ಆದಾಯ ತೆರಿಗೆ ಇಲಾಖೆಯು ಎನ್ಸಿಪಿ ನಾಯಕ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸೇರಿದ ಸುಮಾರು 1,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ.
ಸಹಕಾರಿ ಸಕ್ಕರೆ ಕಾರ್ಖಾನೆಗಳು ಸೇರಿದಂತೆ ಹಲವೆಡೆ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಬೇನಾಮಿ ಆಸ್ತಿ ವಹಿವಾಟು ನಿಷೇಷ ಕಾಯ್ದೆ 1998 ಅಡಿಯಲ್ಲಿ ಐಟಿ ದಾಳಿ ನಡೆಸಿದೆ.
ಗೋವಾದಲ್ಲಿನ ರೆಸಾರ್ಟ್ ಸೇರಿದಂತೆ, ಕಚೇರಿ ಹಾಗೂ ದೆಹಲಿಯಲ್ಲಿನ ನಿವಾಸದ ಆಸ್ತಿ ಮೇಲೆ ದಾಳಿ ಮಾಡಲಾಗಿದೆ. ಎನ್ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿನ ಸುಮಾರು 1,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿರುವು
ಆದಾಯ ತೆರಿಗೆ ಇಲಾಖೆಯು ಮಹಾರಾಷ್ಟ್ರದಾದ್ಯಂತ 27 ಕಡೆ ತುಂಡು ಭೂಮಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ. ಈ ಭೂಮಿಯ ಒಟ್ಟು ಮೌಲ್ಯ ಸುಮಾರು 500 ಕೋಟಿ ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಆಸ್ತಿಗಳು ಅಜಿತ್ ಪವಾರ್ ಮತ್ತು ಅವರ ಕುಟುಂಬದ ಇತರ ಸದಸ್ಯರ ಒಡೆತನದಲ್ಲಿವೆ ಎನ್ನಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇದನ್ನೂ ಓದಿರಿ: 2070ರ ವೇಳೆಗೆ ಭಾರತದಲ್ಲಿ ಇಂಗಾಲ ವಿಸರ್ಜನೆ ತಟಸ್ಥ; ಮೋದಿ ಭರವಸೆ