Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...