Homeಮುಖಪುಟಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ರಾಜನಾಥ್‌ ಸಿಂಗ್‌ ಹೇಳಿಕೆಗೆ ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ನೀಡಿರುವ ಹೇಳಿಕೆಯು ‘ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

‘ದಿ ವೈರ್‌‌’ ಜಾಲತಾಣದಲ್ಲಿ ಕರಣ್ ಥಾಪರ್‌ ಅವರು ನಡೆಸಿರುವ ವಿಡಿಯೋ ಸಂದರ್ಶನದಲ್ಲಿ ಮಾತನಾಡಿರುವ ಅರ್ಬಾನಾ-ಷಾಂಪೇನ್‌ನ ಇಲಿನಾಯ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ರಾಜಮೋಹನ್ ಗಾಂಧಿ, “ರಾಜನಾಥ್ ಸಿಂಗ್‌ ಅವರ ಹೇಳಿಕೆ ಸಂಪೂರ್ಣ ತಪ್ಪಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ರಾಜಮೋಹನ್‌ ಗಾಂಧಿ ತಿಳಿಸಿದ್ದಾರೆ.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ರಾಜಮೋಹನ್ ಗಾಂಧಿ ಪ್ರಶ್ನಿಸಿದ್ದಾರೆ.

1920ರ ಜನವರಿ ಸಾವರ್ಕರ್‌ ಅವರಿಗೆ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರಾಜಮೋಹನ ಗಾಂಧಿಯವರು, ಸಾವರ್ಕರ್ ಅವರ ಕಿರಿಯ ಸಹೋದರ ನಾರಾಯಣ್ ರಾವ್ ಅವರು ಸಹಾಯಕ್ಕಾಗಿ ಮಾಡಿದ ಮನವಿಗೆ ಪ್ರತ್ಯುತ್ತರವಾಗಿತ್ತು. ಗಾಂಧೀಜಿಯವರು ಸ್ವಂತ ಇಚ್ಛೆಯಿಂದ ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದಾರೆ.

ಗಾಂಧೀಜಿಯವರು 1920, ಮೇ ತಿಂಗಳಲ್ಲಿ ಸಾವರ್ಕರ್‌ ಸಹೋದರರ ಕುರಿತು ಲೇಖನ ಬರೆದಿದ್ದರು ಎಂಬುದನ್ನು ಒಪ್ಪಿಕೊಂಡಿರುವ ರಾಜಮೋಹನ್‌ ಗಾಂಧಿ, “ಬ್ರಿಟಿಷರ ಸಂಪರ್ಕದಿಂದ ಕಳೆದುಕೊಂಡ ಸ್ವತಂತ್ರವಾಗಲು ಅವರು ಬಯಸಿರಲಿಲ್ಲ. ಇದಕ್ಕೆ ಬದಲಾಗಿ ಬ್ರಿಟಿಷರ ಜೊತೆಗೂಡಿ ಭಾರತದ ಭವಿಷ್ಯವನ್ನು ಉತ್ತಮವಾಗಿ ರೂಪಿಸಬಹುದು ಎಂದು ಭಾವಿಸಿದ್ದರು” ಎಂದೂ ಉಲ್ಲೇಖಿಸಿದ್ದಾರೆ.

(ಸಂದರ್ಶನದ ಪೂರ್ಣ ವಿಡಿಯೋ ನೋಡಲು ‘ಇಲ್ಲಿ ಕ್ಲಿಕ್‌’ ಮಾಡಿ)


 ಇದನ್ನೂ ಓದಿರಿ: ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...