Homeಮುಖಪುಟನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ವೆಬ್‌ ಪೋರ್ಟಲ್‌‌ ಕಚೇರಿಯಲ್ಲಿ ಐಟಿ ಅಧಿಕಾರಿಗಳ ‘ಕಾರ್ಯಾಚರಣೆ’!

ಎರಡು ಪೋರ್ಟಲ್‌ಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ

- Advertisement -
- Advertisement -

ವೆಬ್‌ ಪೋರ್ಟಲ್‌ಗಳಾದ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗೆ ಶುಕ್ರವಾದಂದು ಆದಾಯ ತೆರಿಗೆ ಅಧಿಕಾರಿಗಳು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದಾರೆ. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದಾಯ ತೆರಿಗೆ ಇಲಾಖೆಯು, ತನ್ನ ಅಧಿಕಾರಿಗಳು ದಕ್ಷಿಣ ದೆಹಲಿಯಲ್ಲಿ ಇರುವ ನ್ಯೂಸ್ ಪೋರ್ಟಲ್‌ಗಳ ಕಚೇರಿಗಳಿಗೆ “ಸರ್ವೇಗಳನ್ನು ನಡೆಸಲು” ಹೋಗಿದ್ದಾರೆ ಎಂದು ದೃಡಪಡಿಸಿದೆ.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಅಧಿಕಾರಿಗಳು ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಲವ್ಲಿನಾಗೆ ಶುಭಕೋರಿದ ಬ್ಯಾನರ್‌ನಲ್ಲಿ ಅವರ ಫೋಟೊನೇ ಇಲ್ಲ: ವರದಿ ಮಾಡಿದ ವೆಬ್‌ಸೈಟ್‌ ಮೇಲೆ FIR!

ಈ ಕಾರ್ಯಾಚರಣೆಯು ಕೆಲವು ತೆರಿಗೆ ಪಾವತಿ ವಿವರಗಳನ್ನು ಮತ್ತು ಸಂಸ್ಥೆಗಳಿಂದ ರವಾನೆಯಾದ ಹಣವನ್ನು ಪರಿಶೀಲಿಸುವುದರ ಸಂಬಂಧಿಸಿದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

“ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳಿಗ್ಗೆ 11.30 ರ ಸುಮಾರಿಗೆ ಬಂದರು ಮತ್ತು ಇನ್ನೂ ಹೊರಟಿಲ್ಲ. ಅಲ್ಲದೆ ಕಚೇರಿಯಲ್ಲಿರುವ ನೌಕರರು ತಮ್ಮ ಸೆಲ್ ಫೋನ್‌ಗಳನ್ನು ಬಳಸದಂತೆ ಕೇಳಿಕೊಂಡರು” ಎಂದು ನ್ಯೂಸ್‌ಲಾಂಡ್ರಿ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್‌ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ನ್ಯೂಸ್‌ ಲಾಂಡ್ರಿ ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ಆಗಿದೆ. ನ್ಯೂಸ್‌ ಕ್ಲಿಕ್ ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ಆಗಿದೆ. ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ.

ಇದನ್ನೂ ಓದಿ: ಹಿಂದೂ ಯುವತಿ ಮುಸ್ಲಿಂ ಉಗ್ರನನ್ನು ಕೊಂದಳೇ? ಇಲ್ಲ, ವೆಬ್‍ ಸೀರಿಸ್ ಪಾತ್ರವನ್ನು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...