Homeಕರ್ನಾಟಕಬಿಜೆಪಿ ಎಂಎಲ್‌ಸಿ ಆರ್ ಶಂಕರ್ ಮನೆ ಮೇಲೆ ಐಟಿ ರೈಡ್: ಸರ್ಕಾರದ ವಿರುದ್ಧ ಬೆಂಬಲಿಗರ ಆಕ್ರೋಶ

ಬಿಜೆಪಿ ಎಂಎಲ್‌ಸಿ ಆರ್ ಶಂಕರ್ ಮನೆ ಮೇಲೆ ಐಟಿ ರೈಡ್: ಸರ್ಕಾರದ ವಿರುದ್ಧ ಬೆಂಬಲಿಗರ ಆಕ್ರೋಶ

- Advertisement -
- Advertisement -

ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್ ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದೆ.

ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್ ಮನೆಗೆ ಮಂಗಳವಾರ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಸುಮಾರು ಏಳು ಗಂಟೆಗಳ ಕಾಲ ಶಂಕರ್‌ ಮನೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ‌ ವಶಕ್ಕೆ ನೀಡಿದ್ದಾರೆ.

ಐಟಿ ಅಧಿಕಾರಿಗಳು ಪರಿಶೀಲನೆ ವೇಳೆ ಈ ಎಲ್ಲ ವಸ್ತುಗಳ ಸರಕು ಸಾಗಣಿ ತೆರಿಗೆ (ಜಿಎಸ್‌ಟಿ) ಪಾವತಿಸಿರುವ ರಶೀದಿ ನೀಡುವಂತೆ ಆರ್‌.ಶಂಕರ್‌ ಅವರನ್ನು ಕೇಳಿದ್ದಾರೆ.

ಆರ್‌ ಶಂಕರ್ ಚುನಾವಣೆ ನಿಯಮ ಉಲ್ಲಂಘನೆ ಮಾಡಿದ್ದಾರೆಯೇ?

ಎಂಟು ಕೋಟಿ ಮೌಲ್ಯದ ವಸ್ತುಗಳು ಪತ್ತೆಯಾಗುತ್ತಿದ್ದಂತೆ ಎಂಎಲ್‌ಸಿ ಶಂಕರ್‌ ಅವರು ಚುನಾವಣೆ ನಿಯಮ ಉಲ್ಲಂಘನೆ ಮಾಡಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಹಾಗಾಗಿ ಕಂದಾಯ ಇಲಾಖೆ ಅಧಿಕಾರಿಗಳು ಕೂಡಾ ಶಂಕರ್ ಮನೆ ಮೇಲೆ ದಾಳಿ ಮಾಡಿದ್ದಾರೆ. ”ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರು ಪಡೆಸಿ, ಒಪ್ಪಿಗೆ ಪಡೆದು ಎಫ್‌ಐಆರ್‌ ದಾಖಲಿಸಲಾಗುವುದು” ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದ್ದಾರೆ.

ಬಿಜೆಪಿ ವಿರುದ್ಧ ಅಭಿಮಾನಿಗಳ ಆಕ್ರೋಶ

ಆರ್.ಶಂಕರ್ ನಿವಾಸದ ಮೇಲೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಆರ್‌. ಶಂಕರ್‌ ಅವರ ತ್ಯಾಗವೇ ಕಾರಣ ಅಂಥವರ ಮನೆ ಮೇಲೆ ದಾಳಿ ನಡೆಸುತ್ತಾರೆ ಎಂದರೆ ಮುಂಬರುವ ಚುನಾವಣೆಯಲ್ಲಿ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ಕೆಲ ಬೆಂಬಲಿಗರು ಸರ್ಕಾರದ ವಿರುದ್ಧ ಕಿಡಿಕಾರಿದರು.

ಈ ಬಗ್ಗೆ ಮಾತನಾಡಿರುವ ಆರ್ ಶಂಕರ್ ಅವರು, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ. ನಾನು ಬೇರೆ ಪಕ್ಷದಿಂದ ಅಥವಾ ಪಕ್ಷೇತರ ಅಭ್ಯರ್ಥಿಯಾಗಿಯೂ ಗೆಲ್ಲುವ ಸಾಮರ್ಥ್ಯ ಇದೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಸಭೆಯಲ್ಲಿ ಶಂಕರ್ ಅವರು ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನನಗೆ ಮಂತ್ರಿ ಸ್ಥಾನ ನೀಡುತ್ತೇನೆ ಎಂದು ಹೇಳಿ ನಂಬಿಸಿ ದ್ರೋಹ ಮಾಡಿದ್ದೀರಿ ಎಂದು ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ”ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದ್ದಾರೆ.

ಆರ್ ಶಂಕರ್ ಹಿನ್ನೆಲೆ

ಆರ್‌. ಶಂಕರ್ ಮೂಲತಃ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ರಾಣೆಬೆನ್ನೂರು ಶಾಸಕರಾಗಿ ಆಯ್ಕೆಗೊಂಡರು. ರಾಣೆಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಅವರನ್ನು ಸೋಲಿಸಿ ಕರ್ನಾಟಕ ಪ್ರಜಾ ಜನತಾ ಪಕ್ಷದಿಂದ ಏಕೈಕ ಶಾಸಕರಾಗಿ ಆಯ್ಕೆಯಾದರು.

2018ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿದ್ದ ವೇಳೆ ಶಂಕರ್ ಅವರು ಯಡಿಯೂರಪ್ಪನವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದರು. ಆದರೆ ದಿಢೀರ್ ರಾಜಕೀಯ ಬದಲಾವಣೆ ನಂತರ ಅದೇ ದಿನ ಸಾಯಂಕಾಲ ಕೆಪಿಸಿಸಿ ಕಚೇರಿಗೆ ಹೋಗಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರು.

ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿ ಬಳಿಕ ಕಾಂಗ್ರೆಸ್ ಜೊತೆಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದರು. ಆದರೆ ನಂತರ ಅವರು ಆಪರೇಷನ್‌ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರ್ಪಡೆಗೊಂಡರು. ಆಗ ತಮ್ಮ ಶಾಸಕ ಸ್ಥಾನ ಕಳೆದುಕೊಂಡರು.

ಆ ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಶಂಕರ್ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೆ, ಯಡಿಯೂರಪ್ಪನವರು ಸಚಿವ ಸ್ಥಾನದ ಭರವಸೆ ನೀಡಿದ್ದರು. ಆನಂತರ ಅವರಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...