Homeಕರ್ನಾಟಕಕೇಂದ್ರದ ಮಾಜಿ ಸಚಿವ ಆರ್.​ಎಲ್​ ಜಾಲಪ್ಪರವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ...

ಕೇಂದ್ರದ ಮಾಜಿ ಸಚಿವ ಆರ್.​ಎಲ್​ ಜಾಲಪ್ಪರವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ…

- Advertisement -
- Advertisement -

ಕೇಂದ್ರದ ಮಾಜಿ ಸಚಿವ ಆರ್​ಎಲ್​ ಜಾಲಪ್ಪ ಅವರಿಗೆ ಸೇರಿದ ವಿದ್ಯಾಸಂಸ್ಥೆ, ಆಸ್ಪತ್ರೆಗಳ ಕಚೇರಿಗಳು ಹಾಗೂ ಸಂಬಂಧಿಕರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿ ಹತ್ತಕ್ಕೂ ಹೆಚ್ಚು ತಂಡ ಬೆಳ್ಳಂಬೆಳಿಗ್ಗೆ ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಹಾಗೂ ಕೋಲಾರ ಹೊರವಲಯದಲ್ಲಿರುವ ಶ್ರೀ ದೇವರಾಜ್ ಅರಸ್ ಮೆಡಿಕಲ್ ಕಾಲೇಜ್, ಆರ್ ಎಲ್ ಜಾಲಪ್ಪ ಆಸ್ಪತ್ರೆ ಹಾಗೂ ಇನ್ನಿತರ ಕಾಲೇಜು ಕಮ್ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದೆ.

ಆರ್ ಎಲ್ ಜಾಲಪ್ಪ ಅವರು ದೇವರಾಜ್ ಅರಸ್ ಅಕಾಡೆಮಿ ಫಾರ್ ಹೈಯರ್ ಎಜುಕೇಷನ್ ಅಂಡ್ ರಿಸರ್ಚ್(ಎಸ್ ಡಿಯುಎಚ್ ಇಆರ್) ನ ಮುಖ್ಯಸ್ಥರಾಗಿದ್ದಾರೆ. ಈ ಎಲ್ಲಾ ವಿದ್ಯಾಸಂಸ್ಥೆಗಳು ತೆರಿಗೆ ವಂಚನೆ ಹಾಗೂ ಮೆಡಿಕಲ್ ವಿದ್ಯಾರ್ಥಿಗಳಿಗೆ ಸೀಟ್ ಹಂಚಿಕೆ ವೇಳೆ ಎಂಬಿಬಿಎಸ್​ಗೆ ಮೂರು ಕೋಟಿ, ಎಂಡಿ ಕೋರ್ಸ್​ಗೆ ಐದು ಕೋಟಿ ರೂಪಾಯಿ ಹಣ ಪಡೆದು ಸೀಟು ಕೊಟ್ಟಿರುವ ಆರೋಪ ಹಿನ್ನಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕಳೆದ ವರ್ಷ ಐಟಿ ದಾಳಿ ವೇಳೆ ದಾಖಲೆ ಇಲ್ಲದ ಎರಡು ಕೋಟಿ ಹಣ ಹಾಗೂ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸದ್ಯಕ್ಕೆ ಕಾಲೇಜು, ಆಸ್ಪತ್ರೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿರುವುದರಿಂದ ಒಳಗೆ ಯಾರನ್ನು ಬಿಡುತ್ತಿಲ್ಲ.

ದಾಳಿ ಬಗ್ಗೆ ಆರ್ ಜಾಲಪ್ಪ ವಿದ್ಯಾಸಂಸ್ಥೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇನ್ನು ಗೆಸ್ಟ್​ಹೌಸ್​ನಲ್ಲಿ ಮಾಜಿ ಕೇಂದ್ರ ಸಚಿವ ಆರ್​ ಎಲ್​ ಜಾಲಪ್ಪ ಅವರನ್ನು ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...