Homeಮುಖಪುಟಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

- Advertisement -
- Advertisement -

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿಯಲ್ಲಿ ಬೇಯಿಸಿದ ಮೊಟ್ಟೆಯನ್ನು ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಯಾವುದೇ ವಿರೋಧ ಮತ್ತು ಒತ್ತಾಯಗಳಿಗೆ ಮಣಿಯದೇ ರಾಜ್ಯದ್ಯಾಂತ ಯೋಜನೆಯನ್ನು ವಿಸ್ತರಿಸಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಆಹಾರ ಹಕ್ಕು ಕಾರ್ಯಕ್ರಮ ಮಗು ಮತ್ತು ಕಾನೂನು ಕೇಂದ್ರದ (ತರಬೇತಿ) ಸಂಯೋಜಕರಾದ ಟಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಮೊಟ್ಟೆ ಕೊಡುವುದು ಅನಿವಾರ್ಯ ಎಂದು ಪತ್ರ ಬರೆದಿರುವ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮದಡಿಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಬೇಯಿಸಿದ ಮೊಟ್ಟೆಯನ್ನು ಪೂರಕ ಪೌಷ್ಟಿಕ ಆಹಾರವನ್ನಾಗಿ ಸೇರಿಸಿರುವುದರ ಪರವಾಗಿ ಸರ್ಕಾರದ ತೀರ್ಮಾನವನ್ನು ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಮೊಟ್ಟೆಯನ್ನು ತಿನ್ನದಿರುವ ಮಕ್ಕಳಿಗೆ ಹಣ್ಣು ಅಥವಾ ಕಾಳುಗಳನ್ನು ಕೂಡ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಭಾರತದ ಸಂವಿಧಾನ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತತ್ವಗಳ ಅನುಸಾರ ಮಕ್ಕಳ ದೈಹಿಕ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರದ ನಿರ್ಧಾರವು ಮಕ್ಕಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಸರ್ಕಾರ ಈಗ ಅನುಷ್ಠಾನಗೊಳಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಪೌಷ್ಟಿಕತೆಯ ಅಂಶವನ್ನು ಸೇರಿಸುತ್ತಿರುವುದು ಕಾರ್ಯಕ್ರಮ ಮತ್ತಷ್ಟು ಅರ್ಥ ಪೂರ್ಣವಾಗುವಂತೆ ಮಾಡಿದೆ. ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಇದು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದಾದ ಪರಿಚ್ಛೇದ 47 ರಾಜ್ಯವು ತನ್ನ ಜನತೆಯ ಪೌಷ್ಟಿಕತೆಯ ಮಟ್ಟವನ್ನು ಹಾಗೂ ಜೀವನದ ಮಟ್ಟವನ್ನು ಹೆಚ್ಚಿಸುವುದು ಮತ್ತು ಸಾರ್ವಜನಿಕ ಅರೋಗ್ಯವನ್ನು ಸುಧಾರಿಸುವುದು ತನ್ನ ಪ್ರಾಥಮಿಕ ಕರ್ತವ್ಯ ಎಂದು ಪ್ರತಿಪಾದಿಸಿದೆ. ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 27(1) ಹೇಳುವಂತೆ, “ಸರ್ಕಾರಗಳು ಮಕ್ಕಳ ಶಾರೀರಿಕ ಮಾನಸಿಕ, ಭಾವನಾತ್ಮಕ, ನೈತಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಕ್ಕನ್ನು ಅಂಗೀಕರಿಸಬೇಕು”. ಮುಂದುವರಿದು ಪರಿಚ್ಛೇದ 27 (3)ರಲ್ಲಿ “ರಾಷ್ಟ್ರೀಯ ಪರಿಸ್ಥಿತಿ ಮತ್ತು ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಎಲ್ಲಾ ಸಮಂಜಸ ಕ್ರಮಗಳನ್ನು ಸರ್ಕಾರಗಳು ಕೈಗೊಂಡು ಮಕ್ಕಳ ಅಭಿವೃದ್ದಿಯಲ್ಲಿ ಜವಾಬ್ದಾರರಾಗಿರುವ ಮಕ್ಕಳ ತಂದೆ ತಾಯಿಗಳು ಮತ್ತು ಇತರರಿಗೆ ಸಹಾಯ ಒದಗಿಸಬೇಕು” ಎಂದು ಸೂಚಿಸುತ್ತದೆ ಎಂದಿದ್ದಾರೆ.

ನಮ್ಮ ಸಂವಿಧಾನ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗಳಿಗೆ ಬದ್ದರಾಗಿ ಮಕ್ಕಳ ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸಬೇಕೆಂದು ನಾವು ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ. ಇದರಿಂದ ಮಕ್ಕಳ ಅಪೌಷ್ಟಿಕತೆ ದೂರವಾಗುವುದಲ್ಲದೆ ಎಲ್ಲಾ ರೀತಿಯ ದೈಹಿಕ ನ್ಯೂನತೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರಾತಾ ಕಾಯ್ದೆ 2013 ಕೂಡ ಈ ವಿಷಯವನ್ನು ಪ್ರಮುಖವಾಗಿ ತೆಗೆದುಕೊಂಡು ದೇಶದ ಅಭಿವೃದ್ದಿಯಲ್ಲಿ ಮಕ್ಕಳ ಬೆಳವಣಿಗೆಯೂ ಮಹತ್ವದಾಗಿದ್ದು ಮಕ್ಕಳಿಗೆ ನಿರಂತರವಾಗಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ತಿಳಿಸಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಯಾವುದೇ ಧಾರ್ಮಿಕ ಮೂಲಭೂತವಾದಿ ಮತ್ತು ರಾಜಕೀಯ ಶಕ್ತಿಗಳ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಕೇವಲ 7 ಜಿಲ್ಲೆಗಳಿಗಷ್ಟೇ ಸೀಮಿತ ಮಾಡದೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ಮತ್ತು ಮೊಳಕೆ ಕಾಳುಗಳ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.
ವಾರದ ಪೂರ್ತಿ ಮೊಟ್ಟೆಯನ್ನುನೀಡುವ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊಟ್ಟೆ ವಿಚಾರದಲ್ಲಿ ರಾಜಕೀಯ ಮಾಡೋರನ್ನ ಏನನ್ನಬೇಕು ,ಮೊಟ್ಟೆ ಬೇಕಾದೋರು ಮೊಟ್ಟೆ ತಿನ್ನಲಿ ,ತಿನ್ನದ ಮಕ್ಕಳಿಗೆ ಹಣ್ಣನ್ನು ನೀಡಲಿ ,ಮೊಟ್ಟೆ ವಿಷಯದಲ್ಲಿ ಬೀದಿಗೆ ಬಂದ ಮಠಗಳನ್ನ ಸರ್ಕಾರ ಆಸ್ತಿ ಸಮೇತ ಮುಟ್ಟು ಗೋಲು ಹಾಕಿಕೊಳ್ಳಲಿ ,ಮಠಗಳು ಧರ್ಮ ರಕ್ಷಣೆಗೆ ವಿನಹ ,ರಾಜಕೀಯ ಮಾಡಲು ಅಲ್ಲಾ .

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...