Homeಮುಖಪುಟಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ರಾಜನಾಥ್‌ ಸಿಂಗ್‌ ಹೇಳಿಕೆಗೆ ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ನೀಡಿರುವ ಹೇಳಿಕೆಯು ‘ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ದಿ ವೈರ್‌‌’ ಜಾಲತಾಣದಲ್ಲಿ ಕರಣ್ ಥಾಪರ್‌ ಅವರು ನಡೆಸಿರುವ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅರ್ಬಾನಾ-ಷಾಂಪೇನ್‌ನ ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರಾಜಮೋಹನ್ ಗಾಂಧಿ, “ರಾಜನಾಥ್ ಸಿಂಗ್‌ ಅವರ ಹೇಳಿಕೆ ಸಂಪೂರ್ಣ ತಪ್ಪಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ರಾಜಮೋಹನ್‌ ಗಾಂಧಿ ತಿಳಿಸಿದ್ದಾರೆ.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ರಾಜಮೋಹನ್ ಗಾಂಧಿ ಪ್ರಶ್ನಿಸಿದ್ದಾರೆ.

1920ರ ಜನವರಿ ಸಾವರ್ಕರ್‌ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜಮೋಹನ ಗಾಂಧಿಯವರು, ಸಾವರ್ಕರ್ ಅವರ ಕಿರಿಯ ಸಹೋದರ ನಾರಾಯಣ್ ರಾವ್ ಅವರು ಸಹಾಯಕ್ಕಾಗಿ ಮಾಡಿದ ಮನವಿಗೆ ಪ್ರತ್ಯುತ್ತರವಾಗಿತ್ತು. ಗಾಂಧೀಜಿಯವರು ಸ್ವಂತ ಇಚ್ಛೆಯಿಂದ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು 1920, ಮೇ ತಿಂಗಳಲ್ಲಿ ಸಾವರ್ಕರ್‌ ಸಹೋದರರ ಕುರಿತು ಲೇಖನ ಬರೆದಿದ್ದರು ಎಂಬುದನ್ನು ಒಪ್ಪಿಕೊಂಡಿರುವ ರಾಜಮೋಹನ್‌ ಗಾಂಧಿ, “ಬ್ರಿಟಿಷರ ಸಂಪರ್ಕದಿಂದ ಕಳೆದುಕೊಂಡ ಸ್ವತಂತ್ರವಾಗಲು ಅವರು ಬಯಸಿರಲಿಲ್ಲ. ಇದಕ್ಕೆ ಬದಲಾಗಿ ಬ್ರಿಟಿಷರ ಜೊತೆಗೂಡಿ ಭಾರತದ ಭವಿಷ್ಯವನ್ನು ಉತ್ತಮವಾಗಿ ರೂಪಿಸಬಹುದು ಎಂದು ಭಾವಿಸಿದ್ದರು” ಎಂದೂ ಉಲ್ಲೇಖಿಸಿದ್ದಾರೆ.

(ಸಂದರ್ಶನದ ಪೂರ್ಣ ವಿಡಿಯೋ ನೋಡಲು ‘ಇಲ್ಲಿ ಕ್ಲಿಕ್‌’ ಮಾಡಿ)


 ಇದನ್ನೂ ಓದಿರಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...