Homeಮುಖಪುಟನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ಎರಡು ಪೋರ್ಟಲ್‌ಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ

- Advertisement -
- Advertisement -

ವೆಬ್‌ ಪೋರ್ಟಲ್‌ಗಳಾದ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗೆ ಶುಕ್ರವಾದಂದು ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದಾಯ ತೆರಿಗೆ ಇಲಾಖೆಯು, ತನ್ನ ಅಧಿಕಾರಿಗಳು ದಕ್ಷಿಣ ದೆಹಲಿಯಲ್ಲಿ ಇರುವ ನ್ಯೂಸ್ ಪೋರ್ಟಲ್‌ಗಳ ಕಚೇರಿಗಳಿಗೆ “ಸರ್ವೇಗಳನ್ನು ನಡೆಸಲು” ಹೋಗಿದ್ದಾರೆ ಎಂದು ದೃಡಪಡಿಸಿದೆ.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಅಧಿಕಾರಿಗಳು ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಈ ಕಾರ್ಯಾಚರಣೆಯು ಕೆಲವು ತೆರಿಗೆ ಪಾವತಿ ವಿವರಗಳನ್ನು ಮತ್ತು ಸಂಸ್ಥೆಗಳಿಂದ ರವಾನೆಯಾದ ಹಣವನ್ನು ಪರಿಶೀಲಿಸುವುದರ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

“ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ 11.30 ರ ಸುಮಾರಿಗೆ ಬಂದರು ಮತ್ತು ಇನ್ನೂ ಹೊರಟಿಲ್ಲ. ಅಲ್ಲದೆ ಕಚೇರಿಯಲ್ಲಿರುವ ನೌಕರರು ತಮ್ಮ ಸೆಲ್ ಫೋನ್‌ಗಳನ್ನು ಬಳಸದಂತೆ ಕೇಳಿಕೊಂಡರು” ಎಂದು ನ್ಯೂಸ್‌ಲಾಂಡ್ರಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್‌ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ನ್ಯೂಸ್‌ ಲಾಂಡ್ರಿ ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ಆಗಿದೆ. ನ್ಯೂಸ್‌ ಕ್ಲಿಕ್ ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ಆಗಿದೆ. ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ದಂಪತಿಗಳ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...