Homeಮುಖಪುಟನಮ್ಮ ಸಲಹೆ ತೆಗೆದುಕೊಳ್ಳದೇ ಸಮಿತಿ ರಚಿಸಿರುವುದು ದುರದೃಷ್ಟಕರ: ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು

ನಮ್ಮ ಸಲಹೆ ತೆಗೆದುಕೊಳ್ಳದೇ ಸಮಿತಿ ರಚಿಸಿರುವುದು ದುರದೃಷ್ಟಕರ: ಅಸಮಾಧಾನ ಹೊರಹಾಕಿದ ಕುಸ್ತಿಪಟುಗಳು

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ವಿಚಾರಣೆ ನಡೆಸಲು ಸೋಮವಾರ ಮೇರಿ ಕೋಮ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈ ಬಗ್ಗೆ ಕಳೆದ ವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಪ್ರಮುಖ ಕ್ರೀಡಾಪಟುಗಳಲ್ಲಿ ಒಬ್ಬರಾಗಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ತಮ್ಮ ಜೊತೆ ಸಮಾಲೋಚನೆ ನಡೆಸದೇ ತನ್ನ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳಿಗೆ ಸಮಿತಿಯನ್ನು ರಚಿಸಿದ್ದಕ್ಕಾಗಿ ಮಂಗಳವಾರ ಸಾಕ್ಷಿ ಮಲಿಕ್ ನಿರಾಶೆ ವ್ಯಕ್ತಪಡಿಸಿದ್ದಾರೆ. ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥನ ಮೇಲೆ ತನಿಖೆ ನಡೆಸಲು ಮೇಲ್ವಿಚಾರಣಾ ಸಮಿತಿಯ ಮುಖ್ಯಸ್ಥರಾನ್ನಾಗಿ ಬಾಕ್ಸಿಂಗ್ ದಂತಕಥೆ ಮೇರಿ ಕೋಮ್ ಅವರನ್ನು ಘೋಷಿಸಿದ ಒಂದು ದಿನದ ನಂತರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಸಾಕ್ಷಿ ಮಲಿಕ್ ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದು, “ಮೇಲ್ವಿಚಾರಣಾ ಸಮಿತಿ ರಚನೆ ಮಾಡುವ ಮುನ್ನ, ನಮ್ಮನ್ನು ಸಂಪರ್ಕಿಸಲಾಗುವುದು ಎಂದು ನಮಗೆ ಭರವಸೆ ನೀಡಲಾಗಿತ್ತು. ಆದರೆ ನಮ್ಮ ಸಲಹೆಗಳನ್ನು ಸಹ ತೆಗೆದುಕೊಳ್ಳದಿರುವುದು ತುಂಬಾ ದುರದೃಷ್ಟಕರ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕುಸ್ತಿ ಫೆಡರೇಶನ್ ಅಧ್ಯಕ್ಷನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; ಮೇರಿ ಕೋಮ್ ಅಧ್ಯಕ್ಷತೆಯಲ್ಲಿ ತನಿಖಾ ಸಮಿತಿ ರಚನೆ

ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಮೂರು ದಿನಗಳ ಕಾಲ ನಡೆದ ಪ್ರತಿಭಟನೆ ವ್ಯಾಪಕ ಗಮನ ಸೆಳೆದಿತ್ತು. ಈ ಪ್ರತಿಭಟನೆಯಲ್ಲಿ ವಿಜೇಂದರ್ ಸಿಂಗ್, ಮತ್ತು ಬಜರಂಗ್ ಪೂನಿಯಾ ಸೇರಿದಂತೆ ಇತರರು ಭಾಗಿಯಾಗಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥರು ತಮ್ಮ ವಿರುದ್ಧದ ತನಿಖೆ ಮುಗಿಯುವವರೆಗೆ ಅವರ ಸ್ಥಾನದಿಂದ ಹಿಂದೆ ಸರಿಯುವಂತೆ ಕೇಂದ್ರ ಸರ್ಕಾರದಿಂದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು. ಬಳಿಕ ಕುಸ್ತಿ ಸಂಸ್ಥೆಯೂ ತನ್ನ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸೋಮವಾರ, ಮೇಲುಸ್ತುವಾರಿ ಸಮಿತಿಯ ಬಗ್ಗೆ ಘೋಷಣೆ ಮಾಡುವಾಗ “ಸಮಿತಿಯು ಡಬ್ಲ್ಯುಎಫ್‌ಐ ವಿರುದ್ಧದ ಗಂಭೀರ ಆರೋಪಗಳನ್ನು ಪರಿಶೀಲಿಸುತ್ತದೆ. ಅದು ಎರಡೂ ಕಡೆಯ ಮಾತುಗಳನ್ನು ಆಲಿಸುತ್ತದೆ ಮತ್ತು ಒಂದು ತಿಂಗಳಲ್ಲಿ ತನ್ನ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುತ್ತದೆ. ತನಿಖೆ ಪೂರ್ಣಗೊಳ್ಳುವವರೆಗೂ ಸಮಿತಿಯು ಡಬ್ಲ್ಯುಎಫ್‌ಐನ ಕಾರ್ಯಚಟುವಟಿಕೆಗಳ ಉಸ್ತುವಾರಿಯನ್ನು ವಹಿಸುತ್ತದೆ” ಎಂದು ಠಾಕೂರ್ ಹೇಳಿದರು.

ಈ ಸಮಿತಿಯಲ್ಲಿ ಬಾಕ್ಸಿಂಗ್ ಪಟು ಮೇರಿ ಕೋಮ್ ಅಷ್ಟೇ ಅಲ್ಲದೇ, ಇತರ ಸದಸ್ಯರು ಲಂಡನ್ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಯೋಗೇಶ್ವರ್ ದತ್, ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ ತೃಪ್ತಿ ಮುರ್ಗುಂಡೆ, SAI ನ ಮಿಷನ್ ಒಲಿಂಪಿಕ್ ಸೆಲ್ ಸದಸ್ಯೆ ಮತ್ತು ಮಾಜಿ SAI ನಿರ್ವಾಹಕರಾದ ರಾಧಿಕಾ ಶ್ರೀಮನ್ ಮತ್ತು Cdr ರಾಜೇಶ್ ರಾಜಗೋಪಾಲನ್ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...