Homeಮುಖಪುಟಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸುಗಂಧ ದ್ರವ್ಯಗಳ ಉದ್ಯಮಿಯೊಬ್ಬರ ಮನೆ, ಕಾರ್ಖಾನೆ ಮೇಲೆ ಆದಾಯ ಇಲಾಖೆ(ಐಟಿ) ದಾಳಿ ಮಾಡಿ ನೂರಾರು ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ಈ ನಡುವೆ ಶುಕ್ರವಾರ ಬೆಳಿಗ್ಗೆ ರಾಜ್ಯದ ಪ್ರತಿಪಕ್ಷ ಸಮಾಜವಾದಿ ಪಕ್ಷದ ನಾಯಕ ಪುಷ್ಪರಾಜ್‌ ಜೈನ್ ಅವರು ಕೂಡಾ ಐಟಿ ಇಲಾಖೆಯ ಅಧಿಕಾರಿಗಳಿಂದ ಶೋಧಿಸಲ್ಪಟ್ಟಿದ್ದಾರೆ.

ಪುಷ್ಪರಾಜ್‌ ಜೈನ್ ಅವರು ಸುಗಂಧ ದ್ರವ್ಯ, ಪೆಟ್ರೋಲ್ ಪಂಪ್‌ಗಳು ಮತ್ತು ಕೋಲ್ಡ್ ಸ್ಟೋರೇಜ್‌ಗಳನ್ನು ಹೊಂದಿರುವ ಉದ್ಯಮಿಯಾಗಿದ್ದಾರೆ. ಅವರು ಇತ್ತೀಚೆಗಷ್ಟೇ ತಮ್ಮ ಪಕ್ಷದ ಪ್ರಚಾರಕ್ಕಾಗಿ ‘ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ’ವನ್ನು ಬಿಡುಗಡೆ ಮಾಡಿದ್ದರು. ಇದೀಗ ಐಟಿ ಇಲಾಖೆಯು ಉತ್ತರ ಪ್ರದೇಶ, ದೆಹಲಿ ಮತ್ತು ಮುಂಬೈನಲ್ಲಿ ಅವರಿಗೆ ಸಂಬಂಧಿಸಿದ ಸುಮಾರು 50 ಸ್ಥಳಗಳನ್ನು ಶೋಧಿಸುತ್ತಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

ಐಟಿ ದಾಳಿಯ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷ, “ಕಳೆದ ಬಾರಿ ಭಾರಿ ವೈಫಲ್ಯ ಹೊಂದಿತ್ತು. ಇದೀಗ ಬಿಜೆಪಿ ಕಟ್ಟಕಡೆಯ ಸ್ನೇಹಿತ ಐಟಿ ಇಲಾಕೆ ಕೊನೆಗೂ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್‌‌ ಜೈನ್ ಮತ್ತು ಖನೌಜ್‌ನ ಇತರ ಸುಗಂಧ ದ್ರವ್ಯ ವ್ಯಾಪಾರಿಗಳ ಸ್ಥಳದ ಮೇಲೆ ದಾಳಿ ಮಾಡಿದೆ. ಹೆದರಿರುವ ಬಿಜೆಪಿ ಯುಪಿ ಚುನಾವಣೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಹಿರಂಗವಾಗಿ ದುರ್ಬಳಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ, ಅವರು ಮತದ ಮೂಲಕ ಉತ್ತರಿಸುತ್ತಾರೆ” ಎಂದು ಹೇಳಿದೆ.

ಐಟಿ ಇಲಾಖೆಯು ಇತ್ತೀಚೆಗೆ ಮತ್ತೋರ್ವ ಉದ್ಯಮಿ ಪಿಯೂಷ್ ಜೈನ್ ಅವರಿಗೆ ಸೇರಿದ ಕಾನ್ಪುರ ಮತ್ತು ಖನೌಜ್‌‌ನ ಕೆಲವು ಸ್ಥಳಗಳಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನಗಳನ್ನು ವಶಕ್ಕೆ ಪಡೆದಿತ್ತು. ಈ ವೇಳೆ 196 ಕೋಟಿ ರೂ. ನಗದು ಮತ್ತು 23 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ದೇಶದ ಪ್ರತಿಷ್ಠಿತ ಚುನಾವಣೆಯಾಗಿರುವ ಉತ್ತರ ಪ್ರದೇಶದಲ್ಲಿ ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರಗಳನ್ನು ಪ್ರಾರಂಭಿಸಿವೆ. ಈ ಮಧ್ಯದಲ್ಲಿ ಈ ದಾಳಿಗಳು ನಡೆಯುತ್ತಿದ್ದು, ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್‌‌ ಜೈನ್‌ ಅವರನ್ನು ಬೆಂಬಲಿಸುತ್ತಿದೆ ಎಂದು ಪರಸ್ಪರ ಆರೋಪಿಸುತ್ತಿದೆ.

ಇದನ್ನೂ ಓದಿ:5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಸಮಾಜವಾದಿ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದವರು ಪಿಯೂಷ್ ಜೈನ್ ಎಂದು ಬಿಜೆಪಿ ಆರೋಪಿಸಿತ್ತು. ಬುಧವಾರ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ‘‘ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯವಹಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ಕ್ಕಿಂತ ಮೊದಲು ಅವರು ಎಲ್ಲೆಡೆ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಉತ್ತರ ಪ್ರದೇಶ ಎಲ್ಲರಿಗೂ ಕಾಣಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್‌‌ ಯಾದವ್, “ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರೊಂದಿಗೆ ಸೇರಿಸಲು ನೋಡುತ್ತಿದೆ. ಪಿಯೂಷ್ ಜೈನ್ ಅವರೊಂದಿಗಿನ ನಮಗೆ ಯಾವುದೆ ಸಂಬಂಧವಿಲ್ಲ. ಬಿಜೆಪಿಯು ಅವರದೇ ಉದ್ಯಮಿಯ ಮೇಲೆ ತಪ್ಪಾಗಿ ದಾಳಿ ಮಾಡಿದೆ” ಎಂದು ಹೇಳಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...