Homeಮುಖಪುಟಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿಸುತ್ತಿರುವ ಶಾಹೀನ್ ಬಾಗ್‌ನ ಮಹಿಳೆಯರು ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು ಕೇಂದ್ರ ಸರ್ಕಾರ ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಯಾವುದೇ ಸಂವಾದ ನಡೆಸಿಲ್ಲ ಎಂದು ದೂರಿದ್ದಾರೆ. ಹಾಗಾಗಿ ಸಿಎಎ ವಿರೋಧಿ ಅರ್ಜಿಗಳನ್ನು ಉನ್ನತ ನ್ಯಾಯಾಲಯವು ಶೀಘ್ರವಾಗಿ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಾಹೀನ್ ಬಾಗ್‌ ಪ್ರತಿಭಟನಾಕಾರನ್ನು ತೆರವುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಧ್ಯಪ್ರವೇಶಿಸಿರುವ ಹಬೀಬುಲ್ಲಾ, ಪ್ರತಿಭಟನೆ ಹೆಚ್ಚಾಗಿ ಶಾಂತಿಯುತವಾಗಿದೆ ಮತ್ತು ಮಹಿಳೆಯರ ಪ್ರತಿಭಟನಾ ಸ್ಥಳವು ಅವರ ದೃಷ್ಟಿಕೋನವನ್ನು ನ್ಯಾಯಾಲಯದ ಮುಂದೆ ಇರಿಸಲು ವಿನಂತಿಸಿದೆ ಎಂದು ಕಳೆದ ವಾರ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾವು ದೇಶದ ಹೆಮ್ಮೆಯ ಪ್ರಜೆಗಳೆಂದು ಪುನರುಚ್ಚರಿಸಿದ ಮಹಿಳೆಯರು, ತಮ್ಮ ಕಳವಳ ಮತ್ತು ಅಭಿಪ್ರಾಯಗಳನ್ನು ಅಫಿಡವಿಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ರಾಷ್ಟ್ರ ವಿರೋಧಿ ಮತ್ತು ಪಾಕಿಸ್ತಾನಿಗಳೆಂದು ಹಣೆಪಟ್ಟಿ ಕಟ್ಟಿರುವುದಕ್ಕೆ ತೀವ್ರ ದುಃಖವನ್ನು ತೋಡಿಕೊಂಡಿದ್ದಾರೆ ಎಂದು ಹಬೀಬುಲ್ಲಾ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ.

“ಅವರು ದೇಶದ ಹೆಮ್ಮೆಯ ಪ್ರಜೆಗಳಾಗಿದ್ದರೂ ಸಹ ಅವರ ಬಗ್ಗೆ ವಿವಿಧ ರಾಜಕೀಯ ಭಾಷಣಗಳಲ್ಲಿ ಮತ್ತು ಮಾಧ್ಯಮಗಳ ಒಂದು ವಿಭಾಗವು ರಾಷ್ಟ್ರ ವಿರೋಧಿ / ಹೊರಗಿನವರು / ದೇಶದ್ರೋಹಿಗಳು / ಪಾಕಿಸ್ತಾನಿಗಳು ಎಂದು ಬಿಂಬಿಸಿರುವುದಕ್ಕೆ ತೀವ್ರವಾಗಿ ದುಃಖಿತರಾಗಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ “ಅವರ ಉಳಿವು ಮತ್ತು ಅಸ್ತಿತ್ವಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ.” ಹಾಗಾಗಿ ಮಹಿಳೆಯರು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ಶಾಂತಿಯುತ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗಾಗಿ ಅದೇ ನಿರ್ದಿಷ್ಟ ತಾಣವನ್ನು ಆರಿಸಿಕೊಂಡಿದ್ದೇಕೆ ಎಂಬ ಪ್ರಶ್ನೆಗೆ “ಆ ರಸ್ತೆಯು ಶಾಹೀನ್‌ ಬಾಗ್‌ ಏರಿಯಾದ ಮಧ್ಯಭಾಗದಲ್ಲಿದ್ದು, ಇದು ಅವರಿಗೆ ಅಗತ್ಯವಾದ ಭದ್ರತೆಯನ್ನು ನೀಡುತ್ತದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆದರೆ ಎದುರಾಗಬಹುದಾದ ಬೆದರಿಕೆ ಮತ್ತು ದಾಳಿಯ ಸಾಧ್ಯತೆಗಳು ಇಲ್ಲಿ ಗಣನೀಯವಾಗಿ ಕಡಿಮೆಯಿವೆ” ಎಂದು ಉತ್ತರಿಸಿದ್ದಾರೆ.

ಪ್ರತಿಭಟನೆಯೊಂದಿಗೆ ಸಂಪರ್ಕವಿಲ್ಲದ ರಸ್ತೆಗಳನ್ನು ಪೊಲೀಸರು ಅನಗತ್ಯವಾಗಿ ಬ್ಯಾರಿಕೇಡ್ ಹಾಡಿ ಬಂದ್‌ ಮಾಡುವ ಮೂಲಕ “ಪ್ರತಿಭಟನಾಕಾರರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ” ಆ ರಸ್ತೆಗಳನ್ನು ಪೊಲೀಸರು ನಿರ್ಬಂಧಸಿರುವುದರಿಂದಲೇ ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಅಫಿಡವಿಟ್‌ನಲ್ಲಿ ಹಬೀಬುಲ್ಲಾ ಹೇಳಿದ್ದಾರೆ.

ಕಳೆದ ಸೋಮವಾರ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಂಜಯ್ ಹೆಗ್ಡೆ ಮತ್ತು ವಕೀಲೆ ಸಾಧನಾ ರಾಮಚಂದ್ರನ್ ಅವರಿಗೆ ಪ್ರತಿಭಟನಾಕಾರರೊಂದಿಗೆ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿದೆ.

ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದ್ದು, ಆದರೆ ಇಂತಹ ಪ್ರತಿಭಟನೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅನಿರ್ದಿಷ್ಟ ಅವಧಿಯವರೆಗೆ ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...