Homeಮುಖಪುಟಮನುಷ್ಯ ಧರ್ಮವನ್ನು ಪಾಲಿಸೋಣ : ಧರ್ಮದ್ವೇಷ ಬೇಡವೆಂದು ಒಗ್ಗಟ್ಟು ಸಾರಿದ ಪ್ರಜ್ಞಾವಂತರು.

ಮನುಷ್ಯ ಧರ್ಮವನ್ನು ಪಾಲಿಸೋಣ : ಧರ್ಮದ್ವೇಷ ಬೇಡವೆಂದು ಒಗ್ಗಟ್ಟು ಸಾರಿದ ಪ್ರಜ್ಞಾವಂತರು.

ಈ ದೇಶದ ಭವಿಷ್ಯವೇ ಆಗಿರುವ ಯುವ ಮಿತ್ರರ ಮೇಲೆ ಈ ಸಮಯದಲ್ಲಿ ದೊಡ್ಡ ಹೊಣೆಗಾರಿಕೆ ಇದೆ. ಪ್ರೀತಿಯಲ್ಲಿ ವಿಶ್ವಾಸವಿಟ್ಟಿರುವ ಯುವ ಪೀಳಿಗೆ ದ್ವೇಷವನ್ನು ಹುಟ್ಟುಹಾಕುವ, ಸಮಾಜವನ್ನು ಒಡೆಯುವ ರಾಜಕೀಯವನ್ನು ಒಪ್ಪಬಾರದೆಂದು ಅಭಿಮಾನದೊಂದಿಗೆ ಒತ್ತಾಯಿಸುತ್ತಿದ್ದೇವೆ.

- Advertisement -
- Advertisement -

ಕೊರೊನಾ ಕಾಲದಲ್ಲಿ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಅಪಪ್ರಚಾರ, ಸುಳ್ಳು ಸುದ್ದಿಗಳ ವಿರುದ್ಧ ಒಂದಾಗಿ ಹೋರಾಡೋಣ ಎಂಬ ಆಶಯದಿಂದ ನೂರಾರು ಪ್ರಜ್ಞಾವಂತರು ಜಂಟೀ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣ ಪಾಠ ಕೆಳಗಿನಂತಿದೆ.

ಒಗ್ಗಟ್ಟಿನ ಪತ್ರಿಕಾ ಹೇಳಿಕೆ

ನಾಡಿನ ಜನತೆಯಲ್ಲಿ ನಮ್ಮೆಲ್ಲರ ಒಕ್ಕೊರಲ ಮನವಿ:

ಇದು, ನಾವು ಹೆಚ್ಚು ಮನುಷ್ಯರಾಗುವ ಕಾಲ

ಪ್ರೀತಿ, ಶಾಂತಿ, ಸರ್ವರ ಕ್ಷೇಮವೇ ನಮ್ಮೆಲ್ಲರ ಆದ್ಯತೆಯಾಗಲಿ. ಎಲ್ಲರೂ ಒಟ್ಟಿಗೆ ಬಾಳೋಣ! ಸುರಕ್ಷಿತವಾಗಿರೋಣ!

ಒಂದು ಕೋಮನ್ನು ಗುರಿ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಮುಖ್ಯಮಂತ್ರಿಗಳ ಘೋಷಣೆಯನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ.

ಎಚ್ಚರಿಕೆ ಮಾತ್ರ ಸಾಲದು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ.

ಮಾನ್ಯರೇ,
ಕೋವಿಡ್-19 ಮಹಾಮಾರಿ ತಂದಿಟ್ಟಿರುವ ಬಿಕ್ಕಟ್ಟು, ಸಂಕಟಮಯ ಪರಿಸ್ಥಿತಿ: ಸಾವು ಬದುಕುಗಳ ಹೋರಾಟಗಳ ಕಾಲದಲ್ಲಿಯೂ ಹಳ್ಳಿ ಹಳ್ಳಿಯ ಮೂಲೆ ಮೂಲೆಯ ಮನೆಗಳಿಗೂ ಕರೋನಾಗಿಂತ ವೇಗವಾಗಿ ಹಬ್ಬುತ್ತಿರುವ ಮುಸ್ಲಿಂ ದ್ವೇಷವನ್ನು ನೋಡಿ ಅತ್ಯಂತ ನೋವಾಗುತ್ತಿದೆ. ಇಂಥ ಸಂಕಟದ ಪರಿಸ್ಥಿತಿಯಲ್ಲೂ ಕೋಮು ದ್ವೇಷವೇ? ‘ವಸುದೈವಕುಟುಂಬಕಂ’ ಎಂದು ಸಾರಿದ ಮಹೋಪನಿಷತ್, ಭ್ರಾತೃತ್ವವನ್ನು ತನ್ನೆದೆಯಲ್ಲಿ ಸೃವಿಸಿದ ನಮ್ಮ ಸಂವಿಧಾನ ಇವುಗಳು ಈ ನೆಲದ ಹಿರಿಮೆಯೆಂದು ಇನ್ನು ಮುಂದೆಯೂ ಹೇಳಬಲ್ಲೆವೇ?

ದೇಶಕ್ಕೆ ಆಪತ್ತು ಎದುರಾಗಿದೆ, ದೇಹಕ್ಕೆ ಬಾಣ ಬಂದು ನೆಟ್ಟಿದೆ. ಬಾಣವನ್ನು ತೆಗೆದು ಗಾಯವನ್ನು ಗುಣಮಾಡುವುದು ಮುಖ್ಯವೇ ಹೊರತು, ಇದು ಯಾವ ಬಣ್ಣದ ಬಾಣ, ಯಾವ ಬಣದ ಬಾಣ, ಯಾವ ಪ್ರದೇಶದ ಬಾಣ ಎಂದು ಪರಸ್ಪರ ದೂಷಿಸುತ್ತ ಕೂಡುವುದಲ್ಲ. ರೋಗ-ರೋಗಾಣುವಿನ ಕಾರಣವಾಗಿ ಯಾರನ್ನೇ ಆದರೂ ಅವಮಾನಿಸುವುದು, ಅನುಮಾನಿಸುವುದು, ದ್ವೇಷಿಸುವುದು ಮಾನವೀಯತೆಯಲ್ಲ. ವೈರಸ್ ಅಳಿದ ಮೇಲೂ ನಾವು ಉಳಿದಿರುತ್ತೇವೆ, ಅಲ್ಲವೇ. ಎಂದೇ, ನಮ್ಮ ನೆಲದ ಸುಂದರ ಬಾಳುವೆಯ ನೇಯ್ಗೆ ಹಾಳುಗೆಡವದಂತೆ ನಮ್ಮೆಲ್ಲರ ನಡೆನುಡಿಗಳು ಪ್ರೇಮಮಯವಾಗಿರಬೇಕಲ್ಲವೆ?

ಕೊರೋನಾ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಎಲ್ಲಾ ಧರ್ಮೀಯರೂ ಸಹಕರಿಸುತ್ತಿದ್ದಾರೆ. ಎಲ್ಲಾ ಕೋಮಿನ ಸ್ವಯಂ ಸೇವಕರು ತಮ್ಮ ಹಿತವನ್ನು ಬದಿಗಿಟ್ಟು ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಪರದಾಡುತ್ತಿದ್ದಾರೆ. ಹಲವರು ಶಕ್ತಿ ಮೀರಿ ದಾನ-ಧರ್ಮ ಮಾಡುತ್ತಿದ್ದಾರೆ. ಇದರಲ್ಲಿ ಮುಸ್ಲಿಮರೂ ಇದ್ದಾರೆ ಎಂಬುದನ್ನು ನಾವು ಮರೆಯುವಂತಿಲ್ಲ. ಅಜೀಂ ಪ್ರೇಮ್‌ಜಿ ಪರಿಹಾರ ನಿಧಿಗೆ 1125 ಕೋಟಿ ನೀಡಿದ್ದನ್ನು, ಸಿಪ್ಲಾ ಕಂಪನಿಯ ಯೂಸುಫ್ ಹಮೀದ್‌ ಅತಿಕಡಿಮೆ ಬೆಲೆಯಲ್ಲಿ ಅತ್ಯನ್ನತ ಉಪಕರಣಗಳನ್ನು ತಯಾರಿಸಿ ಕೊಟ್ಟಿರುವುದನ್ನು ನಾವು ಸ್ಮರಿಸದಿರೋಣವೆ. ಕೋಲಾರದ ತಜ್ಮುಲ್ ಪಾಷ ಮತ್ತು ಸೋದರ ಮುಜಾಮಿಲ್ ಪಾಷ ತಮ್ಮ ನಿವೇಶನವನ್ನೇ ಮಾರಿ, ಆ ಹಣದಲ್ಲಿ ಹಸಿದವರಿಗೆಲ್ಲಾ ನಿತ್ಯ ಆಹಾರ ಸೇವೆ ಮಾಡುತ್ತಿರುವುದನ್ನು, ಕರೆ ಮಾಡಿದವರ ಬಾಗಿಲಿಗೆ ಕಾಳುಕಡ್ಡಿ ತಲುಪಿಸುತ್ತಿರುವುದನ್ನು ಮರೆಯಲಾದರೂ ಸಾಧ್ಯವೆ?


ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್! 


ಅದೇ ಹೊತ್ತಲ್ಲಿ ಕೊರೋನಾವನ್ನು ಉಪೇಕ್ಷಿಸುವ, ಅದನ್ನು ದುರುದ್ದೇಶಕ್ಕೆ ಬಳಸುವ ವ್ಯಕ್ತಿಗಳು, ಶಕ್ತಿಗಳು ಎಲ್ಲಾ ಕೋಮಿನಲ್ಲೂ ಇದ್ದಾರೆ. ‘ಉಗುಳಿ, ಸೀನಿ’ ಎಂದು ಅಸಂಬದ್ಧವಾಗಿ ಕರೆಕೊಟ್ಟ ಒಬ್ಬ ತಲೆಕೆಟ್ಟ ಸಾಫ್ಟ್‌ವೇರ್ ಉದ್ಯೋಗಿ ಮುಸ್ಲಿಮನಾಗಿರಬಹುದು. ಲಾಕ್‌ಡೌನ್‌ ಇದ್ದಾಗಲೂ 12 ಜನರು ಮಸೀದಿಗೆ ಹೋಗಿದ್ದು ತಪ್ಪು. ತಬ್ಲೀಘ್ ಸಭೆಗೆ ಹೋಗಿದ್ದೂ ಕೆಲವರು ತಿಳಿಸದೇ ಇದ್ದದ್ದು ಖಂಡಿತವಾಗಿ ದೊಡ್ಡ ತಪ್ಪು. ಇಂಥ ತಪ್ಪನ್ನು ಇತರೆ ಧರ್ಮದ ವ್ಯಕ್ತಿಗಳೂ ಮಾಡಿದ್ದಾರೆ. ಕೆಲವರು ಮಾಡಿದ ಮೂರ್ಖತನ, ಅವಿವೇಕತನಗಳು ಮನುಷ್ಯ ಸಹಜವಾದರೂ ಕೆಲವು ಘಟನೆಗಳನ್ನು ಮುಂದೆಮಾಡಿಕೊಂಡು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷದಿಂದ ನೋಡುವಂತೆ ಸಮಾಜವನ್ನು ಪ್ರಚೋದಿಸಲಾಗುತ್ತಿದೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಸರಕಾರದೊಂದಿಗೆ ಸಹಕರಿಸಬೇಕು, ಕೋವಿಡ್ ಕಾಯಿಲೆಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಸಲಹೆಗಳನ್ನು ಪಾಲಸಬೇಕು. ಹಾಗೂ ನೆರೆಹೊರೆಯಲ್ಲಿ ಯಾರಾದರೂ ಅದನ್ನು ಉಲ್ಲಂಘಿಸಿದಲ್ಲಿ ಸಾಧ್ಯವಾದರೆ ತಿಳಿಹೇಳಬೇಕು, ಇಲ್ಲವಾದರೆ ಅಧಿಕಾರಿಗಳ ಗಮನಕ್ಕೆ ತರಬೇಕು. ಆದರೆ ಜಾತಿ/ಧರ್ಮ/ಪಂಗಡದ ಹೆಸರಿನಲ್ಲಿ ದ್ವೇಷ ಬಿತ್ತುವ ಪ್ರಚಾರಕ್ಕೆ ಕೈ ಜೋಡಿಸಬಾರದೆಂದು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ. ಈ ದೇಶದ ಭವಿಷ್ಯವೇ ಆಗಿರುವ ಯುವ ಮಿತ್ರರ ಮೇಲೆ ಈ ಸಮಯದಲ್ಲಿ ದೊಡ್ಡ ಹೊಣೆಗಾರಿಕೆ ಇದೆ. ಪ್ರೀತಿಯಲ್ಲಿ ವಿಶ್ವಾಸವಿಟ್ಟಿರುವ ಯುವ ಪೀಳಿಗೆ ದ್ವೇಷವನ್ನು ಹುಟ್ಟುಹಾಕುವ, ಸಮಾಜವನ್ನು ಒಡೆಯುವ ರಾಜಕೀಯವನ್ನು ಒಪ್ಪಬಾರದೆಂದು ಅಭಿಮಾನದೊಂದಿಗೆ ಒತ್ತಾಯಿಸುತ್ತಿದ್ದೇವೆ.

ಕರೋನಾ ಪಿಡುಗು, ವಲಸೆ ಕಾರ್ಮಿಕರ ಸಂಕಷ್ಟಗಳು, ನಾಳಿನ ಅನಿಶ್ಚಿತತೆಗಿಂತ ಕೋಮು ದ್ವೇಷವೇ ಹೆಚ್ಚು ನೋವು ಬರಿಸುವ ಸಂಗತಿಯಾಗಿದೆ. ಕೊರೋನಾ ಸೋಂಕಿನ ಈ ಬಿಕ್ಕಟ್ಟಿನ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಮಾಡಿ ನಡೆಸುತ್ತಿರುವ ಸುಳ್ಳು ಪ್ರಚಾರ ನಿಲ್ಲಬೇಕು. ಆ ರೀತಿ ನಡೆಸುತ್ತಿರುವವರ ವಿರುದ್ಧಕಠಿಣ ಕ್ರಮ ಕೈಗೊಳ್ಳುತ್ತೇವೆಂಬ ಮುಖ್ಯಮಂತ್ರಿಯವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯ ಸರಕಾರವು ಅದನ್ನು ಕಟ್ಟುನಿಟ್ಟಾಗಿ ಮಾಡಬೇಕೆಂದು ಆಗ್ರಹಿಸುವುದರ ಜೊತೆಗೆ ನಮ್ಮೀ ಸಮಾಜದಲ್ಲಿ ಎಲ್ಲರೂ ಮನುಷ್ಯ ಧರ್ಮವನ್ನು ಪಾಲಿಸೋಣ ಎಂದು ಸಮಾಜದ ಎಲ್ಲರನ್ನೂ ಆಗ್ರಹಿಸುತ್ತೇವೆ. ಪ್ರೀತಿ, ಶಾಂತಿ, ಸರ್ವರಕ್ಷೇಮವೇ ನಮ್ಮೆಲ್ಲರ ಆದ್ಯತೆಯಾಗಲಿ. ಎಲ್ಲರೂ ಒಟ್ಟಿಗೆ ಬಾಳೋಣ! ಸುರಕ್ಷಿತವಾಗಿರೋಣ!

ಒಮ್ಮತದ ಸಹಿ:

– ದೇವನೂರು ಮಹಾದೇವ, ಗಣೇಶದೇವಿ, ಹೆಚ್. ಎಸ್. ದೊರೆಸ್ವಾಮಿ, ಜಿ. ರಾಮಕೃಷ್ಣ, ಎಸ್.ಜಿ.ಸಿದ್ದರಾಮಯ್ಯ, ಎಸ್. ಆರ್. ಹಿರೇಮಠ, ಪ್ರಸನ್ನ, ಇಂದಿರಾ ಕೃಷ್ಣಪ್ಪ, ತೋಂಟದ ಸಿದ್ದರಾಮ ಸ್ವಾಮೀಜಿ ಗದಗ, ನಾಗೇಶ ಹೆಗಡೆ, ದಿನೇಶ್‌ಅಮಿನಮಟ್ಟು, ಶಿವಸುಂದರ್, ಮುಜಫರ್‌ಅಸ್ಸಾದಿ, ಮಾಲತಿ ಪಟ್ಟಣಶೆಟ್ಟಿ, ಡಾ. ಸಬೀಹಾ ಭೂಮಿಗೌಡ, ನಟರಾಜ್ ಬೂದಾಳ, ಜಿ.ರಾಜಶೇಖರ, ಫಣಿರಾಜ, ವಿಜಯಮ್ಮ, ರವಿ ಕೋಟಿ, ಇಂದೂಧರ ಹೊನ್ನಾಪುರ, ಡಾ. ವಿ.ಎನ್.ಲಕ್ಷ್ಮಿನಾರಾಯಣ, ಪಿಚ್ಚಳ್ಳಿ ಶ್ರೀನಿವಾಸ್, ಮುಜೀಬ್, ಡಾ.ಎಚ್.ಎಸ್.ಅನುಪಮ, ತಾಹೀರ್ ಹುಸೇನ್, ಅಬ್ದುಲ್ ಸಲಾಂ ಪುತ್ತಿಗೆ, ಬಿ. ಸುರೇಶ್, ನಗರಗೆರೆರಮೇಶ್, ರೂಪ ಹಾಸನ, ವಿ.ಎಸ್.ಶ್ರೀಧರ್, ನಗರಿ ಬಾಬಯ್ಯ, ರಾಘವೇಂದ್ರ ಕುಷ್ಟಗಿ, ಡಾ.ಎಚ್.ವಿ.ವಾಸು, ಡಾ. ಗೋಪಾಲ ದಾಬಡೆ, ಶಿವಾಜಿ ಕಾಗಣೀಕರ, ಬಸವರಾಜ ಸೂಳಿಬಾವಿ, ಶ್ರೀಪಾದ ಭಟ್, ಕ್ಲಿಫ್ಟನ್‌ರೊಝಾರಿಯೋ, ವಿನಯ್, ಇರ್ಷದ್‌ಅಹ್ಮದ್‌ದೇಸಾಯಿ, ಸಂತೋಷ ಕೌಲಗಿ ಮೇಲುಕೋಟೆ, ಯೂಸುಫ್‌ಕುನ್ನಿ, ಹರ್ಷ ಕುಮಾರ್ ಕುಗ್ವೆ, ದೇವಾನಂದ ಜಗಾಪುರ, ಕೆ.ಎಲ್.ಅಸೋಕ್, ತಾಜುದ್ದೀನ್, ರಾಘವೇಂದ್ರ (ಸಾಗರ), ಎ.ಎಸ್. ಪ್ರಭಾಕರ್, ಮೊಹಮ್ಮದ್‌ಕಿಕ್ಕಿಂಜೆ, ಮೀನಾಕ್ಷಿ ಬಾಳಿ, ಡಾ. ಭೂಮಿಗೌಡ, ಡಾ.ಷಕೀರಾಖಾನುಮ್, ಕೆ.ನೀಲಾ, ಜಿ.ಎನ್.ನಾಗರಾಜ್, ಬಿ.ಎ.ಕೆಂಜರೆಡ್ದಿ, ಬಿ.ಶ್ರೀನಿವಾಸ್, ಪ್ರಹ್ಲಾದ ಕಟ್ಟಿಮನಿ, ಕೇಸರಿ ಹರವೂ, ಡಾ. ಹೇಮಾ ಪಟ್ಟಣಶೆಟ್ಟಿ, ಡಾ. ಸಬಿತಾ ಬನ್ನಾಡಿ, ವಾಣಿ ಪೆರಿಯೋಡಿ, ಡಾ. ಶಿವಾನಂದ ಶೆಟ್ಟರ, ಜ.ನಾ. ತೇಜಶ್ರೀ, ಸಿ.ಎಚ್.ಭಾಗ್ಯ, ಡಾ.ಡಿ.ಬಿ.ಗವಾನಿ, ಸ್ವರ್ಣ ಭಟ್, ಮುತ್ತು ಬಿಳಿಯಲಿ, ರೇಣುಕಾ ನಿಡಗುಂದಿ ದೆಹಲಿ, ಯೋಗೇಶ್ ಮಾಸ್ಟರ್, ಶರೀಫ್ ಬಿಳಿಯಲಿ, ಕೆ.ಪಿ.ಸುರೇಶ, ಮೂಡ್ನಾಕೂಡು ಚಿನ್ನಸ್ವಾಮಿ, ಫಾದರ್ ವಿನೋದ ಪಾಲ, ಹಸನ್ ನಯೀಂ ಸುರಕೋಡ, ಸುನಂದಾ ಕಡಮೆ, ಶಾರದಾ ಗೋಪಾಲ, ಲಿನೆಟ್ ಡಿಸೋಜ, ವಸುಂಧರಾ ಭೂಪತಿ, ಚಂದ್ರಕಾಂತ ವಡ್ಡು, ಕೆ.ವೆಂಕಟರಾಜು, ಡಾ. ಬಸವರಾಜ ಸಾದರ, ಡಾ.ಧರಣೇಂದ್ರ ಕುರಕುರಿ, ನಾ. ದಿವಾಕರ ಮೈಸೂರು, ರವೀಂದ್ರ ಹಳಿಂಗಳಿ, ಸಿ.ಎಂ.ಅಂಗಡಿ ದೆಹಲಿ, ರಮಜಾನ್‌ದರ್ಗಾ, ಡಾ.ಪುರುಷೋತ್ತಮ ಬಿಳಿಮಲೆ, ಬಿ.ಸುಜ್ಞಾನ ಮೂರ್ತಿ ಹಂಪಿ, ಡಾ.ಶಶಿಕಾಂತ ಲಿಂಗಸುಗೂರ,ಡಾ.ವಾಸವಿ ಚಾಮರಾಜನಗರ, ದೇವು ಪತ್ತಾರ, ಬಿ.ಟಿ.ಜಾಹ್ನವಿ, ಕಲೀಂ ಪಾಷಾ ಹರಿಹರ, ಡಾ. ಸಂಜೀವಕುಲಕರ್ಣಿ, ಸರೋಜಾ ಪ್ರಕಾಶ, ವಿಶಾಲಾಕ್ಷಿ ಶರ್ಮ,ಎಚ್.ಪಟ್ಟಾಭಿರಾಮ ಸೋಮಯಾಜಿ, ರಘುನಂದನ, ಚಂದ್ರಕಲಾ ಬಾಗಲಕೋಟೆ, ಟಿ.ಎನ್.ಚಂದ್ರಕಾಂತ, ಎಚ್.ಎನ್.ಆರತಿ, ಎಸ್. ತುಕಾರಾಂ, ಡಾ. ಸಿದ್ದನಗೌಡ ಪಾಟೀಲ, ಎನ್.ವೆಂಕಟೇಶ್, ದೊರೈರಾಜ್, ಕಾಳೇಗೌಡ ನಾಗವಾರ, ಮೋಹನ ಕುಮಾರ್, ನೂರ್ ಮನ್ಸೂರ್, ಮಾವಳ್ಳಿ ಶಂಕರ್, ಶೇಖಣ್ಣ ಕವಳಿಕಾಯಿ, ಮಲ್ಲಿಕಾರ್ಜುನ ಕಲಮರ ಹಳ್ಳಿ, ಸತ್ಯಾ, ಎಂ.ಎಸ್.ಮುರಳಿಕೃಷ್ಣ, ಕೋರ್ಣೇಶ್ವರ ಸ್ವಾಮೀಜಿ, ಶಂಕರಗೌಡ ಸಾತ್ಮಾರ, ಕೆ.ನಾಗಭೂಷಣರಾವ್ ಬಳ್ಳಾರಿ, ಗಂಗಾಧರ ಹಿರೇಗುತ್ತಿ ಕಾರವಾರ, ಶಂಕರಡಿ. ಸುರಳ್, ಡಾ.ಮಹಾದೇವಿ ಕಣವಿ ಹಾವೇರಿ, ವರದರಾಜು, ತಾಜುದ್ದೀನ್ ಶರೀಫ್, ಆರ್.ಮಾನಸಯ್ಯ, ಯು.ಎಚ್. ಉಮರ್, ಎಚ್.ಬಿ.ರಾಘವೇಂದ್ರ, ಇಲಿಯಾಸ್ ತುಂಬೆ, ಟಿ.ಅಝಗರ್, ಅಶ್ರಫ್ ಅಲಿ ಹುಬ್ಬಳ್ಳಿ, ಎಸ್.ಎ. ಲಂಡೂರ್, ಡಾ, ಇಷ್ಟಿಜ್ ಅರಸ್, ಎಂ.ವಿ. ಮಾಗನೂರ, ಡಿ. ಉಮಾಪತಿ, ನೂರ್ ಶ್ರೀಧರ್, ಇನ್ನೂ ಅನೇಕ ಸಹ ಮನಸ್ಕರು.


ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...