Homeಮುಖಪುಟನಮ್ಮ ಸಲಹೆ ತೆಗೆದುಕೊಳ್ಳದೇ ಸಮಿತಿ ರಚಿಸಿರುವುದು ದುರದೃಷ್ಟಕರ: ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು

ನಮ್ಮ ಸಲಹೆ ತೆಗೆದುಕೊಳ್ಳದೇ ಸಮಿತಿ ರಚಿಸಿರುವುದು ದುರದೃಷ್ಟಕರ: ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿಚಾರಣೆ ನಡೆಸಲು ಸೋಮವಾರ ಮೇರಿ ಕೋಮ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈ ಬಗ್ಗೆ ಕಳೆದ ವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಮುಖ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ತಮ್ಮ ಜೊತೆ ಸಮಾಲೋಚನೆ ನಡೆಸದೇ ತನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಮಿತಿಯನ್ನು ರಚಿಸಿದ್ದಕ್ಕಾಗಿ ಮಂಗಳವಾರ ಸಾಕ್ಷಿ ಮಲಿಕ್ ನಿರಾಶೆ ವ್ಯಕ್ತಪಡಿಸಿದ್ದಾರೆ. ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥನ ಮೇಲೆ ತನಿಖೆ ನಡೆಸಲು ಮೇಲ್ವಿಚಾರಣಾ ಸಮಿತಿಯ ಮುಖ್ಯಸ್ಥರಾನ್ನಾಗಿ ಬಾಕ್ಸಿಂಗ್ ದಂತಕಥೆ ಮೇರಿ ಕೋಮ್ ಅವರನ್ನು ಘೋಷಿಸಿದ ಒಂದು ದಿನದ ನಂತರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಸಾಕ್ಷಿ ಮಲಿಕ್ ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದು, “ಮೇಲ್ವಿಚಾರಣಾ ಸಮಿತಿ ರಚನೆ ಮಾಡುವ ಮುನ್ನ, ನಮ್ಮನ್ನು ಸಂಪರ್ಕಿಸಲಾಗುವುದು ಎಂದು ನಮಗೆ ಭರವಸೆ ನೀಡಲಾಗಿತ್ತು. ಆದರೆ ನಮ್ಮ ಸಲಹೆಗಳನ್ನು ಸಹ ತೆಗೆದುಕೊಳ್ಳದಿರುವುದು ತುಂಬಾ ದುರದೃಷ್ಟಕರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಸ್ತಿ ಫೆಡರೇಶನ್ ಅಧ್ಯಕ್ಷನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; ಮೇರಿ ಕೋಮ್ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚನೆ

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಮೂರು ದಿನಗಳ ಕಾಲ ನಡೆದ ಪ್ರತಿಭಟನೆ ವ್ಯಾಪಕ ಗಮನ ಸೆಳೆದಿತ್ತು. ಈ ಪ್ರತಿಭಟನೆಯಲ್ಲಿ ವಿಜೇಂದರ್ ಸಿಂಗ್, ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಇತರರು ಭಾಗಿಯಾಗಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ವಿರುದ್ಧದ ತನಿಖೆ ಮುಗಿಯುವವರೆಗೆ ಅವರ ಸ್ಥಾನದಿಂದ ಹಿಂದೆ ಸರಿಯುವಂತೆ ಕೇಂದ್ರ ಸರ್ಕಾರದಿಂದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಬಳಿಕ ಕುಸ್ತಿ ಸಂಸ್ಥೆಯೂ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸೋಮವಾರ, ಮೇಲುಸ್ತುವಾರಿ ಸಮಿತಿಯ ಬಗ್ಗೆ ಘೋಷಣೆ ಮಾಡುವಾಗ “ಸಮಿತಿಯು ಡಬ್ಲ್ಯುಎಫ್‌ಐ ವಿರುದ್ಧದ ಗಂಭೀರ ಆರೋಪಗಳನ್ನು ಪರಿಶೀಲಿಸುತ್ತದೆ. ಅದು ಎರಡೂ ಕಡೆಯ ಮಾತುಗಳನ್ನು ಆಲಿಸುತ್ತದೆ ಮತ್ತು ಒಂದು ತಿಂಗಳಲ್ಲಿ ತನ್ನ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುತ್ತದೆ. ತನಿಖೆ ಪೂರ್ಣಗೊಳ್ಳುವವರೆಗೂ ಸಮಿತಿಯು ಡಬ್ಲ್ಯುಎಫ್‌ಐನ ಕಾರ್ಯಚಟುವಟಿಕೆಗಳ ಉಸ್ತುವಾರಿಯನ್ನು ವಹಿಸುತ್ತದೆ” ಎಂದು ಠಾಕೂರ್ ಹೇಳಿದರು.

ಈ ಸಮಿತಿಯಲ್ಲಿ ಬಾಕ್ಸಿಂಗ್ ಪಟು ಮೇರಿ ಕೋಮ್ ಅಷ್ಟೇ ಅಲ್ಲದೇ, ಇತರ ಸದಸ್ಯರು ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಯೋಗೇಶ್ವರ್ ದತ್, ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರ್ಗುಂಡೆ, SAI ನ ಮಿಷನ್ ಒಲಿಂಪಿಕ್ ಸೆಲ್ ಸದಸ್ಯೆ ಮತ್ತು ಮಾಜಿ SAI ನಿರ್ವಾಹಕರಾದ ರಾಧಿಕಾ ಶ್ರೀಮನ್ ಮತ್ತು Cdr ರಾಜೇಶ್ ರಾಜಗೋಪಾಲನ್ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...