Homeಮುಖಪುಟಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸುಗಂಧ ದ್ರವ್ಯಗಳ ಉದ್ಯಮಿಯೊಬ್ಬರ ಮನೆ, ಕಾರ್ಖಾನೆ ಮೇಲೆ ಆದಾಯ ಇಲಾಖೆ(ಐಟಿ) ದಾಳಿ ಮಾಡಿ ನೂರಾರು ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ಈ ನಡುವೆ ಶುಕ್ರವಾರ ಬೆಳಿಗ್ಗೆ ರಾಜ್ಯದ ಪ್ರತಿಪಕ್ಷ ಸಮಾಜವಾದಿ ಪಕ್ಷದ ನಾಯಕ ಪುಷ್ಪರಾಜ್‌ ಜೈನ್ ಅವರು ಕೂಡಾ ಐಟಿ ಇಲಾಖೆಯ ಅಧಿಕಾರಿಗಳಿಂದ ಶೋಧಿಸಲ್ಪಟ್ಟಿದ್ದಾರೆ.

ಪುಷ್ಪರಾಜ್‌ ಜೈನ್ ಅವರು ಸುಗಂಧ ದ್ರವ್ಯ, ಪೆಟ್ರೋಲ್ ಪಂಪ್‌ಗಳು ಮತ್ತು ಕೋಲ್ಡ್ ಸ್ಟೋರೇಜ್‌ಗಳನ್ನು ಹೊಂದಿರುವ ಉದ್ಯಮಿಯಾಗಿದ್ದಾರೆ. ಅವರು ಇತ್ತೀಚೆಗಷ್ಟೇ ತಮ್ಮ ಪಕ್ಷದ ಪ್ರಚಾರಕ್ಕಾಗಿ ‘ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ’ವನ್ನು ಬಿಡುಗಡೆ ಮಾಡಿದ್ದರು. ಇದೀಗ ಐಟಿ ಇಲಾಖೆಯು ಉತ್ತರ ಪ್ರದೇಶ, ದೆಹಲಿ ಮತ್ತು ಮುಂಬೈನಲ್ಲಿ ಅವರಿಗೆ ಸಂಬಂಧಿಸಿದ ಸುಮಾರು 50 ಸ್ಥಳಗಳನ್ನು ಶೋಧಿಸುತ್ತಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

ಐಟಿ ದಾಳಿಯ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷ, “ಕಳೆದ ಬಾರಿ ಭಾರಿ ವೈಫಲ್ಯ ಹೊಂದಿತ್ತು. ಇದೀಗ ಬಿಜೆಪಿ ಕಟ್ಟಕಡೆಯ ಸ್ನೇಹಿತ ಐಟಿ ಇಲಾಕೆ ಕೊನೆಗೂ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್‌‌ ಜೈನ್ ಮತ್ತು ಖನೌಜ್‌ನ ಇತರ ಸುಗಂಧ ದ್ರವ್ಯ ವ್ಯಾಪಾರಿಗಳ ಸ್ಥಳದ ಮೇಲೆ ದಾಳಿ ಮಾಡಿದೆ. ಹೆದರಿರುವ ಬಿಜೆಪಿ ಯುಪಿ ಚುನಾವಣೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಹಿರಂಗವಾಗಿ ದುರ್ಬಳಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ, ಅವರು ಮತದ ಮೂಲಕ ಉತ್ತರಿಸುತ್ತಾರೆ” ಎಂದು ಹೇಳಿದೆ.

ಐಟಿ ಇಲಾಖೆಯು ಇತ್ತೀಚೆಗೆ ಮತ್ತೋರ್ವ ಉದ್ಯಮಿ ಪಿಯೂಷ್ ಜೈನ್ ಅವರಿಗೆ ಸೇರಿದ ಕಾನ್ಪುರ ಮತ್ತು ಖನೌಜ್‌‌ನ ಕೆಲವು ಸ್ಥಳಗಳಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನಗಳನ್ನು ವಶಕ್ಕೆ ಪಡೆದಿತ್ತು. ಈ ವೇಳೆ 196 ಕೋಟಿ ರೂ. ನಗದು ಮತ್ತು 23 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ದೇಶದ ಪ್ರತಿಷ್ಠಿತ ಚುನಾವಣೆಯಾಗಿರುವ ಉತ್ತರ ಪ್ರದೇಶದಲ್ಲಿ ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರಗಳನ್ನು ಪ್ರಾರಂಭಿಸಿವೆ. ಈ ಮಧ್ಯದಲ್ಲಿ ಈ ದಾಳಿಗಳು ನಡೆಯುತ್ತಿದ್ದು, ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್‌‌ ಜೈನ್‌ ಅವರನ್ನು ಬೆಂಬಲಿಸುತ್ತಿದೆ ಎಂದು ಪರಸ್ಪರ ಆರೋಪಿಸುತ್ತಿದೆ.

ಇದನ್ನೂ ಓದಿ:5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಸಮಾಜವಾದಿ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದವರು ಪಿಯೂಷ್ ಜೈನ್ ಎಂದು ಬಿಜೆಪಿ ಆರೋಪಿಸಿತ್ತು. ಬುಧವಾರ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ‘‘ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯವಹಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ಕ್ಕಿಂತ ಮೊದಲು ಅವರು ಎಲ್ಲೆಡೆ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಉತ್ತರ ಪ್ರದೇಶ ಎಲ್ಲರಿಗೂ ಕಾಣಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್‌‌ ಯಾದವ್, “ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರೊಂದಿಗೆ ಸೇರಿಸಲು ನೋಡುತ್ತಿದೆ. ಪಿಯೂಷ್ ಜೈನ್ ಅವರೊಂದಿಗಿನ ನಮಗೆ ಯಾವುದೆ ಸಂಬಂಧವಿಲ್ಲ. ಬಿಜೆಪಿಯು ಅವರದೇ ಉದ್ಯಮಿಯ ಮೇಲೆ ತಪ್ಪಾಗಿ ದಾಳಿ ಮಾಡಿದೆ” ಎಂದು ಹೇಳಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...