Homeಮುಖಪುಟಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು ಸಕಾಲವಾಗಿದ್ದು, ರಾಜ್ಯ ಸರ್ಕಾರವು ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆಯನ್ನೇ ರೂಪಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಕಾಸರಗೋಡಿನಿಂದ ಬೆಂಗಳೂರಿಗೆ ಆಗಮಿಸಿದ್ದ ಗಣ್ಯರ ನಿಯೋಗವನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ ಅವರು, ಕರ್ನಾಟಕ ರಾಜ್ಯವು ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಸಂಬಂಧ ಗಡಿ ಉಸ್ತುವಾರಿ ಸಚಿವರನ್ನೇ ನೇಮಿಸಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ ಎಂದರು. ಗಡಿ ಉಸ್ತುವಾರಿ ಸಚಿವರು ಕೇವಲ ಗಡಿ ಭಾಗಗಳನ್ನು ಮಾತ್ರ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಗ್ರಹಿಸದೆ ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ರಾಜ್ಯ ಸರ್ಕಾರವು ಇದನ್ನು ಕೇವಲ ಪರಿಹಾರ ಕಾಣದ ಗಡಿ ಸಮಸ್ಯೆ ಎಂದು ಭಾವಿಸಬಾರದೆಂದರು.

ಕಾಸರಗೋಡಿನ ಕನ್ನಡಿಗರು ಕನ್ನಡಕ್ಕೆ ಮತ್ತು ಕರ್ನಾಟಕ ಸಂಸ್ಕೃತಿಗೆ ದುಡಿದ ಗಡಿನಾಡು ಪ್ರತಿಭೆಗಳಿಗೆ ಸೂಕ್ತ ಪ್ರಶಸ್ತಿ ನೀಡಬೇಕು, ಕಾಸರಗೋಡಿನ ಸಾಂಸ್ಕೃತಿಕ ಸ್ಮಾರಕಗಳ ನಿರ್ಮಾಣ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು, ಕಾಸರಗೋಡಿನಲ್ಲಿ ಕನ್ನಡ ಚಲನಚಿತ್ರಗಳು ನಿಯತವಾಗಿ ಪ್ರದರ್ಶನವಾಗಬೇಕು, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳಂತೆಯೇ ಸಮಾನವಾಗಿ ಪರಿಗಣಿಸಬೇಕೆಂಬ ಹಲವು ಅಂಶಗಳುಳ್ಳ ಮನವಿಯನ್ನು ಕಾಸರಗೋಡಿನ ನಿಯೋಗವು ತಮಗೆ ಸಲ್ಲಿಸಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ, ಗಡಿ ಸಚಿವರಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಲ್ಲಿಸಿ ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಆಗ್ರಹಿಸಲಾಗುವುದು ಎಂದು ಬಿಳಿಮಲೆ ಭರವಸೆ ನೀಡಿದರು. 

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಮತ್ತು  ಮಾನ್ಯ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಬಿಳಿಮಲೆಯವರ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗ ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸಲು ಮನವಿ ಮಾಡಿತು.

ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಣ್ಣ ಬೇವಿನಮರದ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...