Homeಮುಖಪುಟಎಂಎಸ್‌ಪಿ ಕೊಡಲು ಸಾಧ್ಯವಿಲ್ಲ ಎಂಬ ಮಿಥ್ಯೆಯನ್ನು ಒಡೆಯುವ ಸಮಯವಿದು: ಯೋಗೇಂದ್ರ ಯಾದವ್

ಎಂಎಸ್‌ಪಿ ಕೊಡಲು ಸಾಧ್ಯವಿಲ್ಲ ಎಂಬ ಮಿಥ್ಯೆಯನ್ನು ಒಡೆಯುವ ಸಮಯವಿದು: ಯೋಗೇಂದ್ರ ಯಾದವ್

ಭಾರತದ ಎಲ್ಲಾ ರೈತರಿಗೆ ಎಂಎಸ್‌ಪಿ ಸಾಧ್ಯವೇ? ಎಂಬುದರ ಕುರಿತು ಕಿರಣ್ ವಾಸ್ಸಾ ಮತ್ತು ಯೋಗೇಂದ್ರ ಯಾದವ್‌ರವರ ಬರೆದ ಲೇಖನದ ಕನ್ನಡ ಅನುವಾದ

- Advertisement -
- Advertisement -

ಭಾರತದಲ್ಲಿ ನಿಜವಾಗಿಯೂ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗೆ ಉತ್ತರ ರಾಜಕೀಯ ಇಚ್ಛಾಶಕಿಯಲ್ಲಿ ಅಡಗಿದೆ. ಭಾರತದ ರೈತರು ತಮ್ಮ ಉತ್ಪನ್ನಗಳಿಗೆ ಖಾತರಿಯುತ ದರವನ್ನು ಪಡೆಯಲು ಸಾಧ್ಯವೇ? ವ್ಯವಸ್ಥಿತವಾಗಿ ಮತ್ತು ಆರ್ಥಿಕವಾಗಿ ಇದು ಅಸಾಧ್ಯ ಎಂದು ನರೇಂದ್ರ ಮೋದಿ ಸರ್ಕಾರ, ಹಲವು ಅರ್ಥಶಾಸ್ತ್ರಜ್ಞರು ಮತ್ತು ಬಹುಪಾಲು ಮಾಧ್ಯಮಗಳು ನಿಮ್ಮನ್ನು ನಂಬಿಸಲು ಯತ್ನಿಸುತ್ತಿವೆ. ಆದರೆ ಇವರೆಲ್ಲರೂ ತಪ್ಪಾದ ಸಂದೇಶ ನೀಡುತ್ತಿದ್ದಾರೆ. ಒಂದೋ ಇವರಿಗೆ ರೈತರ ಬೇಡಿಕೆ ಅರ್ಥವಾಗುತ್ತಿಲ್ಲ, ಇಲ್ಲವೇ ಇವರು ಉತ್ಪನ್ನಗಳ ವೆಚ್ಚವನ್ನು ಲೆಕ್ಕ ಹಾಕಿಲ್ಲ, ಅಥವಾ ಇವರು ಉದ್ದೇಶಪೂರ್ವಕವಾಗಿಯೇ ’ಮಿಸ್‌ಲೀಡ್ ’ ಮಾಡುತ್ತಿದ್ದಾರೆ.

ಈ ಒಂದು ಮಿಥ್ಯೆಯ ಬಲೂನನ್ನು ಒಡೆಯುವ ಸೂಕ್ತ ಸಂದರ್ಭ ಈಗ ಒದಗಿ ಬಂದಿದೆ. ರೈತರು ನಡೆಸುತ್ತಿರುವ ಅಮೋಘ ಪ್ರತಿಭಟನೆ ಮತ್ತು ಉದ್ದೇಶಿತ ಟ್ರ್ಯಾಕ್ಟರ್ ರ್‍ಯಾಲಿಯ ಸಂದರ್ಭಕ್ಕಿಂತ ಸೂಕ್ತ ಸಂದರ್ಭ ಮತ್ತೊಂದು ಇರಲಾರದು.

ಮೋದಿ ಸರ್ಕಾರ ಪ್ರತಿ ವರ್ಷ 23 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಘೋಷಿಸುತ್ತದೆ. ಆದ್ದರಿಂದ, ತಾತ್ವಿಕವಾಗಿ, ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಟ ಬೆಲೆ ಪಡೆಯಲು ಅರ್ಹರು ಎಂದು ಭಾರತ ಸರ್ಕಾರ ಒಪ್ಪಿಕೊಳ್ಳುತ್ತದೆ. ಒಟ್ಟಿನಲ್ಲಿ ಎಂಎಸ್‌ಪಿ ಲೆಕ್ಕಾಚಾರ ಹಾಕುವ ಒಂದು ಕಾರ್ಯವಿಧಾನ (ಇದು ದೋಷಪೂರಿತ ಮತ್ತು ವಿವಾದಿತವಾಗಿದೆ) ಜಾರಿಯಲ್ಲಿದೆ. ಅಂದರೆ ರೈತರ ಉತ್ಪನ್ನಗಳಿಗೆ ಅರ್ಹ ಬೆಲೆ ಕೊಡುವುದು ತನ್ನ ಜವಾಬ್ದಾರಿ ಎಂದು ಸರ್ಕಾರ ಒಪ್ಪಿಕೊಳ್ಳುತ್ತದೆ.

ಸಮಸ್ಯೆ ಏನೆಂದರೆ, ಈ ಕುರಿತಾಗಿ ಸರ್ಕಾರ ಹೆಚ್ಚು ಕೆಲಸ ಮಾಡುತ್ತಿಲ್ಲ. ಸರ್ಕಾರವು ಕೆಲವೇ ಪ್ರದೇಶಗಳ 2-3 ಬೆಳೆಗಳಿಗೆ ಮಾತ್ರ ಬೆಂಬಲ ಬೆಲೆ ಘೋಷಿಸುತ್ತದೆ. ಇದರಿಂದ ಇದರ ಪ್ರಯೋಜನ ರೈತರಲ್ಲಿ 1/5 ಜನರಿಗೂ (ಐವರಲ್ಲಿ ಒಬ್ಬರಿಗೂ) ಮುಟ್ಟುತ್ತಿಲ್ಲ. ಬಹಳಷ್ಟು ರೈತರಿಗೆ ಈ ಕನಿಷ್ಠ ಬೆಂಬಲ ದರವೇ ಗರಿಷ್ಠ ಸುರಕ್ಷತಾ ದರವೂ ಆಗಿದೆ. ಈ ಹಂಗಾಮಿನಲ್ಲಿ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ದರ ಕ್ವಿಂಟಲ್‌ಗೆ 1,850 ರೂ. ಇದೆ. ಆದರೆ 3 ತಿಂಗಳಿನಿಂದ ರೈತರು ಅದನ್ನು 1,100-1,350 ರೂ.ಗಳಿಗೆ ಮಾರುತ್ತ ಬಂದಿದ್ದಾರೆ. ಇದು ಒಂದು ಉದಾಹರಣೆ ಮಾತ್ರ. ದ್ವಿದಳ ಧಾನ್ಯಗಳ, ಕಾಳುಗಳ ಬೆಳೆಗಾರರೂ ಈ ಸಮಸ್ಯೆ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಎಂಎಸ್‌ಪಿ ಖಾತರಿ ಕೊಡಿಸಲಾಗದಿದ್ದರೆ ರಾಜಕೀಯ ನಿವೃತ್ತಿ: ಹರಿಯಾಣ ಸಿಎಂ ಖಟ್ಟರ್

ಯಾವುದನ್ನು ಕನಿಷ್ಠ ಬೆಲೆ ಎಂದು ಸರ್ಕಾರ ನಿರ್ಧರಿಸುತ್ತದೋ ಅದಾದರೂ ತಮಗೆ ಲಭ್ಯವಾಗಬೇಕು ಎಂದು ರೈತರು ಮೋದಿ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಎಂಎಸ್‌ಪಿ ಖಾತರಿಗೆ ಒಂದು ಕಾನೂನು ಬೇಕು ಎಂದು ಅವರು ಕೇಳುತ್ತಿದ್ದಾರೆ.

ಎಂಎಸ್‌ಪಿ: ಹೇಗೆಲ್ಲ ಸಾಧಿಸಬಹುದು?

ಇದೆಲ್ಲ ಸಾಧ್ಯವೇ? ಮೊದಲಿಗೆ ಅಂತಹ ಬೆಂಬಲದ ಬಗೆಗಿನ ತಪ್ಪು ತಿಳುವಳಿಕೆಯನ್ನು ಬಗೆಹರಿಸಿಕೊಳ್ಳೋಣ. ಎಂಎಸ್‌ಪಿ ಖಾತರಿಗೊಳಿಸಿದರೆ, ಸರ್ಕಾರ ಎಲ್ಲ ಕೃಷಿ ಉತ್ಪನ್ನಗಳನ್ನು ಸಾರಾಸಗಟಾಗಿ ಕೊಳ್ಳಬೇಕು ಎಂದು ಅರ್ಥವಲ್ಲ. ಅದು ಅಸಾಧ್ಯ, ಕಾರ್ಯಸಾಧುವೂ ಅಲ್ಲ ಮತ್ತು ಅನಗತ್ಯ ಕೂಡ.

ಸಾರ್ವಜನಿಕ ಪಡಿತರ ವ್ಯವಸ್ಥೆಗೆ (ಪಿಡಿಎಸ್) ಸಂಗ್ರಹಿಸುವ (ಖರೀದಿಸುವ) ಆಹಾರ ಧಾನ್ಯಗಳನ್ನು ವಿಸ್ತರಿಸಬೇಕು. ಅದು ಬೇಳೆಕಾಳು, ಎಣ್ಣೆಬೀಜ ಮತ್ತು ರಾಗಿ-ಜೋಳದಂತಹ ನಿತ್ಯ ಬಳಕೆಯ ಆಹಾರ ಉತ್ಪನ್ನಗಳನ್ನು ಒಳಗೊಂಡಿರಬೇಕು. ಇದು ಕೋಟ್ಯಂತರ ಜನರ ಪೌಷ್ಟಿಕತೆ ವೃದ್ಧಿಗೂ ನೆರವಾಗುತ್ತದೆ.

750 ಮಿಲಿಯನ್ ಪಡಿತರ ಫಲಾನುಭವಿಗಳಿಗೆ ತಿಂಗಳಿಗೆ ಒಂದು ಕೆ.ಜಿ ಆಹಾರ ಧಾನ್ಯ (ಕಾಳು-ಕಡಿ) ವಿತರಿಸಿದರೆ, ಅದರಿಂದ ಈ ಬೆಳೆಗಳನ್ನು 13 ಮಿಲಿಯನ್ ಟನ್ ಅಧಿಕ ಬೆಳೆಯುವ ಡಿಮ್ಯಾಂಡ್ ಸೃಷ್ಟಿಯಾಗುತ್ತದೆ. ಸದ್ಯ ವಾರ್ಷಿಕ 23 ಮಿಲಿಯನ್ ಟನ್ ಆಹಾರ ಧಾನ್ಯ ಬೆಳೆಯುತ್ತಿದ್ದು, 13 ಮಿಲಿಯನ್ ಟನ್ ಅಧಿಕ ಬೇಡಿಕೆ ಈ ಆಹಾರಧಾನ್ಯ ಬೆಳೆಯುವವರಿಗೆ ಒಳ್ಳೆಯ ಅವಕಾಶ ನೀಡುತ್ತದೆ.

ಇದನ್ನೂ ಓದಿ: 2024 ರವರೆಗೂ ಪ್ರತಿಭಟನೆ ಮುಂದುವರಿಸಲು ಸಿದ್ಧರಿದ್ದೇವೆ: ರೈತ ನಾಯಕ ರಾಕೇಶ್ ಟಿಕಾಯತ್

ಇದಲ್ಲದೇ, ಎರಡನೆ ವಿಧಾನವೆಂದರೆ, ಎಂಎಸ್‌ಪಿಗಿಂತ ಕಡಿಮೆ ದರಕ್ಕೆ ಉತ್ಪನ್ನ ದರ ’ಕುಸಿದಾಗ’ ಸರ್ಕಾರ ಪರಿಣಾಮಕಾರಿಯಾಗಿ ಹಸ್ತಕ್ಷೇಪ ಮಾಡುವ ಮೂಲಕ ರೈತರ ನೆರವಿಗೆ ನಿಲ್ಲಬೇಕು. ಮಾರ್ಕ್‌ಫೆಡ್ ಮತ್ತು ನಫೆಡ್‌ಗಳ (ಇವು ಎಂಎಸ್‌ಪಿ ಆಧಾರದಲ್ಲಿ ರೈತರ ಉತ್ಪನ್ನ ಖರೀದಿಸುವ ಸರ್ಕಾರಿ ಸಂಸ್ಥೆಗಳು) ಬಜೆಟ್ ಹೆಚ್ಚಿಸಬೇಕು. ಆ ಮೂಲಕ ಅವುಗಳ ಸಂಗ್ರಹಣಾ ಸಾಮರ್ಥ್ಯ ಮತ್ತು ಮಾರ್ಕೆಟಿಂಗ್ ಸಾಮರ್ಥ್ಯಗಳನ್ನು ಉನ್ನತೀಕರಿಸಬೇಕು. ಈ ಸಂಸ್ಥೆಗಳು ದೇಶದ ಒಟ್ಟು ಕೃಷಿ ಉತ್ಪನ್ನದಲ್ಲಿ ಶೇ. 10-20 ರಷ್ಟು ಖರೀದಿಸಿದರೂ ಸಾಕು, ಆ ಬೆಳೆ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ತಂತಾನೇ ರೇಟು ಏರುತ್ತದೆ. ಹೀಗೆ ಮಾಡಬೇಕು ಎಂಬ ಯೋಜನೆ ಜಾರಿಯಲ್ಲಿದೆ, ಆದರೆ ಅದಕ್ಕೆ ದೊಡ್ಡ ಪ್ರಮಾಣದ ಅನುದಾನ ಒದಗಿಸುವ ಅಗತ್ಯವಿದೆ.

ಈ ವಿಧಾನ ಕೂಡ ವಿಫಲವಾದರೆ, ಸರ್ಕಾರ ಕೊರತೆ ಪಾವತಿ (deficit payment)ಯ ಮೂಲಕ ಮೂರನೇ ವಿಧಾನವನ್ನು ಅನುಸರಿಸಬಹುದು. ರೈತರು ತಮ್ಮ ಉತ್ಪನ್ನಗಳನ್ನು ಮಾರಿದ ಬೆಲೆಯು ಎಂಎಸ್‌ಪಿಗಿಂತ ಕಡಿಮೆಯಿದ್ದರೆ, ಸರ್ಕಾರ ಆ ವ್ಯತ್ಯಾಸದ ಮೊತ್ತವನ್ನು ಪರಿಹಾರದ ರೂಪದಲ್ಲಿ ನೀಡುವ ಮೂಲಕ ರೈತರಿಗೆ ನ್ಯಾಯ ಒದಗಿಸಬೇಕು. ಮಧ್ಯಪ್ರದೇಶದಲ್ಲಿ ಈ ಪ್ರಯೋಗ ಮಾಡಲಾಗಿತ್ತಾದರೂ, ಯೋಜನೆಯ ಅಸಮರ್ಥ ವಿನ್ಯಾಸದ ಕಾರಣ ಅದು ವಿಫಲವಾಗಿತು.

ನಾಲ್ಕನೆ ಮತ್ತು ಕೊನೆಯ ವಿಧಾನವೆಂದರೆ, ಎಂಎಸ್‌ಪಿಗಿಂತ ಕಡಿಮೆ ದರದಲ್ಲಿ ನಡೆಯುವ ಖರೀದಿಯನ್ನು ಕಾನೂನುಬಾಹಿರ ಎಂದು ಘೋಷಿಸುವುದು. ಆದರೆ ಈ ವಿಧಾನ ಸರ್ವಶ್ರೇಷ್ಠವಲ್ಲ, ಮೊದಲ ಮೂರು ವಿಧಾನಗಳು ಚಾಲ್ತಿಯಲ್ಲಿರದಿದ್ದರೆ ಇದು ಉಲ್ಟಾ ಕೂಡ ಹೊಡೆಯಬಹುದು. ಹೀಗಾಗಿ ಈ ನಾಲ್ಕು ವಿಧಾನಗಳನ್ನು ಸೂಕ್ತವಾಗಿ ಹೆಣೆಯುವ ಮೂಲಕ ಎಲ್ಲ ರೈತರಿಗೆ ಎಂಎಸ್‌ಪಿ ದರ ಲಭ್ಯವಾಗುವಂತೆ ಮಾಡಲು ಸಾಧ್ಯ.

ಎಂಎಸ್‌ಪಿ ಅಸಾಧ್ಯ ಎನ್ನುವ ಮಿಥ್ಯೆ

ನಿಜಕ್ಕೂ ಇದು ಕಾರ್ಯಸಾಧುವೆ? ಸರ್ಕಾರಿ ಅಧಿಕಾರಿಗಳು, “ಅಸಾಧ್ಯ. ಇದಕ್ಕೆ 17 ಲಕ್ಷ ಕೋಟಿ ರೂ., ಅಂದರೆ ಕೇಂದ್ರ ಬಜೆಟ್‌ನ ಅರ್ಧದಷ್ಟು ಹಣ ಬೇಕಾಗುತ್ತದೆ” ಎಂದು ಬೊಂಬಡಾ ಹೊಡೆದಿದ್ದಾರೆ. ಈ ಅಂಕಿಸಂಖ್ಯೆ ಒಂದು ಕುಚೋದ್ಯದವಾಗಿದೆ. ಸರ್ಕಾರ ದೇಶದ ಎಲ್ಲ ರೈತರ ಎಲ್ಲ ಉತ್ಪನ್ನಗಳನ್ನೂ ತಾನೇ ಖರೀದಿಸಿ, ನಂತರ ಈ ಉತ್ಪನ್ನಗಳನ್ನು ಸಮುದ್ರದಲ್ಲಿ ಡಂಪ್ ಮಾಡಿದಾಗ ಮಾತ್ರ 17 ಲಕ್ಷ ಕೋಟಿ ರೂ. ಬೇಕಾಗಬಹುದು! ಈ ಲೆಕ್ಕಾಚಾರದಲ್ಲಿ ಖರೀದಿಸಿದ ಉತ್ಪನ್ನಕ್ಕೆ ಶೂನ್ಯ ಮೌಲ್ಯ ನೀಡಲಾಗಿದೆ. ಅಂದರೆ ಖರೀದಿಸಿದ ಉತ್ಪನ್ನಕ್ಕೆ ಯಾವುದೇ ಕಿಮ್ಮತ್ತೂ ಇಲ್ಲ!

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಒಂದು ವಾಸ್ತವ ಅಂದಾಜು ಪಡೆಯಲು ನಾವು, ಎಂಎಸ್‌ಪಿ ಮತ್ತು ಮಾರುಕಟ್ಟೆ ದರದ ಸರಾಸರಿಯ ವ್ಯತ್ಯಾಸವನ್ನು ಲೆಕ್ಕ ಹಾಕಿದ್ದೇವೆ. ಸರ್ಕಾರ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸಿದಾಗ ಮತ್ತು ರೈತರಿಗೆ ಕೊರತೆ ಪಾವತಿ ಮಾಡಿದಾಗ ಮಾತ್ರ ಅಷ್ಟೊಂದು ಮೊತ್ತ ಬೇಕಾಗುತ್ತದೆ. ಆದರೆ ವಾಸ್ತವ ಇದಲ್ಲ. 2017-18ರ ಅಧಿಕೃತ ಮಾಹಿತಿಯ ಕೋಷ್ಠಕವನ್ನು ಇಲ್ಲಿ ನೀಡಿದ್ದೆವೆ.( ಟೇಬಲ್ ಗಮನಿಸಿ). ಇದು ಮಾರುಕಟ್ಟೆಯ ದರ, ಎಂಎಸ್‌ಪಿ, ಎರಡರ ನಡುವಿನ ವ್ಯತ್ಯಾಸ ಮತ್ತು ಸರ್ಕಾರ ಭರಿಸಬೇಕಾದ ಮೊತ್ತವನ್ನು ಸೂಚಿಸುತ್ತದೆ.

ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸರ್ಕಾರ, ಕೃಷಿ ಉತ್ಪನ್ನದ ವೆಚ್ಚದ ಶೇ. 50 ರಷ್ಟು ಎಂಎಸ್‌ಪಿ ಏರಿಕೆ ಮಾಡಿದರೆ, ಆಗ ಸರ್ಕಾರ ಭರಿಸಬೇಕಾದ ಗರಿಷ್ಠ ಮೊತ್ತ 2 ಲಕ್ಷ 28 ಸಾವಿರ ಕೋಟಿ ರೂ. ಅಷ್ಟೇ. ಇದು ಜಿಡಿಪಿಯ ಶೇ 1.3 ಮಾತ್ರ ಮತ್ತು ಕೇಂದ್ರ ಬಜೆಟ್‌ನ ಶೇ. 8 ಮಾತ್ರ. ಈ ಮೊತ್ತ ಭರಿಕೆ ಕಠಿಣ ಎನಿಸಬಹುದು. ಆದರೆ ಅಸಾಧ್ಯವಾದುದೇನಲ್ಲ. ಈ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸಕಾರಗಳು ಹಂಚಿಕೊಳ್ಳಬಹುದು.

ಭಾರತ ಇದನ್ನು ಭರಿಸಬಹುದೇ? ಈ ದೇಶ ಯಾವುದರ ಮೇಲೆ ಅವಲಂಬಿತ ಎಂಬುದನ್ನು ನೋಡುವ ಕ್ರಮವನ್ನು ಇದು ಆಧರಿಸಿದೆ ಮತ್ತು ಅನ್ನದಾತನ ಮೌಲ್ಯ ಎಷ್ಟು ಎಂದು ಗ್ರಹಿಸುವುದರ ಆಧಾರದಲ್ಲಿ ಇದು ಅವಲಂಬಿತವಾಗಿದೆ. ಇದು ರಾಜಕೀಯ ಇಚ್ಛಾಶಕ್ತಿಯ ಪ್ರಶ್ನೆ. ಈ ಪ್ರಶ್ನೆಯನ್ನೇ ಕೋಟ್ಯಂತರ ರೈತರು ಇವತ್ತು ಕೇಳುತ್ತಿದ್ದಾರೆ.

(ಮೂಲ ಲೇಖನ: ಕಿರಣ್ ವಾಸ್ಸಾ, ಭಾರತ್ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಸದಸ್ಯ. ಯೋಗೇಂದ್ರ ಯಾದವ್, ಸಮಾಜೋ-ಆರ್ಥಿಕ ತಜ್ಞ ಮತ್ತು ಸ್ವರಾಜ್ ಇಂಡಿಯಾದ ಮುಖ್ಯಸ್ಥರು. 
ಅನುವಾದ: ಮಲ್ಲನಗೌಡರ್ ಕೆ.ಪಿ)


ಇದನ್ನೂ ಓದಿ: ರೈತರಿಗೆ ಮಣಿಯುತ್ತಿರುವ ಕೇಂದ್ರ: ಕೃಷಿ ಕಾಯ್ದೆಗಳ ಪರ ಕಾರ್ಯಕ್ರಮ ಮಾಡದಂತೆ ಆದೇಶ ಹೊರಡಿಸಿದ ಅಮಿತ್ ಶಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...