Homeಮುಖಪುಟಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ರಾಜನಾಥ್‌ ಸಿಂಗ್‌ ಹೇಳಿಕೆಗೆ ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ನೀಡಿರುವ ಹೇಳಿಕೆಯು ‘ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ದಿ ವೈರ್‌‌’ ಜಾಲತಾಣದಲ್ಲಿ ಕರಣ್ ಥಾಪರ್‌ ಅವರು ನಡೆಸಿರುವ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅರ್ಬಾನಾ-ಷಾಂಪೇನ್‌ನ ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರಾಜಮೋಹನ್ ಗಾಂಧಿ, “ರಾಜನಾಥ್ ಸಿಂಗ್‌ ಅವರ ಹೇಳಿಕೆ ಸಂಪೂರ್ಣ ತಪ್ಪಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ರಾಜಮೋಹನ್‌ ಗಾಂಧಿ ತಿಳಿಸಿದ್ದಾರೆ.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ರಾಜಮೋಹನ್ ಗಾಂಧಿ ಪ್ರಶ್ನಿಸಿದ್ದಾರೆ.

1920ರ ಜನವರಿ ಸಾವರ್ಕರ್‌ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜಮೋಹನ ಗಾಂಧಿಯವರು, ಸಾವರ್ಕರ್ ಅವರ ಕಿರಿಯ ಸಹೋದರ ನಾರಾಯಣ್ ರಾವ್ ಅವರು ಸಹಾಯಕ್ಕಾಗಿ ಮಾಡಿದ ಮನವಿಗೆ ಪ್ರತ್ಯುತ್ತರವಾಗಿತ್ತು. ಗಾಂಧೀಜಿಯವರು ಸ್ವಂತ ಇಚ್ಛೆಯಿಂದ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು 1920, ಮೇ ತಿಂಗಳಲ್ಲಿ ಸಾವರ್ಕರ್‌ ಸಹೋದರರ ಕುರಿತು ಲೇಖನ ಬರೆದಿದ್ದರು ಎಂಬುದನ್ನು ಒಪ್ಪಿಕೊಂಡಿರುವ ರಾಜಮೋಹನ್‌ ಗಾಂಧಿ, “ಬ್ರಿಟಿಷರ ಸಂಪರ್ಕದಿಂದ ಕಳೆದುಕೊಂಡ ಸ್ವತಂತ್ರವಾಗಲು ಅವರು ಬಯಸಿರಲಿಲ್ಲ. ಇದಕ್ಕೆ ಬದಲಾಗಿ ಬ್ರಿಟಿಷರ ಜೊತೆಗೂಡಿ ಭಾರತದ ಭವಿಷ್ಯವನ್ನು ಉತ್ತಮವಾಗಿ ರೂಪಿಸಬಹುದು ಎಂದು ಭಾವಿಸಿದ್ದರು” ಎಂದೂ ಉಲ್ಲೇಖಿಸಿದ್ದಾರೆ.

(ಸಂದರ್ಶನದ ಪೂರ್ಣ ವಿಡಿಯೋ ನೋಡಲು ‘ಇಲ್ಲಿ ಕ್ಲಿಕ್‌’ ಮಾಡಿ)


 ಇದನ್ನೂ ಓದಿರಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...