Homeಮುಖಪುಟಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

- Advertisement -
- Advertisement -

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿಯಲ್ಲಿ ಬೇಯಿಸಿದ ಮೊಟ್ಟೆಯನ್ನು ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಯಾವುದೇ ವಿರೋಧ ಮತ್ತು ಒತ್ತಾಯಗಳಿಗೆ ಮಣಿಯದೇ ರಾಜ್ಯದ್ಯಾಂತ ಯೋಜನೆಯನ್ನು ವಿಸ್ತರಿಸಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಆಹಾರ ಹಕ್ಕು ಕಾರ್ಯಕ್ರಮ ಮಗು ಮತ್ತು ಕಾನೂನು ಕೇಂದ್ರದ (ತರಬೇತಿ) ಸಂಯೋಜಕರಾದ ಟಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಮೊಟ್ಟೆ ಕೊಡುವುದು ಅನಿವಾರ್ಯ ಎಂದು ಪತ್ರ ಬರೆದಿರುವ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮದಡಿಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಬೇಯಿಸಿದ ಮೊಟ್ಟೆಯನ್ನು ಪೂರಕ ಪೌಷ್ಟಿಕ ಆಹಾರವನ್ನಾಗಿ ಸೇರಿಸಿರುವುದರ ಪರವಾಗಿ ಸರ್ಕಾರದ ತೀರ್ಮಾನವನ್ನು ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಮೊಟ್ಟೆಯನ್ನು ತಿನ್ನದಿರುವ ಮಕ್ಕಳಿಗೆ ಹಣ್ಣು ಅಥವಾ ಕಾಳುಗಳನ್ನು ಕೂಡ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಭಾರತದ ಸಂವಿಧಾನ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತತ್ವಗಳ ಅನುಸಾರ ಮಕ್ಕಳ ದೈಹಿಕ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರದ ನಿರ್ಧಾರವು ಮಕ್ಕಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಸರ್ಕಾರ ಈಗ ಅನುಷ್ಠಾನಗೊಳಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಪೌಷ್ಟಿಕತೆಯ ಅಂಶವನ್ನು ಸೇರಿಸುತ್ತಿರುವುದು ಕಾರ್ಯಕ್ರಮ ಮತ್ತಷ್ಟು ಅರ್ಥ ಪೂರ್ಣವಾಗುವಂತೆ ಮಾಡಿದೆ. ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಇದು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದಾದ ಪರಿಚ್ಛೇದ 47 ರಾಜ್ಯವು ತನ್ನ ಜನತೆಯ ಪೌಷ್ಟಿಕತೆಯ ಮಟ್ಟವನ್ನು ಹಾಗೂ ಜೀವನದ ಮಟ್ಟವನ್ನು ಹೆಚ್ಚಿಸುವುದು ಮತ್ತು ಸಾರ್ವಜನಿಕ ಅರೋಗ್ಯವನ್ನು ಸುಧಾರಿಸುವುದು ತನ್ನ ಪ್ರಾಥಮಿಕ ಕರ್ತವ್ಯ ಎಂದು ಪ್ರತಿಪಾದಿಸಿದೆ. ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 27(1) ಹೇಳುವಂತೆ, “ಸರ್ಕಾರಗಳು ಮಕ್ಕಳ ಶಾರೀರಿಕ ಮಾನಸಿಕ, ಭಾವನಾತ್ಮಕ, ನೈತಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಕ್ಕನ್ನು ಅಂಗೀಕರಿಸಬೇಕು”. ಮುಂದುವರಿದು ಪರಿಚ್ಛೇದ 27 (3)ರಲ್ಲಿ “ರಾಷ್ಟ್ರೀಯ ಪರಿಸ್ಥಿತಿ ಮತ್ತು ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಎಲ್ಲಾ ಸಮಂಜಸ ಕ್ರಮಗಳನ್ನು ಸರ್ಕಾರಗಳು ಕೈಗೊಂಡು ಮಕ್ಕಳ ಅಭಿವೃದ್ದಿಯಲ್ಲಿ ಜವಾಬ್ದಾರರಾಗಿರುವ ಮಕ್ಕಳ ತಂದೆ ತಾಯಿಗಳು ಮತ್ತು ಇತರರಿಗೆ ಸಹಾಯ ಒದಗಿಸಬೇಕು” ಎಂದು ಸೂಚಿಸುತ್ತದೆ ಎಂದಿದ್ದಾರೆ.

ನಮ್ಮ ಸಂವಿಧಾನ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗಳಿಗೆ ಬದ್ದರಾಗಿ ಮಕ್ಕಳ ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸಬೇಕೆಂದು ನಾವು ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ. ಇದರಿಂದ ಮಕ್ಕಳ ಅಪೌಷ್ಟಿಕತೆ ದೂರವಾಗುವುದಲ್ಲದೆ ಎಲ್ಲಾ ರೀತಿಯ ದೈಹಿಕ ನ್ಯೂನತೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರಾತಾ ಕಾಯ್ದೆ 2013 ಕೂಡ ಈ ವಿಷಯವನ್ನು ಪ್ರಮುಖವಾಗಿ ತೆಗೆದುಕೊಂಡು ದೇಶದ ಅಭಿವೃದ್ದಿಯಲ್ಲಿ ಮಕ್ಕಳ ಬೆಳವಣಿಗೆಯೂ ಮಹತ್ವದಾಗಿದ್ದು ಮಕ್ಕಳಿಗೆ ನಿರಂತರವಾಗಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ತಿಳಿಸಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಯಾವುದೇ ಧಾರ್ಮಿಕ ಮೂಲಭೂತವಾದಿ ಮತ್ತು ರಾಜಕೀಯ ಶಕ್ತಿಗಳ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಕೇವಲ 7 ಜಿಲ್ಲೆಗಳಿಗಷ್ಟೇ ಸೀಮಿತ ಮಾಡದೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ಮತ್ತು ಮೊಳಕೆ ಕಾಳುಗಳ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.
ವಾರದ ಪೂರ್ತಿ ಮೊಟ್ಟೆಯನ್ನುನೀಡುವ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊಟ್ಟೆ ವಿಚಾರದಲ್ಲಿ ರಾಜಕೀಯ ಮಾಡೋರನ್ನ ಏನನ್ನಬೇಕು ,ಮೊಟ್ಟೆ ಬೇಕಾದೋರು ಮೊಟ್ಟೆ ತಿನ್ನಲಿ ,ತಿನ್ನದ ಮಕ್ಕಳಿಗೆ ಹಣ್ಣನ್ನು ನೀಡಲಿ ,ಮೊಟ್ಟೆ ವಿಷಯದಲ್ಲಿ ಬೀದಿಗೆ ಬಂದ ಮಠಗಳನ್ನ ಸರ್ಕಾರ ಆಸ್ತಿ ಸಮೇತ ಮುಟ್ಟು ಗೋಲು ಹಾಕಿಕೊಳ್ಳಲಿ ,ಮಠಗಳು ಧರ್ಮ ರಕ್ಷಣೆಗೆ ವಿನಹ ,ರಾಜಕೀಯ ಮಾಡಲು ಅಲ್ಲಾ .

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....