿರುವುದು ವಿಷಾದನೀಯ. ಪ್ರಜಾಪ್ರಭುತ್ವ ಇನ್ನೂ ಈ ದೇಶದಲ್ಲಿ ಇದೆ ಎನ್ನುವುದನ್ನು ಮರೆಯಬಾರದು. ಈ ದೇಶದ ಜನರಿಗೆ ಅನ್ನ ಕೊಡುವವರು ರೈತರು. ಅಂತಹವರ ನೋವು ಅರಿತು ಪರಿಹಾರ ಒದಗಿಸಬೇಕಾದ್ದು ಸರ್ಕಾರದ ಜವಾಬ್ದಾರಿ. ಆದುದರಿಂದ ಏನೋ ತಪ್ಪು ಅಭಿಪ್ರಾಯದಿಂದ ಕೇಸ್ ದಾಖಲಾಗಿರಬಹುದು. ಅದನ್ನು ಕೂಡಲೆ ವಾಪಾಸ್ ಪಡೆಯುವ ಕಾರ್ಯವನ್ನು ಸರ್ಕಾರ ಮಾಡಬೇಕೆಂದು ಈ ಮೂಲಕ ಕರೆಕೊಡುತ್ತಿದ್ದೆವೆ” ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ ಆಗ್ರಹ

ಗುರುವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಟ್ವೀಟ್ ಮಾಡಿ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌ ಹಾಕಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು..?” ಎಂದು ಪ್ರಶ್ನಿಸಿದ್ದರು.

“ಹೋರಾಟ ಮಾಡಲು ರೈತರು ದೆಹಲಿಗೇ ಬರಬೇಕಿಲ್ಲ, ದೆಹಲಿಯಂತೆ ಇಲ್ಲೇ ಹೋರಾಟ ಮಾಡಿ,” ಎಂಬ ಟಿಕಾಯತ್ ಹೇಳಿಕೆಯಲ್ಲಿ ಪ್ರಚೋದನೆ ಏನೂ ಇಲ್ಲ. ಇದರಲ್ಲಿ ತಪ್ಪು ಕಂಡವರದ್ದು ಗ್ರಹಿಕೆ ದೋಷವಷ್ಟೇ. ಹೋರಾಟ, ಹೋರಾಟಕ್ಕೆ ಕರೆ ನೀಡುವುದು ಸಂವಿಧಾನ ಬದ್ಧ. ಅವರು ಕೊಚ್ಚಿ ಎನ್ನಲಿಲ್ಲ, ಕೊಲ್ಲಿರಿ ಎನ್ನಲಿಲ್ಲ. ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು” ಎಂದು ಆಗ್ರಹಿಸಿದ್ದರು.

ರೈತ ಮುಖಂಡರು, ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು ರೈತ ಮುಖಂಡ ಟಿಕಾಯತ್ ಮೇಲೆ ಎಫ್‌ಐಆರ್‌ ಹಾಕಿರುವುದಕ್ಕೆ ಸರ್ಕಾರವನ್ನು ಟೀಕಿಸಿದ್ದಾರೆ. ಪ್ರಚೋದನಕಾರಿ ಭಾಷಣ ಎನ್ನುವುದು ಸುಳ್ಳು ಎಂದಿದ್ದಾರೆ. ಪತ್ರಿಕಾಗೋಷ್ಠಿಗಳನ್ನು ನಡೆಸಿ, ಗೃಹ ಸಚಿವರಿಗೆ ಬಹಿರಂಗ ಪತ್ರಗಳನ್ನು ಬರೆದು ಕೇಸ್ ವಾಪಸ್ ಪಡೆಯಲು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...