Homeಮುಖಪುಟಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

- Advertisement -
- Advertisement -

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯಡಿಯಲ್ಲಿ ಬೇಯಿಸಿದ ಮೊಟ್ಟೆಯನ್ನು ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ ಯಾವುದೇ ವಿರೋಧ ಮತ್ತು ಒತ್ತಾಯಗಳಿಗೆ ಮಣಿಯದೇ ರಾಜ್ಯದ್ಯಾಂತ ಯೋಜನೆಯನ್ನು ವಿಸ್ತರಿಸಬೇಕು ಎಂದು ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಆಹಾರ ಹಕ್ಕು ಕಾರ್ಯಕ್ರಮ ಮಗು ಮತ್ತು ಕಾನೂನು ಕೇಂದ್ರದ (ತರಬೇತಿ) ಸಂಯೋಜಕರಾದ ಟಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸಂವಿಧಾನ ಮತ್ತು ಕಾನೂನಿನ ಆಶಯಗಳಿಗೆ ಅನುಗುಣವಾಗಿ ಮಕ್ಕಳಿಗೆ ಮೊಟ್ಟೆ ಕೊಡುವುದು ಅನಿವಾರ್ಯ ಎಂದು ಪತ್ರ ಬರೆದಿರುವ ಅವರು, “ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಕಾರ್ಯಕ್ರಮದಡಿಯಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಬೇಯಿಸಿದ ಮೊಟ್ಟೆಯನ್ನು ಪೂರಕ ಪೌಷ್ಟಿಕ ಆಹಾರವನ್ನಾಗಿ ಸೇರಿಸಿರುವುದರ ಪರವಾಗಿ ಸರ್ಕಾರದ ತೀರ್ಮಾನವನ್ನು ಮಗು ಮತ್ತು ಕಾನೂನು ಕೇಂದ್ರ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಮೊಟ್ಟೆಯನ್ನು ತಿನ್ನದಿರುವ ಮಕ್ಕಳಿಗೆ ಹಣ್ಣು ಅಥವಾ ಕಾಳುಗಳನ್ನು ಕೂಡ ನೀಡಬೇಕೆಂದು ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ನಮ್ಮ ಭಾರತದ ಸಂವಿಧಾನ ಹಾಗೂ ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ತತ್ವಗಳ ಅನುಸಾರ ಮಕ್ಕಳ ದೈಹಿಕ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರದ ನಿರ್ಧಾರವು ಮಕ್ಕಳ ಹಿತಾಸಕ್ತಿಯನ್ನು ರಕ್ಷಿಸುತ್ತದೆ. ಸರ್ಕಾರ ಈಗ ಅನುಷ್ಠಾನಗೊಳಿಸುತ್ತಿರುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಪೌಷ್ಟಿಕತೆಯ ಅಂಶವನ್ನು ಸೇರಿಸುತ್ತಿರುವುದು ಕಾರ್ಯಕ್ರಮ ಮತ್ತಷ್ಟು ಅರ್ಥ ಪೂರ್ಣವಾಗುವಂತೆ ಮಾಡಿದೆ. ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪಸಂಖ್ಯಾತ ಹಾಗೂ ಹಿಂದುಳಿದ ವರ್ಗದ ಮಕ್ಕಳಿಗೆ ಇದು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?


ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಒಂದಾದ ಪರಿಚ್ಛೇದ 47 ರಾಜ್ಯವು ತನ್ನ ಜನತೆಯ ಪೌಷ್ಟಿಕತೆಯ ಮಟ್ಟವನ್ನು ಹಾಗೂ ಜೀವನದ ಮಟ್ಟವನ್ನು ಹೆಚ್ಚಿಸುವುದು ಮತ್ತು ಸಾರ್ವಜನಿಕ ಅರೋಗ್ಯವನ್ನು ಸುಧಾರಿಸುವುದು ತನ್ನ ಪ್ರಾಥಮಿಕ ಕರ್ತವ್ಯ ಎಂದು ಪ್ರತಿಪಾದಿಸಿದೆ. ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ 27(1) ಹೇಳುವಂತೆ, “ಸರ್ಕಾರಗಳು ಮಕ್ಕಳ ಶಾರೀರಿಕ ಮಾನಸಿಕ, ಭಾವನಾತ್ಮಕ, ನೈತಿಕ ಮತ್ತು ಸಾಮಾಜಿಕ ಬೆಳವಣಿಗೆಯ ಹಕ್ಕನ್ನು ಅಂಗೀಕರಿಸಬೇಕು”. ಮುಂದುವರಿದು ಪರಿಚ್ಛೇದ 27 (3)ರಲ್ಲಿ “ರಾಷ್ಟ್ರೀಯ ಪರಿಸ್ಥಿತಿ ಮತ್ತು ತನ್ನಿಂದ ಸಾಧ್ಯವಾಗುವ ರೀತಿಯಲ್ಲಿ ಎಲ್ಲಾ ಸಮಂಜಸ ಕ್ರಮಗಳನ್ನು ಸರ್ಕಾರಗಳು ಕೈಗೊಂಡು ಮಕ್ಕಳ ಅಭಿವೃದ್ದಿಯಲ್ಲಿ ಜವಾಬ್ದಾರರಾಗಿರುವ ಮಕ್ಕಳ ತಂದೆ ತಾಯಿಗಳು ಮತ್ತು ಇತರರಿಗೆ ಸಹಾಯ ಒದಗಿಸಬೇಕು” ಎಂದು ಸೂಚಿಸುತ್ತದೆ ಎಂದಿದ್ದಾರೆ.

ನಮ್ಮ ಸಂವಿಧಾನ ಮತ್ತು ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗಳಿಗೆ ಬದ್ದರಾಗಿ ಮಕ್ಕಳ ಸಾಮಾಜಿಕ ನ್ಯಾಯವನ್ನು ಖಾತರಿಗೊಳಿಸಬೇಕೆಂದು ನಾವು ಸರ್ಕಾರವನ್ನು ಬಲವಾಗಿ ಒತ್ತಾಯಿಸುತ್ತೇನೆ. ಇದರಿಂದ ಮಕ್ಕಳ ಅಪೌಷ್ಟಿಕತೆ ದೂರವಾಗುವುದಲ್ಲದೆ ಎಲ್ಲಾ ರೀತಿಯ ದೈಹಿಕ ನ್ಯೂನತೆಗಳಿಂದ ಮಕ್ಕಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರಾತಾ ಕಾಯ್ದೆ 2013 ಕೂಡ ಈ ವಿಷಯವನ್ನು ಪ್ರಮುಖವಾಗಿ ತೆಗೆದುಕೊಂಡು ದೇಶದ ಅಭಿವೃದ್ದಿಯಲ್ಲಿ ಮಕ್ಕಳ ಬೆಳವಣಿಗೆಯೂ ಮಹತ್ವದಾಗಿದ್ದು ಮಕ್ಕಳಿಗೆ ನಿರಂತರವಾಗಿ ಪೂರಕ ಪೌಷ್ಟಿಕ ಆಹಾರವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ಇದಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ತಿಳಿಸಿದೆ. ಇದೇ ಸಂದರ್ಭದಲ್ಲಿ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಯಾವುದೇ ಧಾರ್ಮಿಕ ಮೂಲಭೂತವಾದಿ ಮತ್ತು ರಾಜಕೀಯ ಶಕ್ತಿಗಳ ಒತ್ತಡಗಳಿಗೆ ಮಣಿಯಬಾರದು. ಸರ್ಕಾರಿ ಶಾಲೆಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆಯನ್ನು ಕೇವಲ 7 ಜಿಲ್ಲೆಗಳಿಗಷ್ಟೇ ಸೀಮಿತ ಮಾಡದೇ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಮೊಟ್ಟೆ ತಿನ್ನದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ಮತ್ತು ಮೊಳಕೆ ಕಾಳುಗಳ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು.
ವಾರದ ಪೂರ್ತಿ ಮೊಟ್ಟೆಯನ್ನುನೀಡುವ ಕ್ರಮವನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊಟ್ಟೆ ವಿಚಾರದಲ್ಲಿ ರಾಜಕೀಯ ಮಾಡೋರನ್ನ ಏನನ್ನಬೇಕು ,ಮೊಟ್ಟೆ ಬೇಕಾದೋರು ಮೊಟ್ಟೆ ತಿನ್ನಲಿ ,ತಿನ್ನದ ಮಕ್ಕಳಿಗೆ ಹಣ್ಣನ್ನು ನೀಡಲಿ ,ಮೊಟ್ಟೆ ವಿಷಯದಲ್ಲಿ ಬೀದಿಗೆ ಬಂದ ಮಠಗಳನ್ನ ಸರ್ಕಾರ ಆಸ್ತಿ ಸಮೇತ ಮುಟ್ಟು ಗೋಲು ಹಾಕಿಕೊಳ್ಳಲಿ ,ಮಠಗಳು ಧರ್ಮ ರಕ್ಷಣೆಗೆ ವಿನಹ ,ರಾಜಕೀಯ ಮಾಡಲು ಅಲ್ಲಾ .

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...