Homeಮುಖಪುಟಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

ಉತ್ತರಪ್ರದೇಶ ಚುನಾವಣೆ: ಸಮಾಜವಾದಿ ಮುಖಂಡರ ಮನೆ ಮೇಲೆ ಐಟಿ ರೈಡ್‌

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸುಗಂಧ ದ್ರವ್ಯಗಳ ಉದ್ಯಮಿಯೊಬ್ಬರ ಮನೆ, ಕಾರ್ಖಾನೆ ಮೇಲೆ ಆದಾಯ ಇಲಾಖೆ(ಐಟಿ) ದಾಳಿ ಮಾಡಿ ನೂರಾರು ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ಈ ನಡುವೆ ಶುಕ್ರವಾರ ಬೆಳಿಗ್ಗೆ ರಾಜ್ಯದ ಪ್ರತಿಪಕ್ಷ ಸಮಾಜವಾದಿ ಪಕ್ಷದ ನಾಯಕ ಪುಷ್ಪರಾಜ್‌ ಜೈನ್ ಅವರು ಕೂಡಾ ಐಟಿ ಇಲಾಖೆಯ ಅಧಿಕಾರಿಗಳಿಂದ ಶೋಧಿಸಲ್ಪಟ್ಟಿದ್ದಾರೆ.

ಪುಷ್ಪರಾಜ್‌ ಜೈನ್ ಅವರು ಸುಗಂಧ ದ್ರವ್ಯ, ಪೆಟ್ರೋಲ್ ಪಂಪ್‌ಗಳು ಮತ್ತು ಕೋಲ್ಡ್ ಸ್ಟೋರೇಜ್‌ಗಳನ್ನು ಹೊಂದಿರುವ ಉದ್ಯಮಿಯಾಗಿದ್ದಾರೆ. ಅವರು ಇತ್ತೀಚೆಗಷ್ಟೇ ತಮ್ಮ ಪಕ್ಷದ ಪ್ರಚಾರಕ್ಕಾಗಿ ‘ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ’ವನ್ನು ಬಿಡುಗಡೆ ಮಾಡಿದ್ದರು. ಇದೀಗ ಐಟಿ ಇಲಾಖೆಯು ಉತ್ತರ ಪ್ರದೇಶ, ದೆಹಲಿ ಮತ್ತು ಮುಂಬೈನಲ್ಲಿ ಅವರಿಗೆ ಸಂಬಂಧಿಸಿದ ಸುಮಾರು 50 ಸ್ಥಳಗಳನ್ನು ಶೋಧಿಸುತ್ತಿದೆ.

ಇದನ್ನೂ ಓದಿ:ಉತ್ತರ ಪ್ರದೇಶದ ಉದ್ಯಮಿ ಮನೆ ಮೇಲಿನ ದಾಳಿಗೆ ರಾಜಕೀಯ ಬಣ್ಣ: ತಪ್ಪಾಗಿ ನಡೆದ ದಾಳಿಯಲ್ಲ ಎಂದ ಏಜೆನ್ಸಿ

ಐಟಿ ದಾಳಿಯ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷ, “ಕಳೆದ ಬಾರಿ ಭಾರಿ ವೈಫಲ್ಯ ಹೊಂದಿತ್ತು. ಇದೀಗ ಬಿಜೆಪಿ ಕಟ್ಟಕಡೆಯ ಸ್ನೇಹಿತ ಐಟಿ ಇಲಾಕೆ ಕೊನೆಗೂ ಸಮಾಜವಾದಿ ಪಕ್ಷದ ಎಂಎಲ್‌ಸಿ ಪುಷ್ಪರಾಜ್‌‌ ಜೈನ್ ಮತ್ತು ಖನೌಜ್‌ನ ಇತರ ಸುಗಂಧ ದ್ರವ್ಯ ವ್ಯಾಪಾರಿಗಳ ಸ್ಥಳದ ಮೇಲೆ ದಾಳಿ ಮಾಡಿದೆ. ಹೆದರಿರುವ ಬಿಜೆಪಿ ಯುಪಿ ಚುನಾವಣೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಹಿರಂಗವಾಗಿ ದುರ್ಬಳಕೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ, ಅವರು ಮತದ ಮೂಲಕ ಉತ್ತರಿಸುತ್ತಾರೆ” ಎಂದು ಹೇಳಿದೆ.

ಐಟಿ ಇಲಾಖೆಯು ಇತ್ತೀಚೆಗೆ ಮತ್ತೋರ್ವ ಉದ್ಯಮಿ ಪಿಯೂಷ್ ಜೈನ್ ಅವರಿಗೆ ಸೇರಿದ ಕಾನ್ಪುರ ಮತ್ತು ಖನೌಜ್‌‌ನ ಕೆಲವು ಸ್ಥಳಗಳಿಂದ ಅಪಾರ ಪ್ರಮಾಣದ ನಗದು ಮತ್ತು ಚಿನ್ನಗಳನ್ನು ವಶಕ್ಕೆ ಪಡೆದಿತ್ತು. ಈ ವೇಳೆ 196 ಕೋಟಿ ರೂ. ನಗದು ಮತ್ತು 23 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ದೇಶದ ಪ್ರತಿಷ್ಠಿತ ಚುನಾವಣೆಯಾಗಿರುವ ಉತ್ತರ ಪ್ರದೇಶದಲ್ಲಿ ಈಗಾಗಲೇ ಎಲ್ಲಾ ಪಕ್ಷಗಳು ಪ್ರಚಾರಗಳನ್ನು ಪ್ರಾರಂಭಿಸಿವೆ. ಈ ಮಧ್ಯದಲ್ಲಿ ಈ ದಾಳಿಗಳು ನಡೆಯುತ್ತಿದ್ದು, ರಾಜಕೀಯವಾಗಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಬಿಜೆಪಿ ಮತ್ತು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್‌‌ ಜೈನ್‌ ಅವರನ್ನು ಬೆಂಬಲಿಸುತ್ತಿದೆ ಎಂದು ಪರಸ್ಪರ ಆರೋಪಿಸುತ್ತಿದೆ.

ಇದನ್ನೂ ಓದಿ:5 ನೇ ದಿನವೂ ಮುಂದುವರೆದ ಐಟಿ ದಾಳಿ; 200 ಕೋಟಿ ರೂ. ನಗದು ವಶಕ್ಕೆ!

ಸಮಾಜವಾದಿ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದವರು ಪಿಯೂಷ್ ಜೈನ್ ಎಂದು ಬಿಜೆಪಿ ಆರೋಪಿಸಿತ್ತು. ಬುಧವಾರ ಕಾನ್ಪುರದಲ್ಲಿ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ‘‘ನೋಟು ತುಂಬಿದ ಬಾಕ್ಸ್‌ಗಳು ಹೊರಬಂದಿವೆ. ಕಾನ್ಪುರದ ಜನರು ವ್ಯಾಪಾರ ಮತ್ತು ವ್ಯವಹಾರವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. 2017 ಕ್ಕಿಂತ ಮೊದಲು ಅವರು ಎಲ್ಲೆಡೆ ಎರಚಿದ್ದ ಭ್ರಷ್ಟಾಚಾರದ ಸುಗಂಧ ದ್ರವ್ಯ ಉತ್ತರ ಪ್ರದೇಶ ಎಲ್ಲರಿಗೂ ಕಾಣಿಸುತ್ತಿದೆ” ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಅಖಿಲೇಶ್‌‌ ಯಾದವ್, “ಬಿಜೆಪಿಯು ಉದ್ಯಮಿ ಪಿಯೂಷ್ ಜೈನ್ ಅವರನ್ನು ಸಮಾಜವಾದಿ ಪಕ್ಷದ ಪುಷ್ಪರಾಜ್ ಜೈನ್ ಅವರೊಂದಿಗೆ ಸೇರಿಸಲು ನೋಡುತ್ತಿದೆ. ಪಿಯೂಷ್ ಜೈನ್ ಅವರೊಂದಿಗಿನ ನಮಗೆ ಯಾವುದೆ ಸಂಬಂಧವಿಲ್ಲ. ಬಿಜೆಪಿಯು ಅವರದೇ ಉದ್ಯಮಿಯ ಮೇಲೆ ತಪ್ಪಾಗಿ ದಾಳಿ ಮಾಡಿದೆ” ಎಂದು ಹೇಳಿದ್ದರು.

ಇದನ್ನೂ ಓದಿ:ಯುಪಿ ಚುನಾವಣೆ-2022: ‘ಸ್ಮೆಲ್‌ ಆಫ್‌ ಸೋಶಿಯಲಿಸಂ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...