Homeಕರ್ನಾಟಕಮಕ್ಕಳಿಗೆ ಮೊಟ್ಟೆ ಬೇಡ ಎನ್ನುವ ವರದಿ ಹಿಂಪಡೆಯಿರಿ: ತಜ್ಞ ವೈದ್ಯರ ಆಗ್ರಹ

ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವ ವರದಿ ಹಿಂಪಡೆಯಿರಿ: ತಜ್ಞ ವೈದ್ಯರ ಆಗ್ರಹ

ಎನ್‌ಇಪಿ ಜಾರಿ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಮದನ ಗೋಪಾಲ್ ಅವರು ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದಾಗ ಸಲ್ಲಿಸಿರುವ ಮಕ್ಕಳ ಸಮೀಕ್ಷೆಯನ್ನು ವೈದ್ಯರು ಪ್ರಸ್ತಾಪಿಸಿದ್ದಾರೆ.

- Advertisement -
- Advertisement -

ಮಕ್ಕಳ ಆರೋಗ್ಯದ ಬಗ್ಗೆ ನೀಡಲಾಗಿರುವ ತಜ್ಞರ ಸಲಹಾ ವರದಿಯನ್ನು ಕೂಡಲೇ ಹಿಂಪಡೆಯಬೇಕು, ನಿಮ್ಹಾನ್ಸ್ ಅನ್ನು ಉಳಿಸಬೇಕು ಎಂದು ವೈದ್ಯರು ಹಾಗೂ ಶಿಕ್ಷಣ ತಜ್ಞರು ಆಗ್ರಹಿಸಿದ್ದಾರೆ.

ಮಕ್ಕಳಿಗೆ ಮೊಟ್ಟೆ ನೀಡಬಾರದು ಎಂದು ಎನ್‌ಇಪಿ ಪೊಸಿಷನ್‌ ಪೇಪರ್‌ ಅಪ್‌ಲೋಡ್ ಮಾಡಲಾಗಿದ್ದು, ತಜ್ಞರೆನಿಸಿಕೊಂಡವರು ವರದಿಯಲ್ಲಿ ಬರೆದಿರುವ ಸುಳ್ಳುಗಳನ್ನು ಖ್ಯಾತ ವೈದ್ಯರು, ನಿಮಾನ್ಸ್‌ನಲ್ಲಿ ಕಲಿತವರು ಪ್ರಶ್ನಿಸಿದ್ದಾರೆ.

ಎನ್‌ಇಪಿ ಪಠ್ಯಕ್ರಮ ರೂಪಿಸುವ ಭಾಗವಾಗಿ ಎನ್‌ಸಿಇಆರ್‌ಟಿಗೆ ಸಲ್ಲಿಸಿರುವ ವರದಿಗೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ, ಬಳ್ಳಾರಿಯ ಮಕ್ಕಳ ತಜ್ಞರಾದ ಡಾ. ಯೋಗಾನಂದ ರೆಡ್ಡಿ, ಉಡುಪಿಯ ಮನೋವೈದ್ಯಕೀಯ ತಜ್ಞರಾದ ಡಾ.ಪಿ.ವಿ.ಭಂಡಾರಿ, ಬೆಂಗಳೂರಿನ ಮನೋವೈದ್ಯಕೀಯ ತಜ್ಞರಾದ ಡಾ.ಶಶಿಧರ ಬೀಳಗಿ, ದಾವಣಗೆರೆ ನೇತ್ರತಜ್ಞರಾದ ಡಾ. ವಸುಧೇಂದ್ರ ಎನ್, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ರೇಡಿಯೋಲಜಿಸ್ಟ್‌ ಆಗಿರುವ ಡಾ. ರಾಜೇಶ್ ಪಂಪಾಪತಿ, ಅಭಿವೃದ್ಧಿ ಶಿಕ್ಷಣ ತಜ್ಞರು ಹಾಗೂ ಎಸ್ ಡಿಎಂಸಿ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ಪತ್ರ ಬರೆದಿದ್ದು, ವರದಿಯಲ್ಲಿನ ಮಿಥ್ಯೆಗಳನ್ನು ಬಯಲಿಗೆಳೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವೈದ್ಯರು ಹಾಗೂ ಶಿಕ್ಷಣ ತಜ್ಞರು ಬರೆದ ಪತ್ರದಲ್ಲೇನಿದೆ?

ರಾಷ್ಟ್ರೀಯ ಶಿಕ್ಷಣ ನೀತಿ 2020 ಹಾಗೂ ರಾಷ್ಟ್ರೀಯ ಪಠ್ಯ ಕ್ರಮ ಸಿದ್ಧತೆಗಳಿಗಾಗಿ ಕರ್ನಾಟಕದ ಡಿಎಸ್ಇಆರ್‌‌ಟಿ ಸಲ್ಲಿಸಿರುವ ಮಕ್ಕಳ ಆರೋಗ್ಯ ಹಾಗೂ ಕ್ಷೇಮಗಳ ಬಗೆಗಿನ ತಜ್ಞರ ಸಲಹಾ ವರದಿಯು ಹಳಸಾಗಿ, ಅವೈಜ್ಞಾನಿಕವಾಗಿ, ಅತಿರೇಕದ್ದಾಗಿ, ಬಾಲಿಶವಾಗಿದ್ದು ಅದನ್ನು ಕೂಡಲೇ ಸಂಪೂರ್ಣವಾಗಿ ಹಿಂಪಡೆಯಬೇಕಾಗಿದೆ.

ಇಂಥದ್ದೊಂದು ಕೀಳಾದ, ಬೇಜವಾಬ್ದಾರಿಯ ವರದಿಯಲ್ಲಿ ನರಮಾನಸಿಕ ವಿಜ್ಞಾನದಲ್ಲಿ ಅಂತರರಾಷ್ಟ್ರೀಯ ಮನ್ನಣೆಯನ್ನೂ, ಖ್ಯಾತಿಯನ್ನೂ ಪಡೆದಿರುವ, ನಮ್ಮ ದೇಶದ ಅತ್ಯುನ್ನತವಾದ, ಗೌರವಾರ್ಹವಾದ ನಿಮ್ಹಾನ್ಸ್ ಸಂಸ್ಥೆಯ ಮಕ್ಕಳ ಹಾಗೂ ಹದಿಹರೆಯದ ಮನೋರೋಗ ವಿಭಾಗದ ಮುಖ್ಯಸ್ಥರಾದ ಡಾ. ಜಾನ್ ವಿಜಯ್ ಸಾಗರ್ ಅವರ ಹೆಸರನ್ನು ತಜ್ಞರ ಸಮಿತಿಯ ಅಧ್ಯಕ್ಷನೆಂದು ನೀಡಿರುವುದನ್ನು ಕಂಡು ಆ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದ ನಮಗೆ ಅತೀವ ಆಘಾತವೂ, ಬೇಸರವೂ ಆಗಿದೆ. ಮಕ್ಕಳ ಆರೋಗ್ಯದ ಬಗೆಗಿನ ಈ ತಜ್ಞರ ಸಮಿತಿಯಲ್ಲಿ ಒಬ್ಬರೇ ಒಬ್ಬ ಮಕ್ಕಳ ತಜ್ಞ ಇಲ್ಲದಿರುವುದು ಕಳವಳಕಾರಿಯಾಗಿದೆ.

ಇದನ್ನೂ ಓದಿರಿ: NEP| ಮೊಟ್ಟೆ ನೀಡಿದರೆ ಮಕ್ಕಳಲ್ಲಿ ತಾರತಮ್ಯ ವೃದ್ಧಿ: ಎನ್‌‌ಸಿಇಆರ್‌ಟಿಗೆ ರಾಜ್ಯ ಸರ್ಕಾರದ ಸಮಿತಿ ಪ್ರಸ್ತಾವನೆ

ಈ ವರದಿಯನ್ನು ಆಯುರ್ವೇದ ಹಾಗೂ ಯೋಗ ತಜ್ಞರೆಂದುಕೊಳ್ಳುವವರೇ ಬರೆದಿರುವಂತೆ ಕಾಣುತ್ತಿದ್ದು, ಅನೇಕ ಆಧಾರರಹಿತವಾದ, ಅಪಾಯಕಾರಿಯಾದ ವಿಚಾರಗಳನ್ನೇ ತುಂಬಿಸಲಾಗಿದೆ. ಆದ್ದರಿಂದ ನಿಮ್ಹಾನ್ಸ್‌ನ ನಿರ್ದೇಶಕರು ಈ ಕೂಡಲೇ ತಮ್ಮ ಸಂಸ್ಥೆಯನ್ನು ಈ ವರದಿಗೆ ತಳುಕು ಹಾಕಿರುವುದನ್ನು ಕೊನೆಗೊಳಿಸಬೇಕು ಹಾಗೂ ಡಾ. ಜಾನ್ ವಿ ಸಾಗರ್ ಅವರು ತಜ್ಞರ ಸಮಿತಿಯ ಅಧ್ಯಕ್ಷತೆಗೆ ರಾಜೀನಾಮೆ ನೀಡಿ ಈ ವರದಿಯೊಡನೆ ತಮಗೆ ಸಂಬಂಧವಿಲ್ಲವೆಂದು ಸ್ಪಷ್ಟ ಪಡಿಸಬೇಕು. ನಿಮ್ಹಾನ್ಸ್‌ನ ಎಲ್ಲಾ ತಜ್ಞರು ಹಾಗೂ ವಿದ್ಯಾರ್ಥಿಗಳು ಕೂಡ ತಮ್ಮ ಮೇರು ಸಂಸ್ಥೆಯ ಹೆಸರನ್ನು ಹೀಗೆ ದುರ್ಬಳಕೆ ಮಾಡಿ ಅವಮಾನಿಸುವುದನ್ನು ವಿರೋಧಿಸಬೇಕು.

ಮನುಷ್ಯರ ಆತ್ಮದ ಸುತ್ತಲೂ ಐದು ಕೋಶಗಳಿವೆ ಎಂದು ಈ ವರದಿಯಲ್ಲಿ ಹೇಳಲಾಗಿದ್ದು, ನಿಮ್ಹಾನ್ಸ್ ನಿರ್ದೇಶಕರು ಹಾಗೂ ಸಮಿತಿಯ ಅಧ್ಯಕ್ಷರಾಗಿದ್ದವರು ಈ ಐದು ಕೋಶಗಳ ಇರುವಿಕೆಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಈ ಕೂಡಲೇ ಒದಗಿಸಬೇಕು, ಇಲ್ಲವಾದರೆ ಈ ವರದಿಯನ್ನೇ ಹಿಂಪಡೆಯಬೇಕು.

ಯೋಗಾಭ್ಯಾಸದಿಂದ ಮಕ್ಕಳ ಮಾನಸಿಕ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಯಾವುದೇ ದೃಢವಾದ ಆಧಾರಗಳಿಲ್ಲದೆಯೇ ಈ ವರದಿಯಲ್ಲಿ ಹೇಳಲಾಗಿದೆ. ನಿಮ್ಹಾನ್ಸ್ ನಿರ್ದೇಶಕರು ಹಾಗೂ ಸಮಿತಿಯ ಅಧ್ಯಕ್ಷರು ಈ ಹೇಳಿಕೆಗಳಿಗೆ ದೃಢವಾದ ಸಾಕ್ಷ್ಯಾಧಾರಗಳನ್ನು ಈ ಕೂಡಲೇ ಒದಗಿಸಬೇಕು, ಇಲ್ಲವಾದರೆ ಈ ವರದಿಯನ್ನು ಹಿಂಪಡೆಯಬೇಕು. ಹಾಗೆ ಮಾಡದಿದ್ದರೆ ಮಕ್ಕಳ ಮಾನಸಿಕ ಆರೋಗ್ಯ ರಕ್ಷಣೆಗೆ ಸಾಕ್ಷ್ಯಾಧಾರಿತ ವಿಧಾನಗಳನ್ನು ನಿರಾಕರಿಸಿದಂತಾಗಿ ತೊಂದರೆಯಾಗಬಹುದು. ಅದೇ ವರದಿಯಲ್ಲಿ ಮಕ್ಕಳ ಮಾನಸಿಕ ಆರೋಗ್ಯ ಪಾಲನೆಯ ಬಗ್ಗೆ ಯುನಿಸೆಫ್ 2021ರಲ್ಲಿ ಪ್ರಕಟಿಸಿರುವ ವರದಿಯನ್ನು ಹೆಸರಿಸಲಾಗಿದ್ದರೂ, ಅದರಲ್ಲಿ ಯೋಗ ಅಥವಾ ಆಯುರ್ವೇದ ಎಂಬ ಪದಗಳೇ ಕಾಣಸಿಗುವುದಿಲ್ಲ, ಅದೇ ಕಾರಣಕ್ಕೆ ಆ ವರದಿಯ ಸಲಹೆಗಳನ್ನು ಈ ವರದಿಯಲ್ಲಿ ಕಡೆಗಣಿಸಿ ಆಧಾರವಿಲ್ಲದ ಯೋಗ ಇತ್ಯಾದಿಗಳನ್ನು ತುರುಕಲಾಗಿದೆ.

ಇದನ್ನೂ ಓದಿರಿ: ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ಈ ವರದಿಯಲ್ಲಿ ಜೀವ ತಳಿಗೆ ತಕ್ಕ ಆಹಾರ, ಭಾರತೀಯರಿಗೆ ಸಸ್ಯಾಹಾರವೇ ಸೂಕ್ತ, ಅದುವೇ ಅತ್ಯುತ್ತಮ, ಭಾರತೀಯ ಆಹಾರವೇ ಶ್ರೇಷ್ಠ ಎಂಬಿತ್ಯಾದಿಯಾಗಿ ಅನೇಕ ಆಧಾರ ರಹಿತವಾದ, ಬಾಲಿಶವಾದ ಹೇಳಿಕೆಗಳಿವೆ. ವಾಸ್ತವವು ಇವೆಲ್ಲಕ್ಕೆ ವ್ಯತಿರಿಕ್ತವಾಗಿದ್ದು, 16 ದೇಶಗಳ 37 ತಜ್ಞರ ಈಟ್-ಲಾನ್ಸೆಟ್ ಆಯೋಗದ ಮಾನದಂಡಕ್ಕೆ ಹೋಲಿಸಿದರೆ ಭಾರತೀಯ ಆಹಾರವು ಅನಾರೋಗ್ಯಕರವಾಗಿದೆ ಹಾಗೂ ಭಾರತೀಯರು ಧಾನ್ಯಗಳನ್ನೇ ಹೆಚ್ಚಾಗಿ ಅವಲಂಬಿಸಿಕೊಂಡು ಸಾಕಷ್ಟು ಪ್ರೋಟೀನುಗಳನ್ನು ತಿನ್ನುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಮಾತ್ರವಲ್ಲ, ಶೇ.63-79ರಷ್ಟು ಭಾರತೀಯರು, ಅದರಲ್ಲೂ ಗ್ರಾಮೀಣವಾಸಿಗಳು, ಪೌಷ್ಠಿಕ ಆಹಾರವನ್ನು ಕೊಳ್ಳಲು ಶಕ್ತರಾಗಿಲ್ಲ ಎನ್ನುವುದೂ ವರದಿಯಾಗಿದೆ. ಭಾರತದಲ್ಲಿ ಅಪೌಷ್ಠಿಕತೆಯ ಪ್ರಮಾಣವು 38.4% ದಿಂದ 2022ರ ವೇಳೆಗೆ 25%ಗೆ ಇಳಿದಿದೆ ಎಂಬ ಇನ್ನೊಂದು ಸುಳ್ಳನ್ನು ಈ ವರದಿಯಲ್ಲಿ ಹೇಳಲಾಗಿದೆ.

ಆದರೆ ವಾಸ್ತವದಲ್ಲಿ, 5ನೇ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯನುಸಾರ 707 ಜಿಲ್ಲೆಗಳ ಪೈಕಿ 341 ಜಿಲ್ಲೆಗಳಲ್ಲಿ 2016ರಿಂದ 2021ರ ನಡುವೆ 5 ವರ್ಷದೊಳಗಿನ ಮಕ್ಕಳಲ್ಲಿ ತೀವ್ರ ಕುಪೋಷಣೆಯ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಇದರ ಜೊತೆಗೆ, ಕೋವಿಡ್ ನೆಪದಲ್ಲಿ ಮಾಡಲಾದ ಲಾಕ್ ಡೌನ್ ಹಾಗೂ ಶಾಲೆಗಳ ಮುಚ್ಚುವಿಕೆಯಿಂದ ಮಕ್ಕಳ ಪೋಷಣೆಯು ಇನ್ನಷ್ಟು ಕುಂಠಿತವೇ ಆಗಿದೆ.

ಈ ತಜ್ಞರೆಂಬವರ ವರದಿಯು ಜೀವನ ಶೈಲಿಯ ರೋಗಗಳಿಗೆ ಮೊಟ್ಟೆ ಹಾಗೂ ಮಾಂಸಗಳನ್ನು ದೂರಿದೆಯಾದರೂ, ಅದಕ್ಕೆ ಯಾವುದೇ ಆಧಾರಗಳನ್ನು ಒದಗಿಸಿಲ್ಲ. ಅತ್ತ, ವಿವಿಧ ಬಗೆಯ ಶರ್ಕರಗಳ, ಉದಾಹರಣೆಗೆ ಹಣ್ಣಿನ ಸಕ್ಕರೆ ಫ್ರಕ್ಟೋಸ್, ಧಾನ್ಯಗಳ ಸಕ್ಕರೆ ಗ್ಲೂಕೋಸ್, ಅತಿ ಸೇವನೆಯೇ ಬೊಜ್ಜು, ಸಕ್ಕರೆ ಕಾಯಿಲೆ, ರಕ್ತದ ಏರೊತ್ತಡ ಮತ್ತಿತರ ಕಾಯಿಲೆಗಳಿಗೆ ಕಾರಣವೆನ್ನುವುದಕ್ಕೆ ಬೆಟ್ಟದಷ್ಟು ಸಾಕ್ಷ್ಯಾಧಾರಗಳೀಗ ಲಭ್ಯವಿವೆ; ಮಾತ್ರವಲ್ಲ, ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಕಂಡುಬರುವ ಎಡಿಎಚ್‌ಡಿ, ಖಿನ್ನತೆ, ಆತಂಕ ಮತ್ತಿತರ ಮಾನಸಿಕ ಸಮಸ್ಯೆಗಳಿಗೂ ಇವೇ ಆಹಾರಗಳೊಂದಿಗೆ ಸಂಬಂಧ ಕಲ್ಪಿಸುವ ವರದಿಗಳೂ ಬರುತ್ತಲೇ ಇವೆ. ಇದಕ್ಕಿದಿರಾಗಿ, ಮೊಟ್ಟೆ ಹಾಗೂ ಮಾಂಸಗಳ ಸೇವನೆಯು ಬೊಜ್ಜು ಮತ್ತಿತರ ಸೋಂಕಲ್ಲದ ಕಾಯಿಲೆಗಳನ್ನು ತಡೆಯಲು ನೆರವಾಗುತ್ತವೆ ಎನ್ನುವುದಕ್ಕೂ ಸಾಕಷ್ಟು ಆಧಾರಗಳಿವೆ.

ಜೊತೆಗೆ, ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತಿ ರಾಜ್ ವಿಶ್ವವಿದ್ಯಾಲಯವು ಯಾದಗಿರಿ ಹಾಗೂ ಗದಗ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಪ್ರಯೋಜನಗಳ ಬಗ್ಗೆ ಕಳೆದ ವರ್ಷವಷ್ಟೇ ನಡೆಸಿದ ಅಧ್ಯಯನದಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆಗಳನ್ನು ಪಡೆದ ಯಾದಗಿರಿ ಜಿಲ್ಲೆಯ ಮಕ್ಕಳು ತಮ್ಮ ದೇಹದ ತೂಕ ಹಾಗೂ ಸೌಷ್ಟವವನ್ನು ಗಣನೀಯವಾಗಿ ಹೆಚ್ಚಿಸಿಕೊಂಡರೆನ್ನುವುದು ಸಾಬೀತಾಗಿದೆ. ಇದನ್ನು ಪರಿಗಣಿಸಿಯೇ ಈಗ ರಾಜ್ಯ ಹಾಗೂ ಕೇಂದ್ರ ಸರಕಾರಗಳೆರಡೂ ಹಿಂದುಳಿದ 7 ಜಿಲ್ಲೆಗಳಲ್ಲಿ ಮೊಟ್ಟೆ ನೀಡುವುದನ್ನು ಮುಂದುವರಿಸುವುದಷ್ಟೇ ಅಲ್ಲದೆ, ಇಡೀ ರಾಜ್ಯದಲ್ಲಿ 46 ದಿನ ಅದನ್ನು ನೀಡುವುದಕ್ಕೆ ಮುಂದಾಗಿವೆ. ಹಾಗಿರುವಾಗ ಈ ಸಮಿತಿಯ ವರದಿಯು ಕರ್ನಾಟಕ ಸರಕಾರದ ನಿರ್ಧಾರಕ್ಕೇ ವಿರುದ್ಧವಾಗಿದೆ. ಆದ್ದರಿಂದ, ಸರಕಾರವು ಮಕ್ಕಳಿಗೆ ಮೊಟ್ಟೆ ನೀಡುವುದನ್ನು ಕನಿಷ್ಠ 150 ದಿನಗಳಿಗೆ ವಿಸ್ತರಿಸಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ.

ಇದನ್ನೂ ಓದಿರಿ: ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ಈ ವರದಿಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ತಪ್ಪಿಸುವುದಕ್ಕಾಗಿ ಅವರಲ್ಲಿ ಸಮಾನತೆಯಿರಬೇಕು, ಪಂಕ್ತಿ ಭೇದವಿರಬಾರದು, ಧರ್ಮಪಾಲನೆಯಾಗಬೇಕು ಎಂದೆಲ್ಲ ಹೇಳಲಾಗಿದೆ. ಮೇಲೆ ಹೇಳಲಾದ ಅಧ್ಯಯನದಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಕೇವಲ ಶೇ. 4ರಷ್ಟು ಮಕ್ಕಳು ಮಾತ್ರವೇ ಮೊಟ್ಟೆಯ ಬದಲು ಬಾಳೆಹಣ್ಣನ್ನು ಆಯ್ಕೆ ಮಾಡಿದ್ದರು ಮತ್ತು ಈ 4% ಮಕ್ಕಳು ಯಾವುದೇ ತಾರತಮ್ಯ ಅಥವಾ ಮಾನಸಿಕ ವೇದನೆಗೆ ತುತ್ತಾಗಲಿಲ್ಲ. ಇದಕ್ಕೂ ಮೊದಲು 2006ರಲ್ಲಿ, ಈಗ ಮೊಟ್ಟೆ ಕೊಡಬಾರದೆನ್ನುವ ಎನ್‌ಇಪಿ ಸಮಿತಿಗಳ ಕಾರ್ಯಪಡೆಯ ಮುಖ್ಯಸ್ಥರಾಗಿರುವ ಮದನ ಗೋಪಾಲ್ ಅವರೇ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದಾಗ, ನಡೆಸಿದ್ದ ಸಮೀಕ್ಷೆಯಲ್ಲಿ ಆಗ ರಾಜ್ಯದಲ್ಲಿ ಕಲಿಯುತ್ತಿದ್ದ 58 ಲಕ್ಷ ಮಕ್ಕಳಲ್ಲಿ 50 ಲಕ್ಷ ಮಕ್ಕಳು ಬಿಸಿಯೂಟದಲ್ಲಿ ಮೊಟ್ಟೆಯನ್ನೇ ಬಯಸಿದ್ದರು. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಮತ್ತಿತರ ಎಲ್ಲಾ ಸಮೀಕ್ಷೆಗಳಲ್ಲಿ ರಾಜ್ಯದ 86-96% ಜನರು ಮತ್ತು ಮಕ್ಕಳು ಮೊಟ್ಟೆ-ಮಾಂಸಾಹಾರವನ್ನೇ ಸೇವಿಸುವವರು ಎಂಬುದು ಸಾಬೀತಾಗಿರುವಾಗ ಇನ್ನುಳಿದ 4-14% ಮಂದಿಯ ನೆಪದಲ್ಲಿ ಇವರೆಲ್ಲ ಮಕ್ಕಳಿಗೆ ಮೊಟ್ಟೆಯಿಲ್ಲದಂತೆ ಮಾಡುವುದು ಕ್ರೂರವೂ, ಅಪ್ರಜಾಸತ್ತಾತ್ಮಕವೂ ಆಗುತ್ತದೆ. ಆದ್ದರಿಂದ ಈ ವರದಿಯ ಲೇಖಕರು ನಿಜಕ್ಕೂ ಪಂಕ್ತಿ ಭೇದ ನಿವಾರಣೆ, ಧರ್ಮಪಾಲನೆಗಳ ಬಗ್ಗೆ ಆಸಕ್ತರಾಗಿದ್ದಲ್ಲಿ ಈ ಬಹುಸಂಖ್ಯಾತ ಮಕ್ಕಳಿಗೆ ಮೊಟ್ಟೆಯನ್ನು ಒದಗಿಸಬೇಕು ಮತ್ತು ಇನ್ನುಳಿದ ಮಕ್ಕಳಿಗೆ ಅವರಿಷ್ಟದ ಆಹಾರವನ್ನು ಆಯ್ದುಕೊಳ್ಳುವ ಸ್ವಾತಂತ್ರ್ಯವನ್ನು ನೀಡಬೇಕು.

ಜೈಮಿನೀಯ ಬ್ರಾಹ್ಮಣ, ಆಯುರ್ವೇದ ಮತ್ತಿತರ ಪ್ರಾಚೀನ ಗ್ರಂಥಗಳ ಬಗ್ಗೆ ಬಹಳಷ್ಟು ಆಸ್ಥೆಯನ್ನು ತೋರಿಸಿರುವ ಈ ಸಮಿತಿಯ ಸದಸ್ಯರು ಮಾಂಸಾಹಾರಗಳನ್ನು ಪಟ್ಟಿ ಮಾಡಿ ಅವುಗಳ ಸದ್ಗುಣಗಳನ್ನು ಹೊಗಳಿ, ಅದಕ್ಕೆ ಆಧ್ಯಾತ್ಮಿಕ ಸಮರ್ಥನೆಗಳನ್ನೂ ಒದಗಿಸಿರುವ ಶತಪಥ ಬ್ರಾಹ್ಮಣ (11.7.1.3 ಮತ್ತು 12.9.1.1), ಜೈಮಿನೀಯ ಬ್ರಾಹ್ಮಣ (1.42-44), ಮನು ಸ್ಮೃತಿ (5:28-33), ಚರಕ ಸಂಹಿತೆ (ಶರೀರ ಸ್ಥಾನ 4:36-40 ಮತ್ತು 8:16, ಸೂತ್ರ ಸ್ಥಾನ 27), ಅಷ್ಟಾಂಗ ಹೃದಯ (ಸೂತ್ರ ಸ್ಥಾನ 6) ಮತ್ತು ಭಗವತ್ ಗೀತೆ (17:8-10) ಗಳನ್ನೆಲ್ಲ ಓದಿಕೊಳ್ಳಬೇಕೆಂದು ನಾವು ಸಲಹೆ ನೀಡುತ್ತಿದ್ದೇವೆ. ಹಾಗೆಯೇ, ನಮ್ಮ ನಾಡಿನ ಅತ್ಯಂತ ಗೌರವಾನ್ವಿತರಾದ, ದಾರ್ಶನಿಕ ತತ್ವಜ್ಞಾನಿಗಳಾದ, ಬುದ್ಧ ಹಾಗೂ ಬಸವಣ್ಣನವರ ಬೋಧನೆಗಳನ್ನೂ, ವಚನಗಳನ್ನೂ ಮನದಟ್ಟು ಮಾಡಿಕೊಳ್ಳಬೇಕು. ಹಾಗಾಗಿ, ಆಧುನಿಕ ವಿಜ್ಞಾನದ ಬಗ್ಗೆಯಾಗಲೀ, ಪ್ರಾಚೀನ ಗ್ರಂಥಗಳ ಬಗ್ಗೆಯಾಗಲೀ ಯಾವುದೇ ಅರಿವಿಲ್ಲದಂತೆ ಬರೆಯಲಾಗಿರುವ ಈ ಸಮಿತಿಯ ವರದಿಯನ್ನು ಈ ಕೂಡಲೇ ಸಂಪೂರ್ಣವಾಗಿ ಹಿಂಪಡೆಯಲೇಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...