Homeಮುಖಪುಟಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

- Advertisement -
- Advertisement -

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿಯಲ್ಲಿ ಬೇಯಿಸಿದ ಮೊಟ್ಟೆಯನ್ನು ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಯಾವುದೇ ವಿರೋಧ ಮತ್ತು ಒತ್ತಾಯಗಳಿಗೆ ಮಣಿಯದೇ ರಾಜ್ಯದ್ಯಾಂತ ಯೋಜನೆಯನ್ನು ವಿಸ್ತರಿಸಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಆಹಾರ ಹಕ್ಕು ಕಾರ್ಯಕ್ರಮ ಮಗು ಮತ್ತು ಕಾನೂನು ಕೇಂದ್ರದ (ತರಬೇತಿ) ಸಂಯೋಜಕರಾದ ಟಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಮೊಟ್ಟೆ ಕೊಡುವುದು ಅನಿವಾರ್ಯ ಎಂದು ಪತ್ರ ಬರೆದಿರುವ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮದಡಿಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಬೇಯಿಸಿದ ಮೊಟ್ಟೆಯನ್ನು ಪೂರಕ ಪೌಷ್ಟಿಕ ಆಹಾರವನ್ನಾಗಿ ಸೇರಿಸಿರುವುದರ ಪರವಾಗಿ ಸರ್ಕಾರದ ತೀರ್ಮಾನವನ್ನು ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಮೊಟ್ಟೆಯನ್ನು ತಿನ್ನದಿರುವ ಮಕ್ಕಳಿಗೆ ಹಣ್ಣು ಅಥವಾ ಕಾಳುಗಳನ್ನು ಕೂಡ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಭಾರತದ ಸಂವಿಧಾನ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತತ್ವಗಳ ಅನುಸಾರ ಮಕ್ಕಳ ದೈಹಿಕ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರದ ನಿರ್ಧಾರವು ಮಕ್ಕಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಸರ್ಕಾರ ಈಗ ಅನುಷ್ಠಾನಗೊಳಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಪೌಷ್ಟಿಕತೆಯ ಅಂಶವನ್ನು ಸೇರಿಸುತ್ತಿರುವುದು ಕಾರ್ಯಕ್ರಮ ಮತ್ತಷ್ಟು ಅರ್ಥ ಪೂರ್ಣವಾಗುವಂತೆ ಮಾಡಿದೆ. ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಇದು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದಾದ ಪರಿಚ್ಛೇದ 47 ರಾಜ್ಯವು ತನ್ನ ಜನತೆಯ ಪೌಷ್ಟಿಕತೆಯ ಮಟ್ಟವನ್ನು ಹಾಗೂ ಜೀವನದ ಮಟ್ಟವನ್ನು ಹೆಚ್ಚಿಸುವುದು ಮತ್ತು ಸಾರ್ವಜನಿಕ ಅರೋಗ್ಯವನ್ನು ಸುಧಾರಿಸುವುದು ತನ್ನ ಪ್ರಾಥಮಿಕ ಕರ್ತವ್ಯ ಎಂದು ಪ್ರತಿಪಾದಿಸಿದೆ. ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 27(1) ಹೇಳುವಂತೆ, “ಸರ್ಕಾರಗಳು ಮಕ್ಕಳ ಶಾರೀರಿಕ ಮಾನಸಿಕ, ಭಾವನಾತ್ಮಕ, ನೈತಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಕ್ಕನ್ನು ಅಂಗೀಕರಿಸಬೇಕು”. ಮುಂದುವರಿದು ಪರಿಚ್ಛೇದ 27 (3)ರಲ್ಲಿ “ರಾಷ್ಟ್ರೀಯ ಪರಿಸ್ಥಿತಿ ಮತ್ತು ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಎಲ್ಲಾ ಸಮಂಜಸ ಕ್ರಮಗಳನ್ನು ಸರ್ಕಾರಗಳು ಕೈಗೊಂಡು ಮಕ್ಕಳ ಅಭಿವೃದ್ದಿಯಲ್ಲಿ ಜವಾಬ್ದಾರರಾಗಿರುವ ಮಕ್ಕಳ ತಂದೆ ತಾಯಿಗಳು ಮತ್ತು ಇತರರಿಗೆ ಸಹಾಯ ಒದಗಿಸಬೇಕು” ಎಂದು ಸೂಚಿಸುತ್ತದೆ ಎಂದಿದ್ದಾರೆ.

ನಮ್ಮ ಸಂವಿಧಾನ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗಳಿಗೆ ಬದ್ದರಾಗಿ ಮಕ್ಕಳ ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸಬೇಕೆಂದು ನಾವು ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ. ಇದರಿಂದ ಮಕ್ಕಳ ಅಪೌಷ್ಟಿಕತೆ ದೂರವಾಗುವುದಲ್ಲದೆ ಎಲ್ಲಾ ರೀತಿಯ ದೈಹಿಕ ನ್ಯೂನತೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರಾತಾ ಕಾಯ್ದೆ 2013 ಕೂಡ ಈ ವಿಷಯವನ್ನು ಪ್ರಮುಖವಾಗಿ ತೆಗೆದುಕೊಂಡು ದೇಶದ ಅಭಿವೃದ್ದಿಯಲ್ಲಿ ಮಕ್ಕಳ ಬೆಳವಣಿಗೆಯೂ ಮಹತ್ವದಾಗಿದ್ದು ಮಕ್ಕಳಿಗೆ ನಿರಂತರವಾಗಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ತಿಳಿಸಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಯಾವುದೇ ಧಾರ್ಮಿಕ ಮೂಲಭೂತವಾದಿ ಮತ್ತು ರಾಜಕೀಯ ಶಕ್ತಿಗಳ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಕೇವಲ 7 ಜಿಲ್ಲೆಗಳಿಗಷ್ಟೇ ಸೀಮಿತ ಮಾಡದೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ಮತ್ತು ಮೊಳಕೆ ಕಾಳುಗಳ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.
ವಾರದ ಪೂರ್ತಿ ಮೊಟ್ಟೆಯನ್ನುನೀಡುವ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊಟ್ಟೆ ವಿಚಾರದಲ್ಲಿ ರಾಜಕೀಯ ಮಾಡೋರನ್ನ ಏನನ್ನಬೇಕು ,ಮೊಟ್ಟೆ ಬೇಕಾದೋರು ಮೊಟ್ಟೆ ತಿನ್ನಲಿ ,ತಿನ್ನದ ಮಕ್ಕಳಿಗೆ ಹಣ್ಣನ್ನು ನೀಡಲಿ ,ಮೊಟ್ಟೆ ವಿಷಯದಲ್ಲಿ ಬೀದಿಗೆ ಬಂದ ಮಠಗಳನ್ನ ಸರ್ಕಾರ ಆಸ್ತಿ ಸಮೇತ ಮುಟ್ಟು ಗೋಲು ಹಾಕಿಕೊಳ್ಳಲಿ ,ಮಠಗಳು ಧರ್ಮ ರಕ್ಷಣೆಗೆ ವಿನಹ ,ರಾಜಕೀಯ ಮಾಡಲು ಅಲ್ಲಾ .

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...