Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...