Homeಮುಖಪುಟಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ರಾಜನಾಥ್‌ ಸಿಂಗ್‌ ಹೇಳಿಕೆಗೆ ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ನೀಡಿರುವ ಹೇಳಿಕೆಯು ‘ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ದಿ ವೈರ್‌‌’ ಜಾಲತಾಣದಲ್ಲಿ ಕರಣ್ ಥಾಪರ್‌ ಅವರು ನಡೆಸಿರುವ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅರ್ಬಾನಾ-ಷಾಂಪೇನ್‌ನ ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರಾಜಮೋಹನ್ ಗಾಂಧಿ, “ರಾಜನಾಥ್ ಸಿಂಗ್‌ ಅವರ ಹೇಳಿಕೆ ಸಂಪೂರ್ಣ ತಪ್ಪಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ರಾಜಮೋಹನ್‌ ಗಾಂಧಿ ತಿಳಿಸಿದ್ದಾರೆ.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ರಾಜಮೋಹನ್ ಗಾಂಧಿ ಪ್ರಶ್ನಿಸಿದ್ದಾರೆ.

1920ರ ಜನವರಿ ಸಾವರ್ಕರ್‌ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜಮೋಹನ ಗಾಂಧಿಯವರು, ಸಾವರ್ಕರ್ ಅವರ ಕಿರಿಯ ಸಹೋದರ ನಾರಾಯಣ್ ರಾವ್ ಅವರು ಸಹಾಯಕ್ಕಾಗಿ ಮಾಡಿದ ಮನವಿಗೆ ಪ್ರತ್ಯುತ್ತರವಾಗಿತ್ತು. ಗಾಂಧೀಜಿಯವರು ಸ್ವಂತ ಇಚ್ಛೆಯಿಂದ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು 1920, ಮೇ ತಿಂಗಳಲ್ಲಿ ಸಾವರ್ಕರ್‌ ಸಹೋದರರ ಕುರಿತು ಲೇಖನ ಬರೆದಿದ್ದರು ಎಂಬುದನ್ನು ಒಪ್ಪಿಕೊಂಡಿರುವ ರಾಜಮೋಹನ್‌ ಗಾಂಧಿ, “ಬ್ರಿಟಿಷರ ಸಂಪರ್ಕದಿಂದ ಕಳೆದುಕೊಂಡ ಸ್ವತಂತ್ರವಾಗಲು ಅವರು ಬಯಸಿರಲಿಲ್ಲ. ಇದಕ್ಕೆ ಬದಲಾಗಿ ಬ್ರಿಟಿಷರ ಜೊತೆಗೂಡಿ ಭಾರತದ ಭವಿಷ್ಯವನ್ನು ಉತ್ತಮವಾಗಿ ರೂಪಿಸಬಹುದು ಎಂದು ಭಾವಿಸಿದ್ದರು” ಎಂದೂ ಉಲ್ಲೇಖಿಸಿದ್ದಾರೆ.

(ಸಂದರ್ಶನದ ಪೂರ್ಣ ವಿಡಿಯೋ ನೋಡಲು ‘ಇಲ್ಲಿ ಕ್ಲಿಕ್‌’ ಮಾಡಿ)


 ಇದನ್ನೂ ಓದಿರಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....