Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

ಸರ್ಕಾರ ಮಾಡಬೇಕಾದ್ದನ್ನು ಮಾಡಿ, ಜನರನ್ನೂ ಕ್ರಿಯಾಶೀಲರನ್ನಾಗಿಸುವ ಸಮಯವಿದು

- Advertisement -
- Advertisement -

ಕೊರೋನಾ ಮಹಾಮಾರಿ ವಿರುದ್ಧ ಸಮರ ಹೂಡಿ ಆಗಿದೆ. ರೋಗದ ಪತ್ತೆಯ ಕೆಲಸವನ್ನು ಇನ್ನೂ ಮೊದಲೇ ಆರಂಭಿಸಬಹುದಿತ್ತು. 40 ಕೋಟಿ ಜನರನ್ನು ಬಡತನದಲ್ಲಿಡಲಾಗಿದೆ. ಇವರಿಗೆ ಯಾವ ಜೀವಭದ್ರತೆಯೂ ಇಲ್ಲ. ಊಟ ಮೊದಲೇ ಇಲ್ಲ. ಇವರು ಹೇಗೆ ಜೀವಿಸಬೇಕು? ವಲಸಿಗ ಕಾರ್ಮಿಕರ ಪರಿಸ್ಥಿತಿಯಂತೂ ಇನ್ನೂ ಘನಘೋರ; ಮಹಮದೀಯರೆ ರೋಗ ಹರಡಲು ಕಾರಣರು ಎಂದು ಜನತೆಯ ಮನಸ್ಸಿನಲ್ಲಿ ವಿಷ ಬಿಜ ಬಿತ್ತಿ ಹಿಂದುರಾಷ್ಟ್ರ ಆಗಬೇಕೆನ್ನುವ ಹುಂಬರು, ತಲೆಕೆಟ್ಟವರಂತೆ ಮಾತನಾಡುತ್ತಾ, ಜನರ ಮನಸ್ಸಿನಲ್ಲಿ ಕೋಮುವ್ಯಾಧಿ ಕೆರಳುವಂತೆ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರ ತನ್ನ ಮೌನದ ಮೂಲಕ ಅವರ ನಿಲುವನ್ನು ಸಮರ್ಥಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬಿಜೆಪಿ ಸ್ಥಾಪನೆಯ 40ನೇ ವರ್ಷದ ದಿನದಂದೇ ಎಲ್ಲರು ರಾತ್ರಿ ಒಂಭತ್ತು ಘಂಟೆಯಿಂದ 9 ನಿಮಿಷ ಕಾಲ ಮೋಂಬತ್ತಿ ಹತ್ತಿಸಬೇಕೆಂದು ಫರ್ಮಾನ್ ಹೊರಡಿಸುವ ಮೂಲಕ ಕೊರೋನಾದ ದುರುಪಯೋಗ ಮಾಡಿಕೊಂಡದ್ದು ಸರಿಯೇ ಎಂದು ಪ್ರಶ್ನಿಸುವವರಿದ್ದಾರೆ. ಭಾರತದ ಕೊನೇ ಪಕ್ಷ ಹತ್ತು ಕೋಟಿ ಜನ ಆ ದಿನ ಮೋಂಬತ್ತಿ ಹಚ್ಚಿದ್ದರೆ, ಮೋಂಬತ್ತಿಗೆ 20 ಕೋಟಿ ರೂಗಳನ್ನು ವೆಚ್ಚ ಮಾಡಿದಂತಾಯಿತು. ಅದೇ 20 ಕೋಟಿಯನ್ನು ಕೊರೋನಾ ತಡೆಗಟ್ಟುವುದಕ್ಕೆ ಉಪಯೋಗಿಸಬಹುದಿತ್ತು, ಇಲ್ಲವೇ ಒಂದಷ್ಟು ಜನರಿಗೆ ಊಟ ಕೊಡಬಹುದಾಗಿತ್ತಲ್ಲವೇ ಎಂದು ಕೇಳುವವರೂ ಇದ್ದಾರೆ. ಇವೆಲ್ಲಕ್ಕಿಂತ ಮೊದಲು ಕೇಳುವ ಪ್ರಶ್ನೆ ಒಂದು ತಿಂಗಳ ಹಿಂದೆಯೇ ಕೊರೋನಾ ಹರಡುತ್ತಿರುವ ಸುದ್ದಿ ಸರ್ಕಾರಕ್ಕೆ ಗೊತ್ತಾದರೂ ಕೂಡಲೆ ಕ್ರಮ ಕೈಗೊಳ್ಳಲಿಲ್ಲ ಎಂಬುದು. ಇದೆಲ್ಲದಕ್ಕೂ ಮೋದಿ ಅವರ ಉತ್ತರ ‘ದಿವ್ಯಮೌನ’. ಇದು ಎಲ್ಲರಿಗೂ ತಿಳಿದ ವಿಷಯ; ಮೋದಿಜಿ ತಮಗೆ ತೋಚಿದ್ದನ್ನು ಹೇಳುವವರೇ ಹೊರತು ಜನ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಜಾಯಮಾನದವರಲ್ಲ. ತಮಗೆ ಬೇಕಾದರೆ ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿ ಕೇಳಿದ ಪ್ರಶ್ನೆಗೂ ಉತ್ತರ ಕೊಡುತ್ತಾರೆ. ಆದರೆ ಈ ಗಹನ ವಿಚಾರಕ್ಕಲ್ಲ. ಬಿಜೆಪಿ ಸಂಘಪರಿವಾರದ ಕೆಲವರನ್ನು ಸಾಕಿಕೊಂಡಿದ್ದಾರೆ ಮೋದಿ. ಈ ಮತಾಂಧರು ನೂರು ಸಾರಿ ವಿಷಕಾರಿದರೂ ಮೋದಿ ಮತ್ತು ಷಾ ಅವರನ್ನು ಪ್ರಶ್ನಿಸುವುದಿಲ್ಲ. ಅದಕ್ಕೆ ಕಾರಣ ಅವರೆಲ್ಲ Hidden Agendaಗೆ ಅನುಗುಣವಾಗಿ ಮಾತನಾಡುವ (ಅಪ) ಪ್ರಚಾರಕರು!

ಇವೆಲ್ಲ ಒತ್ತಟ್ಟಿಗಿರಲಿ. ಈಗ ಸರ್ಕಾರ ಮಾಡಬೇಕಾದ್ದೇನು? ನಾವು ಅದನ್ನು ಕುರಿತು ಯೋಚನೆ ಮಾಡುವ. ಎಂದಿನಂತೆಯೇ ನಾವು ಮುಂದೆಯೂ People’s curfew, 144ನೇ ಸೆಕ್ಷನ್ ಜಾರಿ ಇವುಗಳನ್ನೇ ಮುಂದುವರೆಸಿಕೊಂಡೇ ಹೋಗುವುದೇ? ಇಲ್ಲವೇ ಜನರಿಗೆ ರೋಗದ ಬಗ್ಗೆ ತಿಳುವಳಿಕೆ ಕೊಟ್ಟು, ಅವರನ್ನು ಜಾಗೃತಗೊಳಿಸುವುದೇ? ಇದುವರೆಗೆ ಸರ್ಕಾರ ಮಾಡಿರುವುದೆಲ್ಲ ಇದನ್ನೆ. ಇದು ಮಾಬಾಪ್ ಸರ್ಕಾರ ಎಂದು ಜನ ಭಾವಿಸಿದ್ದಾರೆ. ರೋಗ ಬಂದರೆ ಸರ್ಕಾರ ಅದನ್ನು ತಡೆ ಹಿಡಿಯುತ್ತದೆ. ನಾವ್ಯಾಕೆ ಅದಕ್ಕೆ ತಲೆ ಕೆಡಿಸಿಕೊಳ್ಳಬೇಕು ಎಂದುಕೊಂಡು ಜನ ಜಡರಾಗುತ್ತಿದ್ದಾರೆ. ಬಿಹಾರದಲ್ಲಿ ಗಂಗಾ ನದಿ ಪ್ರವಾಹ ಬಂದು ಕೊಚ್ಚಿಕೊಂಡು ಹೋಗುವ ಸೂಚನೆ ಇದ್ದಾಗಲೂ ಜನ ಸಿನಿಮಾಕ್ಕೆ ಹೋಗಿ ಕೂತಿರುತ್ತಾರಂತೆ. ಮಾಬಾಪ್ ಗೌರ್ನಮೆಂಟ್ ನಮ್ಮನ್ನು ಪ್ರವಾಹದಿಂದ ರಕ್ಷಣೆ ಮಾಡುತ್ತದೆ ಎಂಬ ನಂಬಿಕೆಯಿಂದ. ಪ್ರವಾಹ ಬರುವುದಿದ್ದರೆ ಎಲ್ಲಿಗೆ ಹೋಗಬೇಕು? ಮರ ಹತ್ತಿ ಕೂಡೋಣವೇ, ಗಂಗಾ ನದಿಯಿಂದ ದೂರವಿರುವ ಗ್ರಾಮಕ್ಕೆ ಹೋಗಿ ತಾತ್ಕಾಲಿಕವಾಗಿ ರಕ್ಷಣೆ ಪಡೆಯಬೇಕೇ ಎಂದು ಹಿಂದಿನ ದಿನಗಳಲ್ಲಿ ಜನ ಯೋಚಿಸುತ್ತಿದ್ದರು. ಈಗಿನ ಜನ ಸರ್ಕಾರ ನಮ್ಮ ರಕ್ಷಣೆ ಮಾಡುತ್ತದೆ, ನಾವೇಕೆ ತಲೆ ಕೆಡಿಸಿಕೊಳ್ಳಬೇಕು ಎನ್ನುತ್ತಾರೆ.

ಸರ್ಕಾರ ತಾನೇನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡಿ ಇನ್ನಾದರೂ ಜನತೆಗೆ ‘ನಿಮ್ಮ ಜವಾಬ್ದಾರಿ ನಿರ್ವಹಿಸಿ, ರೋಗ ಹರಡದಂತೆ ತಡೆಗಟ್ಟಲು ನೀವೇನೂ ಮಾಡಬೇಕೋ ವಿಚಾರ ಮಾಡಿ’ ಎಂದು ತಿಳಿಸಬೇಕು. ಕರ್ತವ್ಯ ನಿರ್ವಹಣೆ ಮಾಡಿ ಎಂದು ತಿಳುವಳಿಕೆ ನೀಡಿ ಜನರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ಪರಿವರ್ತಿಸಬೇಕು. ಈಗ ಜನರನ್ನ ಮೋದಿ ವಿಚಾರ ಶೂನ್ಯರನ್ನಾಗಿ ಮಾಡಿದೆ. ಬೇಜವಾಬ್ದಾರಿಯಿಂದ ನಡೆಸಿಕೊಳ್ಳಲು ಬೇಕಾದ ವಾತಾವರಣ ಸೃಷ್ಟಿ ಮಾಡಿದೆ. ಇನ್ನಾದರೂ ಎಚ್ಚೆತ್ತು ಸರ್ಕಾರ ಸಮಾಜದ ವಿಚಾರವಂತರು ಏನು ಮಾಡಬೇಕು? ಕಾರ್ಮಿಕರು ಏನು ಮಾಡಬೇಕು, ವಿದ್ಯಾರ್ಥಿಗಳು ಯುವಕರು ಏನು ಮಾಡಬಹುದು? ಜನಸಾಮಾನ್ಯರು ಅನುಸರಿಸಬೇಕಾದ ನಿಯಮಗಳೇನು? ಎಂಬುದನ್ನು ಕುರಿತು ಅವರಿಗೆಲ್ಲ ಹೇಳಬೇಕು. ರಚನಾತ್ಮಕ ಸಲಹೆಗಳನ್ನು ಅವರಿಗೆ ನೀಡಬೇಕು. ಒಟ್ಟಿನಲ್ಲಿ ಜನಜಾಗೃತಿ ಮೂಡಿಸಿ ಅವರೆಲ್ಲ ಜವಬ್ದಾರಿಯಿಂದ ವರ್ತಿಸುವಂತೆ ಪ್ರೇರಣೆ ನೀಡಬೇಕು.


ಇದನ್ನು ಓದಿ: ಸಂಘ ಪರಿವಾರಕ್ಕೆ ಎಚ್.ಎಸ್.ದೊರೆಸ್ವಾಮಿಯವರೇ ಟಾರ್ಗೆಟ್‌ ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಒಳ್ಳೆ ಉಡುಪು, ಮೇಕಪ್…ಅಪರೂಪಕ್ಕೊಮ್ಮೆ ಬೆಚ್ಚಿಬೀಳಿಸುವ ಮವ್ನಿ ಬಾಬಾನಂತೆ…ಅಬ್ಬಾ! ನಾಡಿಗೆ ಉಳಿಗಾಲವುಂಟೆ!

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...