Homeಮುಖಪುಟಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

ಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ಮಾಹಿತಿ ತಂತ್ರಜ್ಞಾನ ನಿಯಮಗಳು, 2021ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮತ್ತು ಬಿಬಿಸಿ ಸಾಕ್ಷ್ಯಚಿತ್ರ ತಡೆಗೆ ಐಟಿ ನಿಯಮಗಳ ಅಡಿಯಲ್ಲಿನ ತುರ್ತು ಅಧಿಕಾರವನ್ನು ದುಪಯೋಗ ಮಾಡಿಕೊಂಡಿರುವುದನ್ನು ಖಂಡಿಸಿ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ) ಮತ್ತು ದೆಹಲಿ ಪತ್ರಕರ್ತರ ಒಕ್ಕೂಟ (ಡಿಯುಜೆ) ಜಂಟಿ ಹೇಳಿಕೆ ನೀಡಿವೆ.

ಡಿಯುಜೆ ಅಧ್ಯಕ್ಷ ಎಸ್.ಕೆ.ಪಾಂಡೆ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾತಾ ಮಾಧೋಕ್, ಎನ್‌ಎಜೆ ಪ್ರಧಾನ ಕಾರ್ಯದರ್ಶಿ ಎನ್. ಕೊಂಡಯ್ಯ, ಆಂಧ್ರಪ್ರದೇಶ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಎಪಿಡಬ್ಲ್ಯುಜೆಎಫ್‌) ಪ್ರಧಾನ ಕಾರ್ಯದರ್ಶಿ ಜಿ.ಆಂಜನೇಯುಲು ಅವರು ಸರ್ಕಾರದ ನಿಲುವುಗಳನ್ನು ಖಂಡಿಸಿದ್ದು, “ತುರ್ತು ಪರಿಸ್ಥಿತಿ ಕಾಲದ ಕ್ರಮಗಳನ್ನು ಜರುಗಿಸಲು ಸಾಧ್ಯವಿಲ್ಲ; ಪ್ರೆಸ್‌ ಇನ್ಫಾರ್ಮೆಷನ್ ಬ್ಯೂರೊ (ಪಿಐಬಿ) ಎಂದಿಗೂ ಪೊಲೀಸ್ ಇನ್‌ಫಾರ್ಮೆಷನ್ ಬ್ಯುರೊ ಆಗಿ ಬದಲಾಗಬಾರದು” ಎಂದು ಎಚ್ಚರಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಸರ್ಕಾರದ ಘಟಕವಾದ ‘ಪಿಐಬಿ’ ಯಾವ ಸುದ್ದಿಯನ್ನು ನಕಲಿ ಎನ್ನುತ್ತದೆಯೋ ಅದನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕಾನೂನು ತರಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಟಿದೆ.

“ಮಾಧ್ಯಮಗಳಿಗೆ ಸರ್ಕಾರಿ ಸುದ್ದಿಗಳನ್ನು ಒದಗಿಸುವುದು ಪಿಐಬಿಯ ಕೆಲಸವಾಗಿದೆ. ಆ ಜವಾಬ್ದಾರಿಯಲ್ಲಿಯೇ ಮುಂದುವರಿಯಬೇಕು. ಮಾಧ್ಯಮಗಳ ಮೇಲೆ ನಿಗಾ ಇಡುವುದು, ಸೆನ್ಸಾರ್ ಮಾಡುವುದು ಮತ್ತು ಸರ್ಕಾರಕ್ಕೆ ಅನನುಕೂಲಕರವಾದ ಯಾವುದೇ ಮಾಹಿತಿಯನ್ನು ‘ನಕಲಿ ಸುದ್ದಿ’ ಎಂದು ಗುರುತಿಸುವ ಕೆಲಸವನ್ನು ಪಿಐಪಿ ಮಾಡುವುದಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ನಡೆಯನ್ನು ‘ವಿಷಾದನೀಯ’ ಎಂದು ಪತ್ರಕರ್ತ ಸಂಸ್ಥೆಗಳು ಬಣ್ಣಿಸಿವೆ.

“ಮಾಧ್ಯಮ ವ್ಯಕ್ತಿಗಳಿಗೆ ಸರ್ಕಾರದ ಅಧಿಕೃತ ಮಾಹಿತಿಗಳನ್ನು ಸುಲಭವಾಗಿ ದೊರಕಿಸುವುದು ಪಿಐಬಿಯ ಕೆಲಸವಾಗಿದೆ. ಸರ್ಕಾರಿ ವಿಷಯಗಳ ಬಗ್ಗೆ ಮಾನ್ಯತೆ ಪಡೆದ ವಿಶೇಷ ವರದಿಗಾರರು ಕೇಳಿದಾಗ ಪಿಐಬಿ ಕೆಲವು ಸಂದರ್ಭಗಳಲ್ಲಿ ನಿರಾಕರಿಸಿರುವುದು ಆಘಾತಕಾರಿಯಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಐಟಿ ನಿಯಮಗಳು, 2021ರ ಕರಡು ತಿದ್ದುಪಡಿಗಳನ್ನು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ. “ಇದು ಅತ್ಯಂತ ಅನಿಯಂತ್ರಿತ ಮತ್ತು ಏಕಪಕ್ಷೀಯ” ಎಂದು ಬಣ್ಣಿಸಿವೆ.

ಇದಲ್ಲದೆ, ಐಟಿ ನಿಯಮಗಳಿಗೆ ತರುತ್ತಿರುವ ಇತ್ತೀಚಿನ ತಿದ್ದುಪಡಿಯು ಪಿಐಬಿ ಮಾತ್ರವಲ್ಲದೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೆನ್ಸಾರ್‌ಶಿಪ್ ಅಧಿಕಾರವನ್ನು ನೀಡುತ್ತಿದೆ. ಇವುಗಳು ಆಕ್ಷೇಪಿಸಿದ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ತೆಗೆದುಹಾಕಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಇದು ಸಣ್ಣ, ಸ್ವತಂತ್ರ ಡಿಜಿಟಲ್ ಮಾಧ್ಯಮಗಳನ್ನು ಸೆನ್ಸಾರ್ ಮಾಡುವ ಗುರಿಯನ್ನು ಹೊಂದಿರುವ ಕ್ರಮವೆಂದು ತೋರುತ್ತದೆ” ಎಂದು ಪತ್ರಿಕಾ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಒಕ್ಕೂಟಗಳ ಮೇಲೆ ಹೆಚ್ಚುತ್ತಿರುವ ದಾಳಿಯಿಂದ ತೀವ್ರವಾಗಿ ನೊಂದಿರುವುದಾಗಿ ಪತ್ರಕರ್ತರ ಸಂಸ್ಥೆಗಳು ತಿಳಿಸಿವೆ. “ಇದು ಪತ್ರಿಕಾ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಮೇಲಿನ ನಿರಂತರ ದಾಳಿಯ ಭಾಗವಾಗಿದೆ” ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...