Homeಮುಖಪುಟಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

ಐಟಿ ರೂಲ್ಸ್‌ ತಿದ್ದುಪಡಿ ಮಸೂದೆಗೆ ಪತ್ರಕರ್ತರ ಸಂಸ್ಥೆಗಳಿಂದ ಖಂಡನೆ

- Advertisement -
- Advertisement -

ಮಾಹಿತಿ ತಂತ್ರಜ್ಞಾನ ನಿಯಮಗಳು, 2021ಕ್ಕೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮತ್ತು ಬಿಬಿಸಿ ಸಾಕ್ಷ್ಯಚಿತ್ರ ತಡೆಗೆ ಐಟಿ ನಿಯಮಗಳ ಅಡಿಯಲ್ಲಿನ ತುರ್ತು ಅಧಿಕಾರವನ್ನು ದುಪಯೋಗ ಮಾಡಿಕೊಂಡಿರುವುದನ್ನು ಖಂಡಿಸಿ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟ (ಎನ್‌ಎಜೆ) ಮತ್ತು ದೆಹಲಿ ಪತ್ರಕರ್ತರ ಒಕ್ಕೂಟ (ಡಿಯುಜೆ) ಜಂಟಿ ಹೇಳಿಕೆ ನೀಡಿವೆ.

ಡಿಯುಜೆ ಅಧ್ಯಕ್ಷ ಎಸ್.ಕೆ.ಪಾಂಡೆ ಮತ್ತು ಪ್ರಧಾನ ಕಾರ್ಯದರ್ಶಿ ಸುಜಾತಾ ಮಾಧೋಕ್, ಎನ್‌ಎಜೆ ಪ್ರಧಾನ ಕಾರ್ಯದರ್ಶಿ ಎನ್. ಕೊಂಡಯ್ಯ, ಆಂಧ್ರಪ್ರದೇಶ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (ಎಪಿಡಬ್ಲ್ಯುಜೆಎಫ್‌) ಪ್ರಧಾನ ಕಾರ್ಯದರ್ಶಿ ಜಿ.ಆಂಜನೇಯುಲು ಅವರು ಸರ್ಕಾರದ ನಿಲುವುಗಳನ್ನು ಖಂಡಿಸಿದ್ದು, “ತುರ್ತು ಪರಿಸ್ಥಿತಿ ಕಾಲದ ಕ್ರಮಗಳನ್ನು ಜರುಗಿಸಲು ಸಾಧ್ಯವಿಲ್ಲ; ಪ್ರೆಸ್‌ ಇನ್ಫಾರ್ಮೆಷನ್ ಬ್ಯೂರೊ (ಪಿಐಬಿ) ಎಂದಿಗೂ ಪೊಲೀಸ್ ಇನ್‌ಫಾರ್ಮೆಷನ್ ಬ್ಯುರೊ ಆಗಿ ಬದಲಾಗಬಾರದು” ಎಂದು ಎಚ್ಚರಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಹೊರಟಿದೆ. ಸರ್ಕಾರದ ಘಟಕವಾದ ‘ಪಿಐಬಿ’ ಯಾವ ಸುದ್ದಿಯನ್ನು ನಕಲಿ ಎನ್ನುತ್ತದೆಯೋ ಅದನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕುವ ಕಾನೂನು ತರಲು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಹೊರಟಿದೆ.

“ಮಾಧ್ಯಮಗಳಿಗೆ ಸರ್ಕಾರಿ ಸುದ್ದಿಗಳನ್ನು ಒದಗಿಸುವುದು ಪಿಐಬಿಯ ಕೆಲಸವಾಗಿದೆ. ಆ ಜವಾಬ್ದಾರಿಯಲ್ಲಿಯೇ ಮುಂದುವರಿಯಬೇಕು. ಮಾಧ್ಯಮಗಳ ಮೇಲೆ ನಿಗಾ ಇಡುವುದು, ಸೆನ್ಸಾರ್ ಮಾಡುವುದು ಮತ್ತು ಸರ್ಕಾರಕ್ಕೆ ಅನನುಕೂಲಕರವಾದ ಯಾವುದೇ ಮಾಹಿತಿಯನ್ನು ‘ನಕಲಿ ಸುದ್ದಿ’ ಎಂದು ಗುರುತಿಸುವ ಕೆಲಸವನ್ನು ಪಿಐಪಿ ಮಾಡುವುದಲ್ಲ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಸರ್ಕಾರದ ನಡೆಯನ್ನು ‘ವಿಷಾದನೀಯ’ ಎಂದು ಪತ್ರಕರ್ತ ಸಂಸ್ಥೆಗಳು ಬಣ್ಣಿಸಿವೆ.

“ಮಾಧ್ಯಮ ವ್ಯಕ್ತಿಗಳಿಗೆ ಸರ್ಕಾರದ ಅಧಿಕೃತ ಮಾಹಿತಿಗಳನ್ನು ಸುಲಭವಾಗಿ ದೊರಕಿಸುವುದು ಪಿಐಬಿಯ ಕೆಲಸವಾಗಿದೆ. ಸರ್ಕಾರಿ ವಿಷಯಗಳ ಬಗ್ಗೆ ಮಾನ್ಯತೆ ಪಡೆದ ವಿಶೇಷ ವರದಿಗಾರರು ಕೇಳಿದಾಗ ಪಿಐಬಿ ಕೆಲವು ಸಂದರ್ಭಗಳಲ್ಲಿ ನಿರಾಕರಿಸಿರುವುದು ಆಘಾತಕಾರಿಯಾಗಿದೆ” ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಐಟಿ ನಿಯಮಗಳು, 2021ರ ಕರಡು ತಿದ್ದುಪಡಿಗಳನ್ನು ಹಲವಾರು ವಿರೋಧ ಪಕ್ಷಗಳು ಟೀಕಿಸಿವೆ. “ಇದು ಅತ್ಯಂತ ಅನಿಯಂತ್ರಿತ ಮತ್ತು ಏಕಪಕ್ಷೀಯ” ಎಂದು ಬಣ್ಣಿಸಿವೆ.

ಇದಲ್ಲದೆ, ಐಟಿ ನಿಯಮಗಳಿಗೆ ತರುತ್ತಿರುವ ಇತ್ತೀಚಿನ ತಿದ್ದುಪಡಿಯು ಪಿಐಬಿ ಮಾತ್ರವಲ್ಲದೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೆನ್ಸಾರ್‌ಶಿಪ್ ಅಧಿಕಾರವನ್ನು ನೀಡುತ್ತಿದೆ. ಇವುಗಳು ಆಕ್ಷೇಪಿಸಿದ ಸುದ್ದಿಗಳನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ತೆಗೆದುಹಾಕಬೇಕಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಇದು ಸಣ್ಣ, ಸ್ವತಂತ್ರ ಡಿಜಿಟಲ್ ಮಾಧ್ಯಮಗಳನ್ನು ಸೆನ್ಸಾರ್ ಮಾಡುವ ಗುರಿಯನ್ನು ಹೊಂದಿರುವ ಕ್ರಮವೆಂದು ತೋರುತ್ತದೆ” ಎಂದು ಪತ್ರಿಕಾ ಸಂಸ್ಥೆಗಳು ಆಕ್ಷೇಪ ವ್ಯಕ್ತಪಡಿಸಿವೆ.

ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಒಕ್ಕೂಟಗಳ ಮೇಲೆ ಹೆಚ್ಚುತ್ತಿರುವ ದಾಳಿಯಿಂದ ತೀವ್ರವಾಗಿ ನೊಂದಿರುವುದಾಗಿ ಪತ್ರಕರ್ತರ ಸಂಸ್ಥೆಗಳು ತಿಳಿಸಿವೆ. “ಇದು ಪತ್ರಿಕಾ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಮೇಲಿನ ನಿರಂತರ ದಾಳಿಯ ಭಾಗವಾಗಿದೆ” ಎಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...