Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...