Homeಮುಖಪುಟಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿಸುತ್ತಿರುವ ಶಾಹೀನ್ ಬಾಗ್‌ನ ಮಹಿಳೆಯರು ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು ಕೇಂದ್ರ ಸರ್ಕಾರ ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಯಾವುದೇ ಸಂವಾದ ನಡೆಸಿಲ್ಲ ಎಂದು ದೂರಿದ್ದಾರೆ. ಹಾಗಾಗಿ ಸಿಎಎ ವಿರೋಧಿ ಅರ್ಜಿಗಳನ್ನು ಉನ್ನತ ನ್ಯಾಯಾಲಯವು ಶೀಘ್ರವಾಗಿ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಾಹೀನ್ ಬಾಗ್‌ ಪ್ರತಿಭಟನಾಕಾರನ್ನು ತೆರವುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಧ್ಯಪ್ರವೇಶಿಸಿರುವ ಹಬೀಬುಲ್ಲಾ, ಪ್ರತಿಭಟನೆ ಹೆಚ್ಚಾಗಿ ಶಾಂತಿಯುತವಾಗಿದೆ ಮತ್ತು ಮಹಿಳೆಯರ ಪ್ರತಿಭಟನಾ ಸ್ಥಳವು ಅವರ ದೃಷ್ಟಿಕೋನವನ್ನು ನ್ಯಾಯಾಲಯದ ಮುಂದೆ ಇರಿಸಲು ವಿನಂತಿಸಿದೆ ಎಂದು ಕಳೆದ ವಾರ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾವು ದೇಶದ ಹೆಮ್ಮೆಯ ಪ್ರಜೆಗಳೆಂದು ಪುನರುಚ್ಚರಿಸಿದ ಮಹಿಳೆಯರು, ತಮ್ಮ ಕಳವಳ ಮತ್ತು ಅಭಿಪ್ರಾಯಗಳನ್ನು ಅಫಿಡವಿಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ರಾಷ್ಟ್ರ ವಿರೋಧಿ ಮತ್ತು ಪಾಕಿಸ್ತಾನಿಗಳೆಂದು ಹಣೆಪಟ್ಟಿ ಕಟ್ಟಿರುವುದಕ್ಕೆ ತೀವ್ರ ದುಃಖವನ್ನು ತೋಡಿಕೊಂಡಿದ್ದಾರೆ ಎಂದು ಹಬೀಬುಲ್ಲಾ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ.

“ಅವರು ದೇಶದ ಹೆಮ್ಮೆಯ ಪ್ರಜೆಗಳಾಗಿದ್ದರೂ ಸಹ ಅವರ ಬಗ್ಗೆ ವಿವಿಧ ರಾಜಕೀಯ ಭಾಷಣಗಳಲ್ಲಿ ಮತ್ತು ಮಾಧ್ಯಮಗಳ ಒಂದು ವಿಭಾಗವು ರಾಷ್ಟ್ರ ವಿರೋಧಿ / ಹೊರಗಿನವರು / ದೇಶದ್ರೋಹಿಗಳು / ಪಾಕಿಸ್ತಾನಿಗಳು ಎಂದು ಬಿಂಬಿಸಿರುವುದಕ್ಕೆ ತೀವ್ರವಾಗಿ ದುಃಖಿತರಾಗಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ “ಅವರ ಉಳಿವು ಮತ್ತು ಅಸ್ತಿತ್ವಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ.” ಹಾಗಾಗಿ ಮಹಿಳೆಯರು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ಶಾಂತಿಯುತ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗಾಗಿ ಅದೇ ನಿರ್ದಿಷ್ಟ ತಾಣವನ್ನು ಆರಿಸಿಕೊಂಡಿದ್ದೇಕೆ ಎಂಬ ಪ್ರಶ್ನೆಗೆ “ಆ ರಸ್ತೆಯು ಶಾಹೀನ್‌ ಬಾಗ್‌ ಏರಿಯಾದ ಮಧ್ಯಭಾಗದಲ್ಲಿದ್ದು, ಇದು ಅವರಿಗೆ ಅಗತ್ಯವಾದ ಭದ್ರತೆಯನ್ನು ನೀಡುತ್ತದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆದರೆ ಎದುರಾಗಬಹುದಾದ ಬೆದರಿಕೆ ಮತ್ತು ದಾಳಿಯ ಸಾಧ್ಯತೆಗಳು ಇಲ್ಲಿ ಗಣನೀಯವಾಗಿ ಕಡಿಮೆಯಿವೆ” ಎಂದು ಉತ್ತರಿಸಿದ್ದಾರೆ.

ಪ್ರತಿಭಟನೆಯೊಂದಿಗೆ ಸಂಪರ್ಕವಿಲ್ಲದ ರಸ್ತೆಗಳನ್ನು ಪೊಲೀಸರು ಅನಗತ್ಯವಾಗಿ ಬ್ಯಾರಿಕೇಡ್ ಹಾಡಿ ಬಂದ್‌ ಮಾಡುವ ಮೂಲಕ “ಪ್ರತಿಭಟನಾಕಾರರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ” ಆ ರಸ್ತೆಗಳನ್ನು ಪೊಲೀಸರು ನಿರ್ಬಂಧಸಿರುವುದರಿಂದಲೇ ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಅಫಿಡವಿಟ್‌ನಲ್ಲಿ ಹಬೀಬುಲ್ಲಾ ಹೇಳಿದ್ದಾರೆ.

ಕಳೆದ ಸೋಮವಾರ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಂಜಯ್ ಹೆಗ್ಡೆ ಮತ್ತು ವಕೀಲೆ ಸಾಧನಾ ರಾಮಚಂದ್ರನ್ ಅವರಿಗೆ ಪ್ರತಿಭಟನಾಕಾರರೊಂದಿಗೆ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿದೆ.

ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದ್ದು, ಆದರೆ ಇಂತಹ ಪ್ರತಿಭಟನೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅನಿರ್ದಿಷ್ಟ ಅವಧಿಯವರೆಗೆ ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...