Homeಮುಖಪುಟಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು ಸಕಾಲವಾಗಿದ್ದು, ರಾಜ್ಯ ಸರ್ಕಾರವು ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆಯನ್ನೇ ರೂಪಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಕಾಸರಗೋಡಿನಿಂದ ಬೆಂಗಳೂರಿಗೆ ಆಗಮಿಸಿದ್ದ ಗಣ್ಯರ ನಿಯೋಗವನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ ಅವರು, ಕರ್ನಾಟಕ ರಾಜ್ಯವು ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಸಂಬಂಧ ಗಡಿ ಉಸ್ತುವಾರಿ ಸಚಿವರನ್ನೇ ನೇಮಿಸಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ ಎಂದರು. ಗಡಿ ಉಸ್ತುವಾರಿ ಸಚಿವರು ಕೇವಲ ಗಡಿ ಭಾಗಗಳನ್ನು ಮಾತ್ರ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಗ್ರಹಿಸದೆ ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ರಾಜ್ಯ ಸರ್ಕಾರವು ಇದನ್ನು ಕೇವಲ ಪರಿಹಾರ ಕಾಣದ ಗಡಿ ಸಮಸ್ಯೆ ಎಂದು ಭಾವಿಸಬಾರದೆಂದರು.

ಕಾಸರಗೋಡಿನ ಕನ್ನಡಿಗರು ಕನ್ನಡಕ್ಕೆ ಮತ್ತು ಕರ್ನಾಟಕ ಸಂಸ್ಕೃತಿಗೆ ದುಡಿದ ಗಡಿನಾಡು ಪ್ರತಿಭೆಗಳಿಗೆ ಸೂಕ್ತ ಪ್ರಶಸ್ತಿ ನೀಡಬೇಕು, ಕಾಸರಗೋಡಿನ ಸಾಂಸ್ಕೃತಿಕ ಸ್ಮಾರಕಗಳ ನಿರ್ಮಾಣ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು, ಕಾಸರಗೋಡಿನಲ್ಲಿ ಕನ್ನಡ ಚಲನಚಿತ್ರಗಳು ನಿಯತವಾಗಿ ಪ್ರದರ್ಶನವಾಗಬೇಕು, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳಂತೆಯೇ ಸಮಾನವಾಗಿ ಪರಿಗಣಿಸಬೇಕೆಂಬ ಹಲವು ಅಂಶಗಳುಳ್ಳ ಮನವಿಯನ್ನು ಕಾಸರಗೋಡಿನ ನಿಯೋಗವು ತಮಗೆ ಸಲ್ಲಿಸಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ, ಗಡಿ ಸಚಿವರಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಲ್ಲಿಸಿ ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಆಗ್ರಹಿಸಲಾಗುವುದು ಎಂದು ಬಿಳಿಮಲೆ ಭರವಸೆ ನೀಡಿದರು. 

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಮತ್ತು  ಮಾನ್ಯ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಬಿಳಿಮಲೆಯವರ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗ ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸಲು ಮನವಿ ಮಾಡಿತು.

ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಣ್ಣ ಬೇವಿನಮರದ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...