Homeಮುಖಪುಟಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿಸುತ್ತಿರುವ ಶಾಹೀನ್ ಬಾಗ್‌ನ ಮಹಿಳೆಯರು ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು ಕೇಂದ್ರ ಸರ್ಕಾರ ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಯಾವುದೇ ಸಂವಾದ ನಡೆಸಿಲ್ಲ ಎಂದು ದೂರಿದ್ದಾರೆ. ಹಾಗಾಗಿ ಸಿಎಎ ವಿರೋಧಿ ಅರ್ಜಿಗಳನ್ನು ಉನ್ನತ ನ್ಯಾಯಾಲಯವು ಶೀಘ್ರವಾಗಿ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಾಹೀನ್ ಬಾಗ್‌ ಪ್ರತಿಭಟನಾಕಾರನ್ನು ತೆರವುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಧ್ಯಪ್ರವೇಶಿಸಿರುವ ಹಬೀಬುಲ್ಲಾ, ಪ್ರತಿಭಟನೆ ಹೆಚ್ಚಾಗಿ ಶಾಂತಿಯುತವಾಗಿದೆ ಮತ್ತು ಮಹಿಳೆಯರ ಪ್ರತಿಭಟನಾ ಸ್ಥಳವು ಅವರ ದೃಷ್ಟಿಕೋನವನ್ನು ನ್ಯಾಯಾಲಯದ ಮುಂದೆ ಇರಿಸಲು ವಿನಂತಿಸಿದೆ ಎಂದು ಕಳೆದ ವಾರ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾವು ದೇಶದ ಹೆಮ್ಮೆಯ ಪ್ರಜೆಗಳೆಂದು ಪುನರುಚ್ಚರಿಸಿದ ಮಹಿಳೆಯರು, ತಮ್ಮ ಕಳವಳ ಮತ್ತು ಅಭಿಪ್ರಾಯಗಳನ್ನು ಅಫಿಡವಿಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ರಾಷ್ಟ್ರ ವಿರೋಧಿ ಮತ್ತು ಪಾಕಿಸ್ತಾನಿಗಳೆಂದು ಹಣೆಪಟ್ಟಿ ಕಟ್ಟಿರುವುದಕ್ಕೆ ತೀವ್ರ ದುಃಖವನ್ನು ತೋಡಿಕೊಂಡಿದ್ದಾರೆ ಎಂದು ಹಬೀಬುಲ್ಲಾ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ.

“ಅವರು ದೇಶದ ಹೆಮ್ಮೆಯ ಪ್ರಜೆಗಳಾಗಿದ್ದರೂ ಸಹ ಅವರ ಬಗ್ಗೆ ವಿವಿಧ ರಾಜಕೀಯ ಭಾಷಣಗಳಲ್ಲಿ ಮತ್ತು ಮಾಧ್ಯಮಗಳ ಒಂದು ವಿಭಾಗವು ರಾಷ್ಟ್ರ ವಿರೋಧಿ / ಹೊರಗಿನವರು / ದೇಶದ್ರೋಹಿಗಳು / ಪಾಕಿಸ್ತಾನಿಗಳು ಎಂದು ಬಿಂಬಿಸಿರುವುದಕ್ಕೆ ತೀವ್ರವಾಗಿ ದುಃಖಿತರಾಗಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ “ಅವರ ಉಳಿವು ಮತ್ತು ಅಸ್ತಿತ್ವಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ.” ಹಾಗಾಗಿ ಮಹಿಳೆಯರು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ಶಾಂತಿಯುತ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗಾಗಿ ಅದೇ ನಿರ್ದಿಷ್ಟ ತಾಣವನ್ನು ಆರಿಸಿಕೊಂಡಿದ್ದೇಕೆ ಎಂಬ ಪ್ರಶ್ನೆಗೆ “ಆ ರಸ್ತೆಯು ಶಾಹೀನ್‌ ಬಾಗ್‌ ಏರಿಯಾದ ಮಧ್ಯಭಾಗದಲ್ಲಿದ್ದು, ಇದು ಅವರಿಗೆ ಅಗತ್ಯವಾದ ಭದ್ರತೆಯನ್ನು ನೀಡುತ್ತದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆದರೆ ಎದುರಾಗಬಹುದಾದ ಬೆದರಿಕೆ ಮತ್ತು ದಾಳಿಯ ಸಾಧ್ಯತೆಗಳು ಇಲ್ಲಿ ಗಣನೀಯವಾಗಿ ಕಡಿಮೆಯಿವೆ” ಎಂದು ಉತ್ತರಿಸಿದ್ದಾರೆ.

ಪ್ರತಿಭಟನೆಯೊಂದಿಗೆ ಸಂಪರ್ಕವಿಲ್ಲದ ರಸ್ತೆಗಳನ್ನು ಪೊಲೀಸರು ಅನಗತ್ಯವಾಗಿ ಬ್ಯಾರಿಕೇಡ್ ಹಾಡಿ ಬಂದ್‌ ಮಾಡುವ ಮೂಲಕ “ಪ್ರತಿಭಟನಾಕಾರರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ” ಆ ರಸ್ತೆಗಳನ್ನು ಪೊಲೀಸರು ನಿರ್ಬಂಧಸಿರುವುದರಿಂದಲೇ ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಅಫಿಡವಿಟ್‌ನಲ್ಲಿ ಹಬೀಬುಲ್ಲಾ ಹೇಳಿದ್ದಾರೆ.

ಕಳೆದ ಸೋಮವಾರ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಂಜಯ್ ಹೆಗ್ಡೆ ಮತ್ತು ವಕೀಲೆ ಸಾಧನಾ ರಾಮಚಂದ್ರನ್ ಅವರಿಗೆ ಪ್ರತಿಭಟನಾಕಾರರೊಂದಿಗೆ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿದೆ.

ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದ್ದು, ಆದರೆ ಇಂತಹ ಪ್ರತಿಭಟನೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅನಿರ್ದಿಷ್ಟ ಅವಧಿಯವರೆಗೆ ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...