Homeಮುಖಪುಟಮನುಷ್ಯ ಧರ್ಮವನ್ನು ಪಾಲಿಸೋಣ : ಧರ್ಮದ್ವೇಷ ಬೇಡವೆಂದು ಒಗ್ಗಟ್ಟು ಸಾರಿದ ಪ್ರಜ್ಞಾವಂತರು.

ಮನುಷ್ಯ ಧರ್ಮವನ್ನು ಪಾಲಿಸೋಣ : ಧರ್ಮದ್ವೇಷ ಬೇಡವೆಂದು ಒಗ್ಗಟ್ಟು ಸಾರಿದ ಪ್ರಜ್ಞಾವಂತರು.

ಈ ದೇಶದ ಭವಿಷ್ಯವೇ ಆಗಿರುವ ಯುವ ಮಿತ್ರರ ಮೇಲೆ ಈ ಸಮಯದಲ್ಲಿ ದೊಡ್ಡ ಹೊಣೆಗಾರಿಕೆ ಇದೆ. ಪ್ರೀತಿಯಲ್ಲಿ ವಿಶ್ವಾಸವಿಟ್ಟಿರುವ ಯುವ ಪೀಳಿಗೆ ದ್ವೇಷವನ್ನು ಹುಟ್ಟುಹಾಕುವ, ಸಮಾಜವನ್ನು ಒಡೆಯುವ ರಾಜಕೀಯವನ್ನು ಒಪ್ಪಬಾರದೆಂದು ಅಭಿಮಾನದೊಂದಿಗೆ ಒತ್ತಾಯಿಸುತ್ತಿದ್ದೇವೆ.

- Advertisement -
- Advertisement -

ಕೊರೊನಾ ಕಾಲದಲ್ಲಿ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಅಪಪ್ರಚಾರ, ಸುಳ್ಳು ಸುದ್ದಿಗಳ ವಿರುದ್ಧ ಒಂದಾಗಿ ಹೋರಾಡೋಣ ಎಂಬ ಆಶಯದಿಂದ ನೂರಾರು ಪ್ರಜ್ಞಾವಂತರು ಜಂಟೀ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಅದರ ಪೂರ್ಣ ಪಾಠ ಕೆಳಗಿನಂತಿದೆ.

ಒಗ್ಗಟ್ಟಿನ ಪತ್ರಿಕಾ ಹೇಳಿಕೆ

ನಾಡಿನ ಜನತೆಯಲ್ಲಿ ನಮ್ಮೆಲ್ಲರ ಒಕ್ಕೊರಲ ಮನವಿ:

ಇದು, ನಾವು ಹೆಚ್ಚು ಮನುಷ್ಯರಾಗುವ ಕಾಲ

ಪ್ರೀತಿ, ಶಾಂತಿ, ಸರ್ವರ ಕ್ಷೇಮವೇ ನಮ್ಮೆಲ್ಲರ ಆದ್ಯತೆಯಾಗಲಿ. ಎಲ್ಲರೂ ಒಟ್ಟಿಗೆ ಬಾಳೋಣ! ಸುರಕ್ಷಿತವಾಗಿರೋಣ!

ಒಂದು ಕೋಮನ್ನು ಗುರಿ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂಬ ಮುಖ್ಯಮಂತ್ರಿಗಳ ಘೋಷಣೆಯನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ.

ಎಚ್ಚರಿಕೆ ಮಾತ್ರ ಸಾಲದು. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ.

ಮಾನ್ಯರೇ,
ಕೋವಿಡ್-19 ಮಹಾಮಾರಿ ತಂದಿಟ್ಟಿರುವ ಬಿಕ್ಕಟ್ಟು, ಸಂಕಟಮಯ ಪರಿಸ್ಥಿತಿ: ಸಾವು ಬದುಕುಗಳ ಹೋರಾಟಗಳ ಕಾಲದಲ್ಲಿಯೂ ಹಳ್ಳಿ ಹಳ್ಳಿಯ ಮೂಲೆ ಮೂಲೆಯ ಮನೆಗಳಿಗೂ ಕರೋನಾಗಿಂತ ವೇಗವಾಗಿ ಹಬ್ಬುತ್ತಿರುವ ಮುಸ್ಲಿಂ ದ್ವೇಷವನ್ನು ನೋಡಿ ಅತ್ಯಂತ ನೋವಾಗುತ್ತಿದೆ. ಇಂಥ ಸಂಕಟದ ಪರಿಸ್ಥಿತಿಯಲ್ಲೂ ಕೋಮು ದ್ವೇಷವೇ? ‘ವಸುದೈವಕುಟುಂಬಕಂ’ ಎಂದು ಸಾರಿದ ಮಹೋಪನಿಷತ್, ಭ್ರಾತೃತ್ವವನ್ನು ತನ್ನೆದೆಯಲ್ಲಿ ಸೃವಿಸಿದ ನಮ್ಮ ಸಂವಿಧಾನ ಇವುಗಳು ಈ ನೆಲದ ಹಿರಿಮೆಯೆಂದು ಇನ್ನು ಮುಂದೆಯೂ ಹೇಳಬಲ್ಲೆವೇ?

ದೇಶಕ್ಕೆ ಆಪತ್ತು ಎದುರಾಗಿದೆ, ದೇಹಕ್ಕೆ ಬಾಣ ಬಂದು ನೆಟ್ಟಿದೆ. ಬಾಣವನ್ನು ತೆಗೆದು ಗಾಯವನ್ನು ಗುಣಮಾಡುವುದು ಮುಖ್ಯವೇ ಹೊರತು, ಇದು ಯಾವ ಬಣ್ಣದ ಬಾಣ, ಯಾವ ಬಣದ ಬಾಣ, ಯಾವ ಪ್ರದೇಶದ ಬಾಣ ಎಂದು ಪರಸ್ಪರ ದೂಷಿಸುತ್ತ ಕೂಡುವುದಲ್ಲ. ರೋಗ-ರೋಗಾಣುವಿನ ಕಾರಣವಾಗಿ ಯಾರನ್ನೇ ಆದರೂ ಅವಮಾನಿಸುವುದು, ಅನುಮಾನಿಸುವುದು, ದ್ವೇಷಿಸುವುದು ಮಾನವೀಯತೆಯಲ್ಲ. ವೈರಸ್ ಅಳಿದ ಮೇಲೂ ನಾವು ಉಳಿದಿರುತ್ತೇವೆ, ಅಲ್ಲವೇ. ಎಂದೇ, ನಮ್ಮ ನೆಲದ ಸುಂದರ ಬಾಳುವೆಯ ನೇಯ್ಗೆ ಹಾಳುಗೆಡವದಂತೆ ನಮ್ಮೆಲ್ಲರ ನಡೆನುಡಿಗಳು ಪ್ರೇಮಮಯವಾಗಿರಬೇಕಲ್ಲವೆ?

ಕೊರೋನಾ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಎಲ್ಲಾ ಧರ್ಮೀಯರೂ ಸಹಕರಿಸುತ್ತಿದ್ದಾರೆ. ಎಲ್ಲಾ ಕೋಮಿನ ಸ್ವಯಂ ಸೇವಕರು ತಮ್ಮ ಹಿತವನ್ನು ಬದಿಗಿಟ್ಟು ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಪರದಾಡುತ್ತಿದ್ದಾರೆ. ಹಲವರು ಶಕ್ತಿ ಮೀರಿ ದಾನ-ಧರ್ಮ ಮಾಡುತ್ತಿದ್ದಾರೆ. ಇದರಲ್ಲಿ ಮುಸ್ಲಿಮರೂ ಇದ್ದಾರೆ ಎಂಬುದನ್ನು ನಾವು ಮರೆಯುವಂತಿಲ್ಲ. ಅಜೀಂ ಪ್ರೇಮ್‌ಜಿ ಪರಿಹಾರ ನಿಧಿಗೆ 1125 ಕೋಟಿ ನೀಡಿದ್ದನ್ನು, ಸಿಪ್ಲಾ ಕಂಪನಿಯ ಯೂಸುಫ್ ಹಮೀದ್‌ ಅತಿಕಡಿಮೆ ಬೆಲೆಯಲ್ಲಿ ಅತ್ಯನ್ನತ ಉಪಕರಣಗಳನ್ನು ತಯಾರಿಸಿ ಕೊಟ್ಟಿರುವುದನ್ನು ನಾವು ಸ್ಮರಿಸದಿರೋಣವೆ. ಕೋಲಾರದ ತಜ್ಮುಲ್ ಪಾಷ ಮತ್ತು ಸೋದರ ಮುಜಾಮಿಲ್ ಪಾಷ ತಮ್ಮ ನಿವೇಶನವನ್ನೇ ಮಾರಿ, ಆ ಹಣದಲ್ಲಿ ಹಸಿದವರಿಗೆಲ್ಲಾ ನಿತ್ಯ ಆಹಾರ ಸೇವೆ ಮಾಡುತ್ತಿರುವುದನ್ನು, ಕರೆ ಮಾಡಿದವರ ಬಾಗಿಲಿಗೆ ಕಾಳುಕಡ್ಡಿ ತಲುಪಿಸುತ್ತಿರುವುದನ್ನು ಮರೆಯಲಾದರೂ ಸಾಧ್ಯವೆ?


ಇದನ್ನೂ ಓದಿ: ಲಾಕ್‌ಡೌನ್ ಎಫೆಕ್ಟ್: ಬಡವರ ಹೊಟ್ಟೆ ತುಂಬಿಸುತ್ತಿರುವ Mercy Mission ಕಾರ್ಯಕ್ಕೊಂದು ಸೆಲ್ಯೂಟ್! 


ಅದೇ ಹೊತ್ತಲ್ಲಿ ಕೊರೋನಾವನ್ನು ಉಪೇಕ್ಷಿಸುವ, ಅದನ್ನು ದುರುದ್ದೇಶಕ್ಕೆ ಬಳಸುವ ವ್ಯಕ್ತಿಗಳು, ಶಕ್ತಿಗಳು ಎಲ್ಲಾ ಕೋಮಿನಲ್ಲೂ ಇದ್ದಾರೆ. ‘ಉಗುಳಿ, ಸೀನಿ’ ಎಂದು ಅಸಂಬದ್ಧವಾಗಿ ಕರೆಕೊಟ್ಟ ಒಬ್ಬ ತಲೆಕೆಟ್ಟ ಸಾಫ್ಟ್‌ವೇರ್ ಉದ್ಯೋಗಿ ಮುಸ್ಲಿಮನಾಗಿರಬಹುದು. ಲಾಕ್‌ಡೌನ್‌ ಇದ್ದಾಗಲೂ 12 ಜನರು ಮಸೀದಿಗೆ ಹೋಗಿದ್ದು ತಪ್ಪು. ತಬ್ಲೀಘ್ ಸಭೆಗೆ ಹೋಗಿದ್ದೂ ಕೆಲವರು ತಿಳಿಸದೇ ಇದ್ದದ್ದು ಖಂಡಿತವಾಗಿ ದೊಡ್ಡ ತಪ್ಪು. ಇಂಥ ತಪ್ಪನ್ನು ಇತರೆ ಧರ್ಮದ ವ್ಯಕ್ತಿಗಳೂ ಮಾಡಿದ್ದಾರೆ. ಕೆಲವರು ಮಾಡಿದ ಮೂರ್ಖತನ, ಅವಿವೇಕತನಗಳು ಮನುಷ್ಯ ಸಹಜವಾದರೂ ಕೆಲವು ಘಟನೆಗಳನ್ನು ಮುಂದೆಮಾಡಿಕೊಂಡು ಇಡೀ ಮುಸ್ಲಿಂ ಸಮುದಾಯವನ್ನು ದ್ವೇಷದಿಂದ ನೋಡುವಂತೆ ಸಮಾಜವನ್ನು ಪ್ರಚೋದಿಸಲಾಗುತ್ತಿದೆ.

ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಸರಕಾರದೊಂದಿಗೆ ಸಹಕರಿಸಬೇಕು, ಕೋವಿಡ್ ಕಾಯಿಲೆಗೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಸಲಹೆಗಳನ್ನು ಪಾಲಸಬೇಕು. ಹಾಗೂ ನೆರೆಹೊರೆಯಲ್ಲಿ ಯಾರಾದರೂ ಅದನ್ನು ಉಲ್ಲಂಘಿಸಿದಲ್ಲಿ ಸಾಧ್ಯವಾದರೆ ತಿಳಿಹೇಳಬೇಕು, ಇಲ್ಲವಾದರೆ ಅಧಿಕಾರಿಗಳ ಗಮನಕ್ಕೆ ತರಬೇಕು. ಆದರೆ ಜಾತಿ/ಧರ್ಮ/ಪಂಗಡದ ಹೆಸರಿನಲ್ಲಿ ದ್ವೇಷ ಬಿತ್ತುವ ಪ್ರಚಾರಕ್ಕೆ ಕೈ ಜೋಡಿಸಬಾರದೆಂದು ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ. ಈ ದೇಶದ ಭವಿಷ್ಯವೇ ಆಗಿರುವ ಯುವ ಮಿತ್ರರ ಮೇಲೆ ಈ ಸಮಯದಲ್ಲಿ ದೊಡ್ಡ ಹೊಣೆಗಾರಿಕೆ ಇದೆ. ಪ್ರೀತಿಯಲ್ಲಿ ವಿಶ್ವಾಸವಿಟ್ಟಿರುವ ಯುವ ಪೀಳಿಗೆ ದ್ವೇಷವನ್ನು ಹುಟ್ಟುಹಾಕುವ, ಸಮಾಜವನ್ನು ಒಡೆಯುವ ರಾಜಕೀಯವನ್ನು ಒಪ್ಪಬಾರದೆಂದು ಅಭಿಮಾನದೊಂದಿಗೆ ಒತ್ತಾಯಿಸುತ್ತಿದ್ದೇವೆ.

ಕರೋನಾ ಪಿಡುಗು, ವಲಸೆ ಕಾರ್ಮಿಕರ ಸಂಕಷ್ಟಗಳು, ನಾಳಿನ ಅನಿಶ್ಚಿತತೆಗಿಂತ ಕೋಮು ದ್ವೇಷವೇ ಹೆಚ್ಚು ನೋವು ಬರಿಸುವ ಸಂಗತಿಯಾಗಿದೆ. ಕೊರೋನಾ ಸೋಂಕಿನ ಈ ಬಿಕ್ಕಟ್ಟಿನ ಸಮಯದಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಮಾಡಿ ನಡೆಸುತ್ತಿರುವ ಸುಳ್ಳು ಪ್ರಚಾರ ನಿಲ್ಲಬೇಕು. ಆ ರೀತಿ ನಡೆಸುತ್ತಿರುವವರ ವಿರುದ್ಧಕಠಿಣ ಕ್ರಮ ಕೈಗೊಳ್ಳುತ್ತೇವೆಂಬ ಮುಖ್ಯಮಂತ್ರಿಯವರ ಹೇಳಿಕೆಯನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯ ಸರಕಾರವು ಅದನ್ನು ಕಟ್ಟುನಿಟ್ಟಾಗಿ ಮಾಡಬೇಕೆಂದು ಆಗ್ರಹಿಸುವುದರ ಜೊತೆಗೆ ನಮ್ಮೀ ಸಮಾಜದಲ್ಲಿ ಎಲ್ಲರೂ ಮನುಷ್ಯ ಧರ್ಮವನ್ನು ಪಾಲಿಸೋಣ ಎಂದು ಸಮಾಜದ ಎಲ್ಲರನ್ನೂ ಆಗ್ರಹಿಸುತ್ತೇವೆ. ಪ್ರೀತಿ, ಶಾಂತಿ, ಸರ್ವರಕ್ಷೇಮವೇ ನಮ್ಮೆಲ್ಲರ ಆದ್ಯತೆಯಾಗಲಿ. ಎಲ್ಲರೂ ಒಟ್ಟಿಗೆ ಬಾಳೋಣ! ಸುರಕ್ಷಿತವಾಗಿರೋಣ!

ಒಮ್ಮತದ ಸಹಿ:

– ದೇವನೂರು ಮಹಾದೇವ, ಗಣೇಶದೇವಿ, ಹೆಚ್. ಎಸ್. ದೊರೆಸ್ವಾಮಿ, ಜಿ. ರಾಮಕೃಷ್ಣ, ಎಸ್.ಜಿ.ಸಿದ್ದರಾಮಯ್ಯ, ಎಸ್. ಆರ್. ಹಿರೇಮಠ, ಪ್ರಸನ್ನ, ಇಂದಿರಾ ಕೃಷ್ಣಪ್ಪ, ತೋಂಟದ ಸಿದ್ದರಾಮ ಸ್ವಾಮೀಜಿ ಗದಗ, ನಾಗೇಶ ಹೆಗಡೆ, ದಿನೇಶ್‌ಅಮಿನಮಟ್ಟು, ಶಿವಸುಂದರ್, ಮುಜಫರ್‌ಅಸ್ಸಾದಿ, ಮಾಲತಿ ಪಟ್ಟಣಶೆಟ್ಟಿ, ಡಾ. ಸಬೀಹಾ ಭೂಮಿಗೌಡ, ನಟರಾಜ್ ಬೂದಾಳ, ಜಿ.ರಾಜಶೇಖರ, ಫಣಿರಾಜ, ವಿಜಯಮ್ಮ, ರವಿ ಕೋಟಿ, ಇಂದೂಧರ ಹೊನ್ನಾಪುರ, ಡಾ. ವಿ.ಎನ್.ಲಕ್ಷ್ಮಿನಾರಾಯಣ, ಪಿಚ್ಚಳ್ಳಿ ಶ್ರೀನಿವಾಸ್, ಮುಜೀಬ್, ಡಾ.ಎಚ್.ಎಸ್.ಅನುಪಮ, ತಾಹೀರ್ ಹುಸೇನ್, ಅಬ್ದುಲ್ ಸಲಾಂ ಪುತ್ತಿಗೆ, ಬಿ. ಸುರೇಶ್, ನಗರಗೆರೆರಮೇಶ್, ರೂಪ ಹಾಸನ, ವಿ.ಎಸ್.ಶ್ರೀಧರ್, ನಗರಿ ಬಾಬಯ್ಯ, ರಾಘವೇಂದ್ರ ಕುಷ್ಟಗಿ, ಡಾ.ಎಚ್.ವಿ.ವಾಸು, ಡಾ. ಗೋಪಾಲ ದಾಬಡೆ, ಶಿವಾಜಿ ಕಾಗಣೀಕರ, ಬಸವರಾಜ ಸೂಳಿಬಾವಿ, ಶ್ರೀಪಾದ ಭಟ್, ಕ್ಲಿಫ್ಟನ್‌ರೊಝಾರಿಯೋ, ವಿನಯ್, ಇರ್ಷದ್‌ಅಹ್ಮದ್‌ದೇಸಾಯಿ, ಸಂತೋಷ ಕೌಲಗಿ ಮೇಲುಕೋಟೆ, ಯೂಸುಫ್‌ಕುನ್ನಿ, ಹರ್ಷ ಕುಮಾರ್ ಕುಗ್ವೆ, ದೇವಾನಂದ ಜಗಾಪುರ, ಕೆ.ಎಲ್.ಅಸೋಕ್, ತಾಜುದ್ದೀನ್, ರಾಘವೇಂದ್ರ (ಸಾಗರ), ಎ.ಎಸ್. ಪ್ರಭಾಕರ್, ಮೊಹಮ್ಮದ್‌ಕಿಕ್ಕಿಂಜೆ, ಮೀನಾಕ್ಷಿ ಬಾಳಿ, ಡಾ. ಭೂಮಿಗೌಡ, ಡಾ.ಷಕೀರಾಖಾನುಮ್, ಕೆ.ನೀಲಾ, ಜಿ.ಎನ್.ನಾಗರಾಜ್, ಬಿ.ಎ.ಕೆಂಜರೆಡ್ದಿ, ಬಿ.ಶ್ರೀನಿವಾಸ್, ಪ್ರಹ್ಲಾದ ಕಟ್ಟಿಮನಿ, ಕೇಸರಿ ಹರವೂ, ಡಾ. ಹೇಮಾ ಪಟ್ಟಣಶೆಟ್ಟಿ, ಡಾ. ಸಬಿತಾ ಬನ್ನಾಡಿ, ವಾಣಿ ಪೆರಿಯೋಡಿ, ಡಾ. ಶಿವಾನಂದ ಶೆಟ್ಟರ, ಜ.ನಾ. ತೇಜಶ್ರೀ, ಸಿ.ಎಚ್.ಭಾಗ್ಯ, ಡಾ.ಡಿ.ಬಿ.ಗವಾನಿ, ಸ್ವರ್ಣ ಭಟ್, ಮುತ್ತು ಬಿಳಿಯಲಿ, ರೇಣುಕಾ ನಿಡಗುಂದಿ ದೆಹಲಿ, ಯೋಗೇಶ್ ಮಾಸ್ಟರ್, ಶರೀಫ್ ಬಿಳಿಯಲಿ, ಕೆ.ಪಿ.ಸುರೇಶ, ಮೂಡ್ನಾಕೂಡು ಚಿನ್ನಸ್ವಾಮಿ, ಫಾದರ್ ವಿನೋದ ಪಾಲ, ಹಸನ್ ನಯೀಂ ಸುರಕೋಡ, ಸುನಂದಾ ಕಡಮೆ, ಶಾರದಾ ಗೋಪಾಲ, ಲಿನೆಟ್ ಡಿಸೋಜ, ವಸುಂಧರಾ ಭೂಪತಿ, ಚಂದ್ರಕಾಂತ ವಡ್ಡು, ಕೆ.ವೆಂಕಟರಾಜು, ಡಾ. ಬಸವರಾಜ ಸಾದರ, ಡಾ.ಧರಣೇಂದ್ರ ಕುರಕುರಿ, ನಾ. ದಿವಾಕರ ಮೈಸೂರು, ರವೀಂದ್ರ ಹಳಿಂಗಳಿ, ಸಿ.ಎಂ.ಅಂಗಡಿ ದೆಹಲಿ, ರಮಜಾನ್‌ದರ್ಗಾ, ಡಾ.ಪುರುಷೋತ್ತಮ ಬಿಳಿಮಲೆ, ಬಿ.ಸುಜ್ಞಾನ ಮೂರ್ತಿ ಹಂಪಿ, ಡಾ.ಶಶಿಕಾಂತ ಲಿಂಗಸುಗೂರ,ಡಾ.ವಾಸವಿ ಚಾಮರಾಜನಗರ, ದೇವು ಪತ್ತಾರ, ಬಿ.ಟಿ.ಜಾಹ್ನವಿ, ಕಲೀಂ ಪಾಷಾ ಹರಿಹರ, ಡಾ. ಸಂಜೀವಕುಲಕರ್ಣಿ, ಸರೋಜಾ ಪ್ರಕಾಶ, ವಿಶಾಲಾಕ್ಷಿ ಶರ್ಮ,ಎಚ್.ಪಟ್ಟಾಭಿರಾಮ ಸೋಮಯಾಜಿ, ರಘುನಂದನ, ಚಂದ್ರಕಲಾ ಬಾಗಲಕೋಟೆ, ಟಿ.ಎನ್.ಚಂದ್ರಕಾಂತ, ಎಚ್.ಎನ್.ಆರತಿ, ಎಸ್. ತುಕಾರಾಂ, ಡಾ. ಸಿದ್ದನಗೌಡ ಪಾಟೀಲ, ಎನ್.ವೆಂಕಟೇಶ್, ದೊರೈರಾಜ್, ಕಾಳೇಗೌಡ ನಾಗವಾರ, ಮೋಹನ ಕುಮಾರ್, ನೂರ್ ಮನ್ಸೂರ್, ಮಾವಳ್ಳಿ ಶಂಕರ್, ಶೇಖಣ್ಣ ಕವಳಿಕಾಯಿ, ಮಲ್ಲಿಕಾರ್ಜುನ ಕಲಮರ ಹಳ್ಳಿ, ಸತ್ಯಾ, ಎಂ.ಎಸ್.ಮುರಳಿಕೃಷ್ಣ, ಕೋರ್ಣೇಶ್ವರ ಸ್ವಾಮೀಜಿ, ಶಂಕರಗೌಡ ಸಾತ್ಮಾರ, ಕೆ.ನಾಗಭೂಷಣರಾವ್ ಬಳ್ಳಾರಿ, ಗಂಗಾಧರ ಹಿರೇಗುತ್ತಿ ಕಾರವಾರ, ಶಂಕರಡಿ. ಸುರಳ್, ಡಾ.ಮಹಾದೇವಿ ಕಣವಿ ಹಾವೇರಿ, ವರದರಾಜು, ತಾಜುದ್ದೀನ್ ಶರೀಫ್, ಆರ್.ಮಾನಸಯ್ಯ, ಯು.ಎಚ್. ಉಮರ್, ಎಚ್.ಬಿ.ರಾಘವೇಂದ್ರ, ಇಲಿಯಾಸ್ ತುಂಬೆ, ಟಿ.ಅಝಗರ್, ಅಶ್ರಫ್ ಅಲಿ ಹುಬ್ಬಳ್ಳಿ, ಎಸ್.ಎ. ಲಂಡೂರ್, ಡಾ, ಇಷ್ಟಿಜ್ ಅರಸ್, ಎಂ.ವಿ. ಮಾಗನೂರ, ಡಿ. ಉಮಾಪತಿ, ನೂರ್ ಶ್ರೀಧರ್, ಇನ್ನೂ ಅನೇಕ ಸಹ ಮನಸ್ಕರು.


ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...