Homeಮುಖಪುಟಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

ಶಾಹೀನ್ ಪ್ರತಿಭಟನೆ ಸಂಪೂರ್ಣ ಶಾಂತಿಯುತವಾಗಿದೆ: ಸುಪ್ರೀಂಗೆ ಮಾಜಿ ಮುಖ್ಯ ಮಾಹಿತಿ ಆಯುಕ್ತರ ಅಫಿಡವಿಟ್‌!

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರತಿಭಟಿಸುತ್ತಿರುವ ಶಾಹೀನ್ ಬಾಗ್‌ನ ಮಹಿಳೆಯರು ಮಾಜಿ ಮುಖ್ಯ ಮಾಹಿತಿ ಆಯುಕ್ತ (ಸಿಐಸಿ) ವಜಾಹತ್ ಹಬೀಬುಲ್ಲಾ ಅವರ ಮೂಲಕ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು ಕೇಂದ್ರ ಸರ್ಕಾರ ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಯಾವುದೇ ಸಂವಾದ ನಡೆಸಿಲ್ಲ ಎಂದು ದೂರಿದ್ದಾರೆ. ಹಾಗಾಗಿ ಸಿಎಎ ವಿರೋಧಿ ಅರ್ಜಿಗಳನ್ನು ಉನ್ನತ ನ್ಯಾಯಾಲಯವು ಶೀಘ್ರವಾಗಿ ಆಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಶಾಹೀನ್ ಬಾಗ್‌ ಪ್ರತಿಭಟನಾಕಾರನ್ನು ತೆರವುಗೊಳಿಸುವಂತೆ ಕೋರಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಧ್ಯಪ್ರವೇಶಿಸಿರುವ ಹಬೀಬುಲ್ಲಾ, ಪ್ರತಿಭಟನೆ ಹೆಚ್ಚಾಗಿ ಶಾಂತಿಯುತವಾಗಿದೆ ಮತ್ತು ಮಹಿಳೆಯರ ಪ್ರತಿಭಟನಾ ಸ್ಥಳವು ಅವರ ದೃಷ್ಟಿಕೋನವನ್ನು ನ್ಯಾಯಾಲಯದ ಮುಂದೆ ಇರಿಸಲು ವಿನಂತಿಸಿದೆ ಎಂದು ಕಳೆದ ವಾರ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ಉನ್ನತ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾವು ದೇಶದ ಹೆಮ್ಮೆಯ ಪ್ರಜೆಗಳೆಂದು ಪುನರುಚ್ಚರಿಸಿದ ಮಹಿಳೆಯರು, ತಮ್ಮ ಕಳವಳ ಮತ್ತು ಅಭಿಪ್ರಾಯಗಳನ್ನು ಅಫಿಡವಿಟ್‌ನಲ್ಲಿ ಪಟ್ಟಿ ಮಾಡಲಾಗಿದ್ದು, ರಾಷ್ಟ್ರ ವಿರೋಧಿ ಮತ್ತು ಪಾಕಿಸ್ತಾನಿಗಳೆಂದು ಹಣೆಪಟ್ಟಿ ಕಟ್ಟಿರುವುದಕ್ಕೆ ತೀವ್ರ ದುಃಖವನ್ನು ತೋಡಿಕೊಂಡಿದ್ದಾರೆ ಎಂದು ಹಬೀಬುಲ್ಲಾ ಸುಪ್ರೀಂ ಕೋರ್ಟ್‌‌ಗೆ ತಿಳಿಸಿದ್ದಾರೆ.

“ಅವರು ದೇಶದ ಹೆಮ್ಮೆಯ ಪ್ರಜೆಗಳಾಗಿದ್ದರೂ ಸಹ ಅವರ ಬಗ್ಗೆ ವಿವಿಧ ರಾಜಕೀಯ ಭಾಷಣಗಳಲ್ಲಿ ಮತ್ತು ಮಾಧ್ಯಮಗಳ ಒಂದು ವಿಭಾಗವು ರಾಷ್ಟ್ರ ವಿರೋಧಿ / ಹೊರಗಿನವರು / ದೇಶದ್ರೋಹಿಗಳು / ಪಾಕಿಸ್ತಾನಿಗಳು ಎಂದು ಬಿಂಬಿಸಿರುವುದಕ್ಕೆ ತೀವ್ರವಾಗಿ ದುಃಖಿತರಾಗಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ “ಅವರ ಉಳಿವು ಮತ್ತು ಅಸ್ತಿತ್ವಕ್ಕೆ ಮರಣದಂಡನೆಯಾಗಿ ಪರಿಣಮಿಸಿದೆ.” ಹಾಗಾಗಿ ಮಹಿಳೆಯರು ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ವಿರುದ್ಧ ಶಾಂತಿಯುತ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಪ್ರತಿಭಟನೆಗಾಗಿ ಅದೇ ನಿರ್ದಿಷ್ಟ ತಾಣವನ್ನು ಆರಿಸಿಕೊಂಡಿದ್ದೇಕೆ ಎಂಬ ಪ್ರಶ್ನೆಗೆ “ಆ ರಸ್ತೆಯು ಶಾಹೀನ್‌ ಬಾಗ್‌ ಏರಿಯಾದ ಮಧ್ಯಭಾಗದಲ್ಲಿದ್ದು, ಇದು ಅವರಿಗೆ ಅಗತ್ಯವಾದ ಭದ್ರತೆಯನ್ನು ನೀಡುತ್ತದೆ. ಬೇರೆ ಯಾವುದೇ ಸ್ಥಳದಲ್ಲಿ ಪ್ರತಿಭಟನೆ ನಡೆದರೆ ಎದುರಾಗಬಹುದಾದ ಬೆದರಿಕೆ ಮತ್ತು ದಾಳಿಯ ಸಾಧ್ಯತೆಗಳು ಇಲ್ಲಿ ಗಣನೀಯವಾಗಿ ಕಡಿಮೆಯಿವೆ” ಎಂದು ಉತ್ತರಿಸಿದ್ದಾರೆ.

ಪ್ರತಿಭಟನೆಯೊಂದಿಗೆ ಸಂಪರ್ಕವಿಲ್ಲದ ರಸ್ತೆಗಳನ್ನು ಪೊಲೀಸರು ಅನಗತ್ಯವಾಗಿ ಬ್ಯಾರಿಕೇಡ್ ಹಾಡಿ ಬಂದ್‌ ಮಾಡುವ ಮೂಲಕ “ಪ್ರತಿಭಟನಾಕಾರರು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಪ್ಪಾಗಿ ಅರ್ಥೈಸಲಾಗುತ್ತಿದೆ” ಆ ರಸ್ತೆಗಳನ್ನು ಪೊಲೀಸರು ನಿರ್ಬಂಧಸಿರುವುದರಿಂದಲೇ ಅಸ್ತವ್ಯಸ್ತ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಅಫಿಡವಿಟ್‌ನಲ್ಲಿ ಹಬೀಬುಲ್ಲಾ ಹೇಳಿದ್ದಾರೆ.

ಕಳೆದ ಸೋಮವಾರ, ಸುಪ್ರೀಂ ಕೋರ್ಟ್ ಹಿರಿಯ ವಕೀಲ ಸಂಜಯ್ ಹೆಗ್ಡೆ ಮತ್ತು ವಕೀಲೆ ಸಾಧನಾ ರಾಮಚಂದ್ರನ್ ಅವರಿಗೆ ಪ್ರತಿಭಟನಾಕಾರರೊಂದಿಗೆ ಮಧ್ಯಸ್ಥಿಕೆ ವಹಿಸಿ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ಮುಂದಾಗಿದೆ.

ಪ್ರತಿಭಟಿಸುವ ಹಕ್ಕು ಮೂಲಭೂತ ಹಕ್ಕು ಎಂದು ನ್ಯಾಯಾಲಯ ಹೇಳಿದ್ದು, ಆದರೆ ಇಂತಹ ಪ್ರತಿಭಟನೆಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅನಿರ್ದಿಷ್ಟ ಅವಧಿಯವರೆಗೆ ನಡೆಸಲಾಗುವುದಿಲ್ಲ ಎಂದು ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...