Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...