Homeಮುಖಪುಟನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ಎರಡು ಪೋರ್ಟಲ್‌ಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ

- Advertisement -
- Advertisement -

ವೆಬ್‌ ಪೋರ್ಟಲ್‌ಗಳಾದ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗೆ ಶುಕ್ರವಾದಂದು ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದಾಯ ತೆರಿಗೆ ಇಲಾಖೆಯು, ತನ್ನ ಅಧಿಕಾರಿಗಳು ದಕ್ಷಿಣ ದೆಹಲಿಯಲ್ಲಿ ಇರುವ ನ್ಯೂಸ್ ಪೋರ್ಟಲ್‌ಗಳ ಕಚೇರಿಗಳಿಗೆ “ಸರ್ವೇಗಳನ್ನು ನಡೆಸಲು” ಹೋಗಿದ್ದಾರೆ ಎಂದು ದೃಡಪಡಿಸಿದೆ.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಅಧಿಕಾರಿಗಳು ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಈ ಕಾರ್ಯಾಚರಣೆಯು ಕೆಲವು ತೆರಿಗೆ ಪಾವತಿ ವಿವರಗಳನ್ನು ಮತ್ತು ಸಂಸ್ಥೆಗಳಿಂದ ರವಾನೆಯಾದ ಹಣವನ್ನು ಪರಿಶೀಲಿಸುವುದರ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

“ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ 11.30 ರ ಸುಮಾರಿಗೆ ಬಂದರು ಮತ್ತು ಇನ್ನೂ ಹೊರಟಿಲ್ಲ. ಅಲ್ಲದೆ ಕಚೇರಿಯಲ್ಲಿರುವ ನೌಕರರು ತಮ್ಮ ಸೆಲ್ ಫೋನ್‌ಗಳನ್ನು ಬಳಸದಂತೆ ಕೇಳಿಕೊಂಡರು” ಎಂದು ನ್ಯೂಸ್‌ಲಾಂಡ್ರಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್‌ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ನ್ಯೂಸ್‌ ಲಾಂಡ್ರಿ ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ಆಗಿದೆ. ನ್ಯೂಸ್‌ ಕ್ಲಿಕ್ ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ಆಗಿದೆ. ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...