Homeಮುಖಪುಟಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

- Advertisement -
- Advertisement -

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿಯಲ್ಲಿ ಬೇಯಿಸಿದ ಮೊಟ್ಟೆಯನ್ನು ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಯಾವುದೇ ವಿರೋಧ ಮತ್ತು ಒತ್ತಾಯಗಳಿಗೆ ಮಣಿಯದೇ ರಾಜ್ಯದ್ಯಾಂತ ಯೋಜನೆಯನ್ನು ವಿಸ್ತರಿಸಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಆಹಾರ ಹಕ್ಕು ಕಾರ್ಯಕ್ರಮ ಮಗು ಮತ್ತು ಕಾನೂನು ಕೇಂದ್ರದ (ತರಬೇತಿ) ಸಂಯೋಜಕರಾದ ಟಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಮೊಟ್ಟೆ ಕೊಡುವುದು ಅನಿವಾರ್ಯ ಎಂದು ಪತ್ರ ಬರೆದಿರುವ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮದಡಿಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಬೇಯಿಸಿದ ಮೊಟ್ಟೆಯನ್ನು ಪೂರಕ ಪೌಷ್ಟಿಕ ಆಹಾರವನ್ನಾಗಿ ಸೇರಿಸಿರುವುದರ ಪರವಾಗಿ ಸರ್ಕಾರದ ತೀರ್ಮಾನವನ್ನು ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಮೊಟ್ಟೆಯನ್ನು ತಿನ್ನದಿರುವ ಮಕ್ಕಳಿಗೆ ಹಣ್ಣು ಅಥವಾ ಕಾಳುಗಳನ್ನು ಕೂಡ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಭಾರತದ ಸಂವಿಧಾನ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತತ್ವಗಳ ಅನುಸಾರ ಮಕ್ಕಳ ದೈಹಿಕ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರದ ನಿರ್ಧಾರವು ಮಕ್ಕಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಸರ್ಕಾರ ಈಗ ಅನುಷ್ಠಾನಗೊಳಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಪೌಷ್ಟಿಕತೆಯ ಅಂಶವನ್ನು ಸೇರಿಸುತ್ತಿರುವುದು ಕಾರ್ಯಕ್ರಮ ಮತ್ತಷ್ಟು ಅರ್ಥ ಪೂರ್ಣವಾಗುವಂತೆ ಮಾಡಿದೆ. ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಇದು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದಾದ ಪರಿಚ್ಛೇದ 47 ರಾಜ್ಯವು ತನ್ನ ಜನತೆಯ ಪೌಷ್ಟಿಕತೆಯ ಮಟ್ಟವನ್ನು ಹಾಗೂ ಜೀವನದ ಮಟ್ಟವನ್ನು ಹೆಚ್ಚಿಸುವುದು ಮತ್ತು ಸಾರ್ವಜನಿಕ ಅರೋಗ್ಯವನ್ನು ಸುಧಾರಿಸುವುದು ತನ್ನ ಪ್ರಾಥಮಿಕ ಕರ್ತವ್ಯ ಎಂದು ಪ್ರತಿಪಾದಿಸಿದೆ. ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 27(1) ಹೇಳುವಂತೆ, “ಸರ್ಕಾರಗಳು ಮಕ್ಕಳ ಶಾರೀರಿಕ ಮಾನಸಿಕ, ಭಾವನಾತ್ಮಕ, ನೈತಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಕ್ಕನ್ನು ಅಂಗೀಕರಿಸಬೇಕು”. ಮುಂದುವರಿದು ಪರಿಚ್ಛೇದ 27 (3)ರಲ್ಲಿ “ರಾಷ್ಟ್ರೀಯ ಪರಿಸ್ಥಿತಿ ಮತ್ತು ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಎಲ್ಲಾ ಸಮಂಜಸ ಕ್ರಮಗಳನ್ನು ಸರ್ಕಾರಗಳು ಕೈಗೊಂಡು ಮಕ್ಕಳ ಅಭಿವೃದ್ದಿಯಲ್ಲಿ ಜವಾಬ್ದಾರರಾಗಿರುವ ಮಕ್ಕಳ ತಂದೆ ತಾಯಿಗಳು ಮತ್ತು ಇತರರಿಗೆ ಸಹಾಯ ಒದಗಿಸಬೇಕು” ಎಂದು ಸೂಚಿಸುತ್ತದೆ ಎಂದಿದ್ದಾರೆ.

ನಮ್ಮ ಸಂವಿಧಾನ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗಳಿಗೆ ಬದ್ದರಾಗಿ ಮಕ್ಕಳ ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸಬೇಕೆಂದು ನಾವು ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ. ಇದರಿಂದ ಮಕ್ಕಳ ಅಪೌಷ್ಟಿಕತೆ ದೂರವಾಗುವುದಲ್ಲದೆ ಎಲ್ಲಾ ರೀತಿಯ ದೈಹಿಕ ನ್ಯೂನತೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರಾತಾ ಕಾಯ್ದೆ 2013 ಕೂಡ ಈ ವಿಷಯವನ್ನು ಪ್ರಮುಖವಾಗಿ ತೆಗೆದುಕೊಂಡು ದೇಶದ ಅಭಿವೃದ್ದಿಯಲ್ಲಿ ಮಕ್ಕಳ ಬೆಳವಣಿಗೆಯೂ ಮಹತ್ವದಾಗಿದ್ದು ಮಕ್ಕಳಿಗೆ ನಿರಂತರವಾಗಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ತಿಳಿಸಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಯಾವುದೇ ಧಾರ್ಮಿಕ ಮೂಲಭೂತವಾದಿ ಮತ್ತು ರಾಜಕೀಯ ಶಕ್ತಿಗಳ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಕೇವಲ 7 ಜಿಲ್ಲೆಗಳಿಗಷ್ಟೇ ಸೀಮಿತ ಮಾಡದೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ಮತ್ತು ಮೊಳಕೆ ಕಾಳುಗಳ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.
ವಾರದ ಪೂರ್ತಿ ಮೊಟ್ಟೆಯನ್ನುನೀಡುವ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊಟ್ಟೆ ವಿಚಾರದಲ್ಲಿ ರಾಜಕೀಯ ಮಾಡೋರನ್ನ ಏನನ್ನಬೇಕು ,ಮೊಟ್ಟೆ ಬೇಕಾದೋರು ಮೊಟ್ಟೆ ತಿನ್ನಲಿ ,ತಿನ್ನದ ಮಕ್ಕಳಿಗೆ ಹಣ್ಣನ್ನು ನೀಡಲಿ ,ಮೊಟ್ಟೆ ವಿಷಯದಲ್ಲಿ ಬೀದಿಗೆ ಬಂದ ಮಠಗಳನ್ನ ಸರ್ಕಾರ ಆಸ್ತಿ ಸಮೇತ ಮುಟ್ಟು ಗೋಲು ಹಾಕಿಕೊಳ್ಳಲಿ ,ಮಠಗಳು ಧರ್ಮ ರಕ್ಷಣೆಗೆ ವಿನಹ ,ರಾಜಕೀಯ ಮಾಡಲು ಅಲ್ಲಾ .

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...