Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...